ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ 

  • ಗಂಗೊಳ್ಳಿ: ಪಿರ್ಯಾದಿದಾರರಾದ ಸಂತೋಷ ಖಾರ್ವಿ (34), ತಂದೆ: ದಿ. ಕುಷ್ಠ ಖಾರ್ವಿ, ವಾಸ: ದಾಕುಹಿತ್ಲು, ಗಂಗೊಳ್ಳಿ ಗ್ರಾಮ, ಕುಂದಾಪುರ ತಾಲೂಕು ಇವರು ದಿನಾಂಕ 03/04/2021 ರಂದು KA-20-EU-3609 ನೇ ಸುಜುಕಿ ಸ್ಕೂಟಿಯಲ್ಲಿ ಅವರ ಸ್ನೇಹಿತ ಸೂರ್ಯ ಖಾರ್ವಿ ಎಂಬುವವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಮಾರಣಕಟ್ಟೆಯಿಂದ ಮುಳ್ಳಿಕಟ್ಟೆ ಕಡೆಗೆ ಹೋಗುತ್ತಿರುವಾಗ ಸಮಯ ಮಧ್ಯಾಹ್ನ 2:15 ಗಂಟೆಗೆ ಆಲೂರು ಕಳಿ ರಸ್ತೆ ಬಳಿ ತಲುಪುವಾಗ ಎದುರಿನಿಂದ ಆಲೂರು ಕಡೆಯಿಂದ ಚಿತ್ತೂರು ಕಡೆಗೆ KA-21-A-2525 ನೇ ಬಸ್‌ ನ್ನು ಅದರ ಚಾಲಕ ಇಬ್ರಾಹಿಂ ಎಂಬುವವರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ತೀರ ಬಲಕ್ಕೆ ಬಂದು ಪಿರ್ಯಾದಿದಾರರು ಸವಾರಿ ಮಾಡುತ್ತಿದ್ದ ಸ್ಕೂಟಿಗೆ ಢಿಕ್ಕಿ ಪಡಿಸಿದ ಪಾರಿಣಾಮ ಪಿರ್ಯಾದಿದಾರರು ಹಾಗೂ ಸಹಸವಾರರು ಸ್ಕೂಟಿ ಸಮೇತ ರಸ್ತೆಗೆ ಬಿದ್ದುದರಿಂದ ಪಿರ್ಯಾದಿದಾರರಿಗೆ ಸಣ್ಣ-ಪುಟ್ಟ ಗಾಯ ಹಾಗೂ ಸಹಸವಾರ ಸೂರ್ಯ ಖಾರ್ವಿ ರವರು ಗಂಭೀರ ಸ್ವರೂಪದ ಗಾಯಗೊಂಡಿರುತ್ತಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 33/2021 ಕಲಂ: 279, 337, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ 

  • ಶಿರ್ವಾ: ದಿನಾಂಕ 03/04/2021 ರಂದು ಮಧ್ಯಾಹ್ನ 3:30 ಗಂಟೆಗೆ ಪಿರ್ಯಾದಿದಾರರಾದ ಕೃಷ್ಣ ಪಾನರ (33) ,ತಂದೆ: ದಿ: ಸುಬ್ಬು ಪಾನರ, ವಾಸ: ಸುಬ್ಬು ನಿವಾಸ, ಗುಡ್ಡೆಮನೆ, ಎರ್ಮಾಲ್‌ ತೆಂಕ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರ ಹೆಂಡತಿ ಹಾಗೂ ಮಗಳಾದ ಪ್ರಿಯದರ್ಶಿನಿ (2 ವರ್ಷ 9 ತಿಂಗಳು) ರವರು ಮುದರಂಗಡಿ ಜಯಲಕ್ಷ್ಮಿ ಕ್ಲೋತ್‌ ಸ್ಟೋರ್‌ನಲ್ಲಿ ಮಗುವಿಗೆ ಬಟ್ಟೆ ಖರೀದಿ ಮಾಡುವ ಸಮಯದಲ್ಲಿ ಮಗು ಕಾಣೆಯಾಗಿ ಅಲ್ಲಿಂದ ನಡೆದುಕೊಂಡು ಅಂಗಡಿಯ ಹಿಂಭಾಗದಲ್ಲಿರುವ ಬಾವಿಗೆ ಆಯಾ ತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರಬಹುದು. ಮಗು ಪ್ರಿಯದರ್ಶಿನಿ ಮರಣದಲ್ಲಿ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಶಿರ್ವಾ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 07/2021 ಕಲಂ: 174 (C) CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತ್ತೀಚಿನ ನವೀಕರಣ​ : 04-04-2021 07:28 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080