Feedback / Suggestions

ಅಸ್ವಾಭಾವಿಕ ಮರಣ ಪ್ರಕರಣ

  • ಬೈಂದೂರು: ದಿನಾಂಕ 01/09/2022 ರಂದು ಮಧ್ಯಾಹ್ನ 1:30 ಗಂಟೆಗೆ ಪಿರ್ಯಾದಿದಾರರಾದ ಗಣೇಶ್ ಖಾರ್ವಿ (46), ತಂದೆ: ದಿ .ಶೇಷ ಖಾರ್ವಿ, ವಾಸ: ಮೋಟಿಮನೆ ಕಿರಿಮಂಜೇಶ್ವರ ಗ್ರಾಮ ಬೈಂದೂರು ತಾಲೂಕು ಇವರು ರಾಮಚಂದ್ರ ರವರ ದೋಣಿಯಲ್ಲಿ ಮೀನುಗಾರಿಕೆ ಕೆಲಸದ ಬಗ್ಗೆ ಅವರ ತಮ್ಮ ಸತೀಶ್  ಖಾರ್ವಿ (44)  ಹಾಗೂ ರಾಮ ಚಂದ್ರ ಖಾರ್ವಿ ರವರೊಂದಿಗೆ  ಕೊಡೇರಿ ಬಂದರಿನಿಂದ ದೋಣಿಯಲ್ಲಿ ಬಲೆಯೊಂದಿಗೆ ಮೀನು ಹಿಡಿಯಲು ಅರಬ್ಬಿ ಸಮುದ್ರಕ್ಕೆ  ಹೋಗಿ  3:45 ಗಂಟೆಗೆ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವ ಸಮಯ ದೊಡ್ಡದಾದ ನೀರಿನ ಅಲೆ ಬಂದು ದೋಣಿಗೆ ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಸತೀಶ್ ಖಾರ್ವಿರವರು  ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದು  ದೋಣಿಯಲ್ಲಿದ್ದ ಪಿರ್ಯಾದಿದಾರರು ಹಾಗೂ ರಾಮಚಂದ್ರ ಖಾರ್ವಿ ಯವರು ಸತೀಶ್ ಖಾರ್ವಿ ಯವರನ್ನು ಸಮುದ್ರದ ನೀರಿನಿಂದ ಮೇಲಕ್ಕೆ ಎತ್ತಿ ಕೋಡೇರಿ ಬಂದರಿಗೆ ದೋಣಿಯಲ್ಲಿ ಕರೆ ತಂದು ನಂತರ  ರಿಕ್ಷಾದಲ್ಲಿ ಚಿಕಿತ್ಸೆ ಬಗ್ಗೆ ಕಿರಿಮಂಜೇಶ್ವರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ  ವೈದ್ಯರು ಸತೀಶ್ ಖಾರ್ವಿಯವರನ್ನು ಪರೀಕ್ಷೀಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಹೆಚ್ಚಿನ ಚಿಕಿತ್ಸೆ ಬಗ್ಗೆ ಕುಂದಾಪುರಕ್ಕೆ ಹೋಗುವಂತೆ ಸೂಚಿಸಿದ ಮೇರೆಗೆ  ಪಿರ್ಯಾದಿದಾರರು ಸತೀಶ್ ಖಾರ್ವಿಯವರನ್ನು 108 ವಾಹನದಲ್ಲಿ  17:00 ಗಂಟೆಗೆ ಕುಂದಾಪುರ ವಿನಯ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ  ಕರೆದು ಕೊಂಡು ಹೋದಲ್ಲಿ ವೈದ್ಯರು ಸತೀಶ್ ಖಾರ್ವಿ ಯವರನ್ನು ಪರೀಕ್ಷೀಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 49/2022 ಕಲಂ: 174 ಸಿ.ಆರ್.ಪಿ. ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.     

ಇತರ ಪ್ರಕರಣ

  • ಉಡುಪಿ: ದಿನಾಂಕ  30/08/2022 ರಂದು ಮಹೇಶ್‌ ಟಿ.ಎಂ, ಪೊಲೀಸ್‌ ಉಪನಿರೀಕ್ಷಕರು, ಉಡುಪಿ ನಗರ ಠಾಣೆ ಇವರು  ರೌಂಡ್ಸನಲ್ಲಿರುವಾಗ  ಉಡುಪಿ  ತಾಲೂಕು  ಶಿವಳ್ಳಿ  ಗ್ರಾಮದ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ  ಸ್ಥಳದಲ್ಲಿ ಓರ್ವ ಯುವಕನು ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ ದೊರೆತಂತೆ ಸ್ಥಳಕ್ಕೆ ತಲುಪಿ ಆಪಾದಿತ  ಆಶೀಕ್ (22) ಎಂಬಾತನನ್ನು ವಶಕ್ಕೆ ಪಡೆದು, ಆತನು  ಗಾಂಜಾ  ಸೇವಿಸಿರುವ ಬಗ್ಗೆ  ಫಾರೆನ್ಸಿಕ್‌ ಮೆಡಿಸಿನ್‌ ವಿಭಾಗ, ಕೆ.ಎಂ.ಸಿ. ಮಣಿಪಾಲ ಇಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ತಜ್ಞ ವರದಿ ಪಡೆಯಲಾಗಿ ಆಪಾದಿತನು  ಗಾಂಜಾ ಸೇವಿಸಿರುವುದು  ದೃಢಪಟ್ಟಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 136/2022 ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾಪು: ದಿನಾಂಕ 29/08/2022 ರಂದು ಶ್ರೀಶೈಲ ಮುರಗೋಡ, ಪೊಲೀಸ್‌ ಉಪನಿರೀಕ್ಷಕರು, ಕಾಪು ಪೊಲೀಸ್ ಠಾಣೆ ಇವರು ರೌಂಡ್ಸ್ ಕರ್ತವ್ಯದಲ್ಲಿರುವಾಗ  ಕಾಪು ಪಡು ಗ್ರಾಮದ ಬಂಗ್ಲೆಗುಡ್ಡೆ ಮೈದಾನದ ಬಳಿ ಅನುಮಾನಾಸ್ಪದ ಓರ್ವ ವ್ಯಕ್ತಿ ಕಂಡು ಬಂದಿದ್ದು ಆತನು ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಆತನ ಬಳಿ ಹೋಗಿ ಪರಿಶೀಲಿಸಿದಾಗ ಅವನು  ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತನ ಹೆಸರು ಇಸ್ರಾರ್ ತಜ್ಮಲ್ ಹುಸೇನ್ ಶೇಕ್(32) ಎಂದು ತಿಳಿಸಿದ್ದು, ಆತನನ್ನು ವೈದ್ಯಕೀಯ ಪರೀಕ್ಷೆಗೆ ಪ್ರೊಫೆಸರ್ ಅಂಡ್ ಹೆಡ್  ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ  ಮಣಿಪಾಲ  ಇವರ  ಮುಂದೆ  ಹಾಜರು ಪಡಿಸಿದ್ದು, ಪರೀಕ್ಷಿಸಿದ ವೈದ್ಯರು ದಿನಾಂಕ 01/09/2022 ರಂದು ಇಸ್ರಾರ್ ತಜ್ಮಲ್ ಹುಸೇನ್ ಶೇಕ್ ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿರುತ್ತಾರೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 96/2022 ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ 30/08/2022 ರಂದು ವಾಸಪ್ಪ ನಾಯ್ಕ್,  ಪೊಲೀಸ್‌ ಉಪನಿರೀಕ್ಷಕರು (ತನಿಖೆ -2),  ಉಡುಪಿ ನಗರ ಪೊಲೀಸ್‌ ಠಾಣೆ ಇವರು ಸಿಬ್ಬಂದಿಯವರೊಂದಿಗೆ  ರೌಂಡ್ಸನಲ್ಲಿರುವಾಗ  ಉಡುಪಿ  ತಾಲೂಕು  ಶಿವಳ್ಳಿ  ಗ್ರಾಮದ ಕಡಿಯಾಳಿ ದೇವಸ್ಥಾನದ ಸಾರ್ವಜನಿಕ  ಸ್ಥಳದಲ್ಲಿ ಓರ್ವ ಯುವಕನು ಗಾಂಜಾ ಸೇವನೆ ಮಾಡುತ್ತಿರುವುದಾಗಿ ಮಾಹಿತಿ  ದೊರೆತಂತೆ ಆಪಾದಿತ ಅತೀಶ್ (25) ಎಂಬಾತನನ್ನು ವಶಕ್ಕೆ ಪಡೆದು, ಆತನು  ಗಾಂಜಾ  ಸೇವಿಸಿರುವ ಬಗ್ಗೆ  ಫಾರೆನ್ಸಿಕ್‌  ಮೆಡಿಸಿನ್‌  ವಿಭಾಗ, ಕೆ.ಎಂ.ಸಿ. ಮಣಿಪಾಲ ಇಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಈ ದಿನ ತಜ್ಞ ವರದಿ ಪಡೆಯಲಾಗಿ ಆಪಾದಿತನು ನಿಷೇಧಿತ ಗಾಂಜಾ ಸೇವಿಸಿರುವುದು  ದೃಢಪಟ್ಟಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 137/2022, ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.   

Last Updated: 02-09-2022 09:55 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080