ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕೋಟ: ಫಿರ್ಯಾದಿ ಪ್ರವೀಣ್‌ ಸಿ ಎಸ್‌ ಇವರು ದಿನಾಂಕ 04/05/2021 ರಂದು ಬೆಳಿಗ್ಗೆ ಗಂಟೆಗೆ 7-00 ಗಂಟೆಗೆ ತನ್ನ ಬಾಬ್ತು ಕೆಎ20 ಇಜಿ 5027 ನೇ ಟಿವಿಎಸ್‌ ಕಂಪೆನಿಯ ಮೋಟಾರು ಸೈಕಲ್‌ ನಲ್ಲಿ ನಾಗರಾಜ ಎಂಬವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಕೋಟದಿಂದ ಉಡುಪಿ ಕಡೆಗೆ ಎನ್‌ಹೆಚ್‌ 66 ನೇ ಏಕಮುಖ ಸಂಚಾರ ರಸ್ತೆಯಲ್ಲಿ ಹೋಗುತ್ತಿರುವಾಗ ಸಮಯ ಬೆಳಿಗ್ಗೆ 7-30 ಗಂಟೆಗೆ ಬ್ರಹ್ಮಾವರ ತಾಲೂಕು ಮೂಡಹಡು ಗ್ರಾಮದ ಎಡಬೆಟ್ಟುವಿನ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯ ತಿರುವಿನ ಬಳಿ ತಲುಪುವಾಗ, ಕೋಟದಿಂದ ಉಡುಪಿ ಕಡೆಗೆ ಒಂದು ಕಾರನ್ನು ಅದರ ಚಾಲಕನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯಾವುದೇ ಸೂಚನೆ ನೀಡದೇ ಕಾರನ್ನು ಒಮ್ಮಲೇ ಎಡಕ್ಕೆ ತಿರುಗಿಸಿದ ಪರಿಣಾಮ ಫಿರ್ಯಾದಿದಾರರ ಮೋಟಾರು ಸೈಕಲ್‌ನ ಬಲಬದಿಗೆ ಡಿಕ್ಕಿ ಹೊಡೆದಿರುತ್ತಾನೆ. ಇದರಿಂದ ಫಿರ್ಯಾದಿದಾರರು ಹಾಗೂ ಸಹ ಸವಾರ ಮೋಟಾರು ಸೈಕಲ್‌ ಸಮೇತ ಚರಂಡಿಗೆ ಬಿದ್ದಿದ್ದು, ಗಾಯಗೊಂಡರನ್ನು ಕೂಡಲೇ ಅಲ್ಲಿ ಸೇರಿದವರೊಂದಿಗೆ ಕಾರು ಚಾಲಕನು ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲು ಮಾಡಿರುತ್ತಾರೆ.ಈ ಅಪಘಾತದಿಂದ ಫಿರ್ಯಾದಿದಾರರ ಬಲಕಾಲಿಗೆ ಮೂಳೆ ಮುರಿತ ಆಗಿದ್ದು, ಹಾಗೂ ಸಹ ಸವಾರ ನಾಗರಾಜರವರಿಗೂ ಬಲ ಕಾಲು ಹಾಗೂ ಬಲ ಭುಜದ ಬಳಿ ಮೂಳೆ ಮುರಿತ ಆಗಿರುತ್ತದೆ ಸದ್ರಿ ಅಫಘಾತಕ್ಕೆ ಕಾರು ನಂಬ್ರ ಕೆಎ 20 ಎಮ್‌ 2857 ನೇ ಜೆನ್‌ ಕಾರು ಚಾಲಕ ದಿನೇಶ್‌ ಆಚಾರ್‌ ಅತೀವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಕಾರಣವಾಗಿರುತ್ತದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 77/2021  ಕಲಂ: 279,338  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 04-05-2021 05:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080