ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ 

  • ಪಡುಬಿದ್ರಿ: ಪಿರ್ಯಾದಿದಾರರಾದ ರಕ್ಷಿತ್ (19) ,ತಂದೆ: ಭಾಸ್ಕರ ಪೂವಪ್ಪ ,ವಾಸ: ಮನೆ ನಂಬ್ರ .2 ಸ್ಥಾಯಿ ಕೃಪಾ ಅಪಾರ್ಟ್ ಮೆಂಟ್ ಬಡಾ ಎರ್ಮಾಳ್ ಗ್ರಾಮ, ಉಚ್ಚಿಲ ಅಂಚೆ, ಕಾಪು ತಾಲೂಕು ಇವರ ತಂದೆ ಭಾಸ್ಕರ್ ಪೂವಪ್ಪ ಪೂಜಾರಿ (66) ಎಂಬುವವರು ಎರ್ಮಾಳು ತೆಂಕ ಕೆನಾರಾ ಶಾಲೆ ಬಳಿ ಕ್ಯಾಂಟಿನ್ ಉದ್ಯಮ ನಡೆಸಿಕೊಂಡಿದ್ದು, 10 ದಿನದಿಂದ ಎದೆನೋವು ಇರುವುದರಿಂದ ಪಡುಬಿದ್ರಿ ದೇವಾಡಿಗ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದವರು. ದಿನಾಂಕ 01/05/2021 ರಂದು ರಾತ್ರಿ 11:45 ಗಂಟೆಗೆ ಮನೆಯಲ್ಲಿ ಇದ್ದಕಿದಂತೆ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಯ ಬಗ್ಗೆ ಒಂದು ಖಾಸಗಿ ಕಾರಿನಲ್ಲಿ ಪಿರ್ಯಾದಿದಾರರು ಹಾಗೂ ಪಿರ್ಯಾದಿದಾರರ ತಾಯಿಯವರು ಉಡುಪಿ TMA ಪೈ ಆಸ್ಫತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಭಾಸ್ಕರ ಪೂವಪ್ಪ ಪೂಜಾರಿಯವರು ಮೃತಪಟ್ಟಿರುವುದಾಗಿ ಬೆಳಿಗ್ಗೆ. 01:40 ಗಂಟೆಗೆ ತಿಳಿಸಿರುತ್ತಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 11/2021, ಕಲಂ: 174 ಸಿ.ಆರ್.‌ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ 

  • ಕುಂದಾಪುರ : ದಿನಾಂಕ 01/05/2021 ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಜಕುಮಾರ್‌ ಇವರು ಕೋವಿಡ್‌-19 ವೈರಾಣು ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಣದ ಸಂಬಂಧ ಮುಂಜಾಗ್ರತಾ ಕ್ರಮದ ಬಗ್ಗೆ ರೌಂಡ್ಸ್‌ ಕರ್ತವ್ಯದಲ್ಲಿರುವ ವೇಳೆ ಬಳ್ಕೂರು ಗ್ರಾಮದ ಮೇಲ್‌‌‌ ಬಳ್ಕೂರು ಎಂಬಲ್ಲಿರುವ ಪಂಜುರ್ಲಿ ಪ್ರಸನ್ನ ಹೆಸರಿನ ಕೋಳಿ ಅಂಗಡಿಯಲ್ಲಿ ಆರೋಪಿತರಾದ 1)ರಘು ಪೂಜಾರಿ (45), ತಂದೆ: ಕೂಸ ಪೂಜಾರಿ, ವಾಸ: ಮೇಲ್‌‌ ಬಳ್ಕೂರು, ಶಾಲೆಯ ಬಳಿ, ಬಳ್ಕೂರು ಗ್ರಾಮ, ಕುಂದಾಪುರ ತಾಲೂಕು,2)ಶ್ರೀಮತಿ ಗಿರಿಜ, (42), ಗಂಡ: ರಘು ಪೂಜಾರಿ, ವಾಸ: , ವಾಸ: ಮೇಲ್‌‌ ಬಳ್ಕೂರು, ಶಾಲೆಯ ಬಳಿ, ಬಳ್ಕೂರು ಗ್ರಾಮ, ಕುಂದಾಪುರ ತಾಲೂಕು ಇವರು ಮುಖಕ್ಕೆ ಮಾಸ್ಕ್‌‌ ಹಾಕದೆ, ಸಾಮಾಜಿಕ ಅಂತರ ಕಾಪಾಡದೆ, ಕೋವಿಡ್‌-19 ಸಂಬಂಧ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸದೆ, ಜನರಿಗೆ ಕೋಳಿ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದು ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 25/2021 ಕಲಂ: 269, 271 ಐಪಿಸಿ ಮತ್ತು ಕಲಂ: 5 (1), (4) THE KARNATAKA EPIDEMIC DISEASES ACT- 2020 ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಅಮಾಸೆಬೈಲು: ದಿನಾಂಕ 02/05/2021 ಸುಬ್ಬಣ್ಣ ಬಿ, ಪೊಲೀಸ್ ಉಪನಿರೀಕ್ಷಕರು ಅಮಾಸೆಬೈಲು ಪೊಲೀಸ್ ಠಾಣೆ ಇವರು ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 26/04/2021 ರಿಂದ 12/05/2021 ರವರೆಗೆ ಕೋವಿಡ್ ಕರ್ಪ್ಯೂ ವಿಧಿಸಿದ್ದು ಕರ್ಪ್ಯೂ ಜ್ಯಾರಿಗೊಳಿಸುವ ಬಗ್ಗೆ ಹೊರಡಿಸಿದ ಆದೇಶದಂತೆ ರೌಂಡ್ಸ್ ಕರ್ತವ್ಯದಲ್ಲಿದ್ದು ಕುಂದಾಪುರ ತಾಲೂಕು ಹೊಸಂಗಡಿ ಗ್ರಾಮದ KPC ಕಾಲೋನಿಯ ಬಳಿಯಲ್ಲಿ ತೆರಳಿ ಅವಶ್ಯ ವಸ್ತುಗಳ ಖರೀದಿಯ ಅಂಗಡಿಯನ್ನು ತಪಾಸಣೆ ಮಾಡುತ್ತಿರುವ ಸಮಯ ಹೊಸಂಗಡಿ ಗ್ರಾಮದ ಕೆ ಪಿ ಸಿ ಕಾಲೋನಿಯ ಅನೀಶ್ ಎಂಬವರ KR ಸ್ಟೋರ್ ಎಂಬ ಸ್ಟೇಶನರಿ ಅಂಗಡಿಯ ಮಾಲಕರಾದ ಆರೋಪಿ ಅನೀಶ್ (38),ತಂದೆ:ಕೆ. ವಿ ರಾಮನ್, ವಾಸ:ಕೆ ಪಿ ಸಿ ಕಾಲೋನಿ ಹೊಸಂಗಡಿ, ಹೊಸಂಗಡಿ ಗ್ರಾಮ ಇವರು ತನ್ನ ಸ್ಟೇಶನರಿ ಅಂಗಡಿಯನ್ನು ವ್ಯಾಪಾರದ ಬಗ್ಗೆ ತೆರೆದು ವ್ಯಾಪಾರ ಮಾಡುತ್ತಿದ್ದು. ಕೋವಿಡ್ – 2019 ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ಕೊವಿಡ್ ಮಹಾ ಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಕನ್ನು ರಡುವ ಸಂಭವವಿದೆಯೆಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಸ್ಟೇಶನರಿ ಸಾಮಾಗ್ರಿ ಅಂಗಡಿಯನ್ನು ತೆರೆದುಕೊಂಡಿದ್ದು ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 10/2021 ಕಲಂ:269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 02-05-2021 06:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080