ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ

  • ಕಾರ್ಕಳ: ದಿನಾಂಕ 02/01/2023 ರಂದು 11:00 ಗಂಟೆಗೆ  ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಪಾಜಿಗುಡ್ಡೆ ಎಂಬಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿಯ ಇಳಿಜಾರಿನಲ್ಲಿ KA06B9684 ನೇ ನಂಬ್ರದ ಬಸ್ ಚಾಲಕ ಮಂಜಯ್ಯ ನಾಯ್ಕ್ ಎಂಬಾತನು ತನ್ನ ಬಾಬ್ತು ಬಸ್ ನ್ನು  ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ರಸ್ತೆಯ ತೀರಾ ತಿರುವಿನಲ್ಲಿ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಹತೋಟಿ ತಪ್ಪಿ ರಸ್ತೆಗೆ ಎಡಮಗ್ಗುಲಾಗಿ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 20 ಮಕ್ಕಳು ಹಾಗೂ ಶಿಕ್ಷಕರಿಗೆ ರಕ್ತಗಾಯ ಹಾಗೂ ತರಚಿದ ಗಾಯವಾಗಿದ್ದು,ಇನ್ನು  ಕೆಲವು ಮಕ್ಕಳಿಗೆ ಗುದ್ದಿದ್ದ ನೋವಾಗಿರುತ್ತದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 02/2023 ಕಲಂ 279, 337  ಐಪಿಸಿ ಯಂತೆ  ಪ್ರಕರಣ ದಾಖಲಾಗಿರುತ್ತದೆ.

 

ಅಸ್ವಾಭಾವಿಕ ಮರಣ ಪ್ರಕರಣ ‌‌

  • ಮಲ್ಪೆ: ಪಿರ್ಯಾಧಿ ಯೋಗೇಂದ್ರ ಇವರ ಅಣ್ಣ ಪ್ರವೀಣಕುಮಾರ (41 ವರ್ಷ) ಎಂಬುವವರು ವಿಪರೀತ ಮದ್ಯ ವ್ಯಸನಿಯಾಗಿದ್ದು ಸರಿಯಾಗಿ ಮನೆಗೆ ಹೋಗದೆ ಮಲ್ಪೆಯಲ್ಲಿ ತಿರುಗಾಡಿಕೊಂಡಿದ್ದು ದಿನಾಂಕ 01-01-2023 ರಂದು ಮದ್ಯರಾತ್ರಿ 12:30 ಗಂಟೆ ಸುಮಾರಿಗೆ ಮಲ್ಪೆ ಬಸ್ ಸ್ಟ್ಯಾಂಡ್ ಹತ್ತಿರ ಒಂದು ಅಂಗಡಿ ಬಳಿ ನಿಂತಿರುವಾಗ ಏಕಾಏಕಿ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಅವರ ತಲೆಗೆ ಅಂಗಡಿಯ ಶಟರ್ ಗೆ ತಾಗಿ ಬಿದ್ದವರನ್ನು ಮಲ್ಪೆಯ ಈಶ್ವರ ಪುತ್ರನ್ ಎಂಬುವವರು ತಮ್ಮ ಅಂಬುಲೆನ್ಸ್ ನಲ್ಲಿ ಚಿಕಿತ್ಸೆಯ ಬಗ್ಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಸದ್ರಿ ಯವರು ಚಿಕಿತ್ಸೆ ಫಲಕಾರಿಯಾಗದೆ ಸಂಜೆ 07:50 ಗಂಟೆಗೆ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆ ಯು.ಡಿ.ಆರ್ 01/2023 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.
  • ಕಾರ್ಕಳ: ಕಾರ್ಕಳ ತಾಲೂಕು ಮಾಳ ಗ್ರಾಮದ ಕಡಾರಿ ಪೂರ್ವಿಕ ನಿವಾಸದಲ್ಲಿ ವಾಸವಾಗಿರುವ ಪಿರ್ಯಾದು ಪೂರ್ಣೆಶ್ ಇವರ ತಂದೆ ಮೃತ ಕೆ ಪೂವಯ್ಯ (66) ಇವರಿಗೆ 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆ(BYPASS SURGERY ) ಆಗಿದ್ದು ನಾಲ್ಕು ದಿನದಿಂದ ಜ್ವರದಿಂದ ಬಳಲುತ್ತಿದ್ದು ಈ ಬಗ್ಗೆ  ಬಜಗೋಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು  ದಿನಾಂಕ 01/01/2023 ರಂದು ಕೆ ಪೂವಯ್ಯ ಊಟ ಮಾಡಿ ಮಲಗಿದ್ದು ಈ ದಿನ ದಿನಾಂಕ 02/01/2023 ಬೆಳಿಗ್ಗೆ ಸುಮಾರು 04:00 ಗಂಟೆಗೆ ಶ್ವಾಸ ತೆಗೆಯಲು ಕಷ್ಟವಾಗಿರುವುದಾಗಿ ತಿಳಿಸಿದಂತೆ ಕೂಡಲೇ  ಅವರನ್ನು ಉಪಚರಿಸಿ ಚಿಕಿತ್ಸೆಯ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಲ್ಲಿ ಅಲ್ಲಿನ ವೈದ್ಯರು ಪಿರ್ಯಾದುದಾರರ ತಂದೆ ಕೆ ಪೂವಯ್ಯ ನಾಯ್ಕ್ ರವರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಯು.ಡಿ.ಆರ್ 01/2023 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.
  • ಕಾರ್ಕಳ: ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಟಿ.ಟಿ ಕ್ರಾಸ್‌ ನ ಕುಂಟಿನಿ ನಿವಾಸದಲ್ಲಿ ವಾಸವಾಗಿರುವ ಪಿರ್ಯಾದಿ ವೆಂಕಟೇಶ್‌ ಇವರ ಭಾವ ವಿರೇಂದ್ರ ಪ್ರಾಯ 44 ವರ್ಷ ಇವರು ವಿಪರೀತ ಮಧ್ಯ ಸೇವನೆ ಮಾಡುತ್ತಿದ್ದು, ಇದರಿಂದ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು.  ದಿನಾಂಕ 30/12/2022 ರಂದು ವಿರೇಂದ್ರರವರು ಪಿರ್ಯಾದಿದಾರರ ಮನೆಯಾದ ಕಾರ್ಕಳ ತಾಲೂಕು ಬೆಳ್ಮಣ್‌ ಗ್ರಾಮದ ಜಂತ್ರಕ್ಕೆ ಬಂದಿದ್ದು, ಮಾನಸಿಕವಾಗಿ ನೊಂದು ದಿನಾಂಕ 31/12/2022 ರ ಬೆಳಿಗ್ಗೆ 03:30 ಗಂಟೆಯಿಂದ ದಿನಾಂಕ 02/01/2023 ರ ಬೆಳಿಗ್ಗೆ 08:00 ಗಂಟೆಯ ನಡುವಿನ ಅವಧಿಯಲ್ಲಿ  ಪಿರ್ಯಾದಿದಾರರ ಮನೆಯ ಬಳಿ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಯು.ಡಿ.ಆರ್ 02/2023 ಕಲಂ: 174 ಸಿ.ಆರ್‌.ಪಿ.ಸಿ  ಯಂತೆ ಪ್ರಕರಣ ದಾಖಲಿಸಲಾಗಿದೆ.

 

ಇತ್ತೀಚಿನ ನವೀಕರಣ​ : 02-01-2023 06:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080