ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಬ್ರಹ್ಮಾವರ: ಪಿರ್ಯಾದಿದಾರರಾದ ಆಫ್ರೀನ್‌ ಬಾನು (27), ಗಂಡ: ಪರ್ವೇಜ್‌ ಅಹಮ್ಮದ್‌, ವಾಸ: 11/56, ಸಾಲಿಹಾತ್‌ ಶಾಲೆಯ ಹಿಂಭಾಗ, ಹೂಡೆ, ಮಲ್ಪೆ, ಪಡುತೋನ್ಸೆ ಗ್ರಾಮ, ಉಡುಪಿ ತಾಲೂಕು ಇವರು ಹೂಡೆಯ ಗಂಡನ ಮನೆಯಲ್ಲಿದ್ದು, ದಿನಾಂಕ 28/01/2023 ಮತ್ತು 29/01/2023 ರಂದು ಹೊನ್ನಾಳದಲ್ಲಿರುವ  ತಾಯಿಯಿ ಮನೆಯ ಹತ್ತಿರದಲ್ಲಿದ್ದ ಸಂಬಂಧಿಕರ  ಮನೆಯಲ್ಲಿ ಮದುವೆಯ ಸಮಾರಂಭಗಳನ್ನು ಮುಗಿಸಿ, ದಿನಾಂಕ 30/01/2023 ರಂದು ಹೂಡೆಯಲ್ಲಿರುವ ಗಂಡನ ಮನೆಗೆ ಹೋಗುವ ಸಲುವಾಗಿ ಮೈದುನ ಫರಾಜ್‌ ತೋನ್ಸೆ ಯವರನ್ನು ಬರಲು ಹೇಳಿದಂತೆ, ಅವರು ಅವರ KA-04-MA-6243 ನಂಬ್ರದ ಮಾರುತಿ 800 ಕಾರನ್ನು ತಂದಿದ್ದು, ಪಿರ್ಯಾದಿದಾರರು ಮದುವೆಗೆಂದು ಲಾಕರ್‌ನಿಂದ ತಂದಿದ್ದ  ನೂರಾ ಎಂಬತ್ತೂವರೆ (180 ½ ) ಗ್ರಾಂ ತೂಕದ ಚಿನ್ನಾಭರಣಗಳನ್ನು ಬೆನ್ನಿಗೆ ಹಾಕುವ ಸ್ಕೂಲ್‌ ಬ್ಯಾಗ್‌ನಲ್ಲಿರಿಸಿ, ಅದನ್ನು ಕಾರಿನ ಹಿಂಬದಿ ಸೀಟಿನಲ್ಲಿ ದೊಡ್ಡ ಲಗ್ಗೇಜ್‌ ಬ್ಯಾಗಿನ ಮೇಲಿಟ್ಟು ಕಾರಿನಲ್ಲಿ ಕುಳಿತುಕೊಳ್ಳುವಾಗ, ಅವರ ತಾಯಿ ಮನೆಯೊಳಗೆ ಬಂದು ಚಾ ಕುಡಿದು ಹೋಗಿ ಎಂದು ಕರೆದಾಗ, ಮೈದುನ ಮತ್ತು ಪಿರ್ಯಾದಿದಾರರು ಮನೆಯೊಳಗೆ ಹೋಗಿ ಚಾ ಕುಡಿದು 15 ನಿಮಿಷದಲ್ಲಿ ಹೊರಗೆ ಬಂದು ಹೋಡೆಯ ಗಂಡನ ಮನೆಗೆ ಹೋಗಿ ಬ್ಯಾಗನ್ನು ಮನೆಯೊಳಗಿಟ್ಟು, ನಂತರ ಸಂಜೆ  18:30 ಗಂಟೆ ಸಮಯಕ್ಕೆ ಬ್ಯಾಗನ್ನು ಓಪನ್‌ ಮಾಡಿ ನೋಡುವಾಗ, ಅದರಲ್ಲಿಟ್ಟಿದ್ದ  7,26,000/- ರೂಪಾಯಿ ಮೌಲ್ಯದ 180 ½ (ನೂರಾ ಎಂಬತ್ತೂವರೆ) ಗ್ರಾಂ ತೂಕದ ಚಿನ್ನಾಭರಣಗಳು ಕಾಣೆಯಾಗಿತ್ತು.  ಚಿನ್ನಾಭರಣಗಳನ್ನು ಯಾರೋ ಕಳ್ಳರು 16:10 ಗಂಟೆಯಿಂದ 18:30 ಗಂಟೆಯ ನಡುವೆ ಕಳವು ಮಾಡಿಕೊಂಡು ಹೋಗಿರ ಬಹುದಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 15/2023: ಕಲಂ 379  ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

  • ಉಡುಪಿ: ದಿನಾಂಕ 30/01/2023 ರಂದು ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಉಪೇಂದ್ರ ಪೈ ಮೆಮೋರಿಯಲ್ ಸರ್ಕಲ್‌ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಜ್ಞಾನೇಶ್ವರ, ಪ್ರಾಯ 28 ಎಂಬಾತನನ್ನು ಅಶೋಕ, ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು ವಶಕ್ಕೆ ಪಡೆದು,  ಮೆಡಿಕಲ್ ತಪಾಸಣೆಗೊಳಪಡಿಸಿ ದಿನಾಂಕ 02/02/2023  ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನುಸ್ವೀಕರಿಸಿ, ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 17/2023 ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ರಂತೆ ಪ್ರಕರಣ ದಾಖಲಾಗಿರುತ್ತದೆ .
  • ಉಡುಪಿ: ದಿನಾಂಕ 30/01/2023 ರಂದು ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಎಂ.ಪಿ ಪಾರ್ಕ್ ಅಪಾರ್ಟ್‌ಮೆಂಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಹರ್ಷ ವರ್ಧನ್ ಮಿಶ್ರಾ ಪ್ರಾಯ 22 ಎಂಬಾತನನ್ನು ಅಶೋಕ, ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿದ್ದು, ದಿನಾಂಕ 02/02/2023  ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನುಸ್ವೀಕರಿಸಿ, ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 18/2023 ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ  ಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ: 30.01.2023 ರಂದು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವುಡ್ ವಿಂಗ್ಸ್ ಅಪಾರ್ಟ್‌ಮೆಂಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತುವನ್ನು ಸೇವಿಸಿರುವಂತೆ ಕಂಡು ಬಂದ ಹೇಮನ್ಯ ದೇವ್ ಸಿಂಗ್ ರಾಣಾವತ್, ಪ್ರಾಯ 20 ಎಂಬಾತನನ್ನು ಅಶೋಕ, ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ, ಉಡುಪಿ ಇವರು ವಶಕ್ಕೆ ಪಡೆದು, ಮೆಡಿಕಲ್ ತಪಾಸಣೆಗೊಳಪಡಿಸಿದ್ದು,  ದಿನಾಂಕ 02/02/2023  ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ಬಂದಿರುವ ತಜ್ಞ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 19/2023 ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ  ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 02-02-2023 06:14 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080