ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣ

  • ಬೈಂದೂರು: ಪಿರ್ಯಾದಿದಾರರಾದ ಜೊಸೇಫ್ ಕೆ. ಎಸ್ (52), ತಂದೆ:ದಿ. ಸೆಬೆಸ್ಟೀನ್  ಕೆ. ಎಂ, ವಾಸ: ನಂದ್ರಗದ್ದೆ , ತೂದಳ್ಳಿ , ಯಡ್ತರೆ ಗ್ರಾಮ, ಬೈಂದೂರು ತಾಲೂಕು ಇವರು ದಿನಾಂಕ 31/05/2022 ರಂದು ಸಂಜೆ  7:00 ಗಂಟೆಗೆ ಸ್ನೇಹಿತ ಅಂತೋನಿಯವರೊಂದಿಗೆ ಮಾತನಾಡಿಕೊಂಡಿರುವಾಗ ಆರೋಪಿತರಾದ ವಿನ್ಸೆಂಟ್ ಹಾಗೂ ಗಣೇಶ ಪೂಜಾರಿ ಪಿರ್ಯಾದಿದಾರರ ಮನೆಯ ಕಂಪೌಂಡ್ ಒಳಗೆ ಬಂದು ಪಿರ್ಯಾದಿದಾರರು ಹಾಗೂ ಅಂತೋನಿ ರವರಿಗೆ ಅವಾಚ್ಯವಾಗಿ ಬೈದು ಆರೋಪಿತ ವಿನ್ಸೆಂಟ್ ನು ಪಿರ್ಯಾದಿದಾರರು ಅಂಗಳದಲ್ಲಿ ಕೂಡಿಟ್ಟಿದ್ದ, ಹೆಂಚನ್ನು ತೆಗೆದುಕೊಂಡು ಪಿರ್ಯಾದಿದಾರರ ಮುಖಕ್ಕೆ ಹೊಡೆದಿದ್ದು, ಪಿರ್ಯಾದಿದಾರರು ಕೆಳಗೆ ಬಿದ್ದಾಗ, ಆರೋಪಿತರಿಬ್ಬರೂ ಸೇರಿ ಕೈಯಿಂದ ಹೊಡೆದು ಕಾಲಿನಿಂದ ತುಳಿದಿದ್ದು, ಪಿರ್ಯಾದಿದಾರರ ಸ್ನೇಹಿತ ಅಂತೋನಿ ರವರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿತ ಗಣೇಶ ಪೂಜಾರಿ ಒಂದು ಹೆಂಚನ್ನು ತೆಗೆದುಕೊಂಡು ಬಂದು ಅಂತೋನಿರವರ ತಲೆಗೆ ಹೊಡೆದಿದ್ದು, ಆರೋಪಿತರಿಬ್ಬರೂ  ಬೆದರಿಕೆ ಹಾಕಿರುತ್ತಾರೆ. ಇದರಿಂದಾಗಿ ಪಿರ್ಯಾದಿದಾರರ ಮೂಗಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿದ್ದು, ಅಂತೋನಿ ರವರಿಗೆ ಹಣೆ ಭಾಗಕ್ಕೆ ರಕ್ತಗಾಯ ಆಗಿರುತ್ತದೆ. ಆರೋಪಿತರು ಪಿರ್ಯಾದಿದಾರರನ್ನು ಕೊಲೆ ಮಾಡುವ ಉದ್ದೇಶದಿಂದ  ಕೃತ್ಯ ಮಾಡಿದ್ದು, ಗಾಯಗೊಂಡ ಪಿರ್ಯಾದಿದಾರರು ಹಾಗೂ ಅಂತೋನಿ ರವರು ಚಿಕಿತ್ಸೆಯ ಬಗ್ಗೆ ಬೈಂದೂರು ಸರಕಾರಿ ಆಸ್ಪತ್ರೆಗೆ ಬಂದು ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ 108 ಅಂಬುಲೆನ್ಸ್ ನಲ್ಲಿ ತೆರಳಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವುದಾಗಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 106/2022 ಕಲಂ: 447, 324, 504, 506, 326, 307 ಜೊತೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತ್ತೀಚಿನ ನವೀಕರಣ​ : 03-06-2022 05:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080