ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ಪಿರ್ಯಾದಿದಾರರಾದ ರಾಹುಲ್ (32), ತಂದೆ: ಕರಿಯ ಶೆಟ್ಟಿ, ವಾಸ: ಸಾಯಿರಾಮ್‌ ನಿವಾಸ, ಕೊಕ್ಕಾಯಿಕಲ್‌, ಪಳ್ಳಿ ಗ್ರಾಮ, ಕಾರ್ಕಳ ತಾಲೂಕು ಇವರು ದಿನಾಂಕ 05/03/2023 ರಂದು ರಾತ್ರಿ ರಿಕ್ಷಾವನ್ನು ಬಾಡಿಗೆಗಾಗಿ ಚಲಾಯಿಸಿಕೊಂಡು ಹೋಗುವಾಗ ರಾತ್ರಿ 11:30 ಗಂಟೆಗೆ ಕಾರ್ಕಳ ತಾಲೂಕು ಪಳ್ಳಿ ಗ್ರಾಮದ ಹಂಪನಕಟ್ಟೆ ಎಂಬಲ್ಲಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಸಾಗಿರುವ ರಾಜ್ಯ ಹೆದ್ದಾರಿಯ ಬದಿಯಲ್ಲಿ ರಿಕ್ಷಾ ನಿಲ್ಲಿಸಿ ಮೊಬೈಲ್‌ ನಲ್ಲಿ ಮಾತನಾಡುತ್ತಿರುವಾಗ ಉಡುಪಿ ಕಡೆಯಿಂದ ಪಳ್ಳಿ ಕಡೆಗೆ KA-20-ET-4023 ನೇ ನೋಂದಣಿ ಸಂಖ್ಯೆಯ ಹೋಂಡಾ ಕಂಪೆನಿ ತಯಾರಿಕೆಯ ಮೋಟಾರ್‌ ಸೈಕಲ್‌ ನ್ನು ರಿತೇಶ ಎಂಬುವವರು ಸವಾರಿ ಮಾಡಿಕೊಂಡು ಹೋಗುತ್ತಿದ್ದು ಅದೇ ವೇಳೆಗೆ ಪಳ್ಳಿ ಕಡೆಯಿಂದ ಉಡುಪಿ ಕಡೆಗೆ KA-19-MN-0151 ನೇ ನೋಂದಣಿ ಸಂಖ್ಯೆಯ ಟಾಟಾ ಕಂಪೆನಿಯ ಕಾರನ್ನು ಚಾಲಕ ರಾಕೇಶ ರೈ ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ರಿತೇಶ ಸವಾರಿ ಮಾಡುತ್ತಿದ್ದ ಮೋಟಾರ್‌ ಸೈಕಲ್‌ ಗೆ ಡಿಕ್ಕಿ ಹೊಡೆದು ರಸ್ತೆಯ ಎಡಬದಿಗೆ ಚಲಾಯಿಸಿಕೊಂಡು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಈ ಅಪಘಾತದಿಂದ ಮೋಟಾರ್‌ ಸೈಕಲ್‌ ನೊಂದಿಗೆ ಸವಾರ ರಿತೇಶ ರಸ್ತೆಗೆ ಬಿದ್ದಿದ್ದು ಸವಾರ ರಿತೇಶನ ಬಲಕಾಲಿನ ಮಂಡಿ ಬಳಿ ರಕ್ತಗಾಯವಾಗಿ ಬಲಕಾಲಿನ ಮೂಳೆ ಮುರಿತ ಉಂಟಾಗಿರುತ್ತದೆ. ಗಾಯಗೊಂಡ ರಿತೇಶ ರವರನ್ನು ಚಿಕಿತ್ಸೆ ಬಗ್ಗೆ ಕೆಎಮ್‌ ಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆ ಬಗ್ಗೆ ಉಡುಪಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡುನಲ್ಲಿ ಒಳರೋಗಿಯಾಗಿ ದಾಖಲಿಸಿರುವುದಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 25/2023 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಜುಗಾರಿ ಪ್ರಕರಣ

  • ಮಣಿಪಾಲ: ದಿನಾಂಕ 05/03/2023 ರಂದು ನವೀನ್‌ಎಸ್.‌ನಾಯ್ಕ್‌, ಪೊಲೀಸ್‌ ಉಪನಿರೀಕ್ಷಕರು, ಮಣಿಪಾಲ ಪೊಲೀಸ್‌ ಠಾಣೆ ಇವರಿಗೆ ದೊರೆತ ಮಾಹಿತಿಯ ಮೇರೆಗೆ ಅಲೆವೂರು ಗ್ರಾಮದ, ಅಲೆವೂರು ಪ್ರಾಥಮಿಕ ಶಾಲೆಯ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವನ್ನಾಗಿಟ್ಟುಕೊಟ್ಟು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಲ್ಲಿಗೆ ದಾಳಿ ನಡೆಸಿ ಇಸ್ಫಿಟ್ ಜುಗಾರಿ ಆಡುತ್ತಿದ್ದ 1) ಧೀರಜ್‌ (25), 2) ಗಣೇಶ್‌ (29), 3) ವೀರಪ್ಪ (41), 4) ಮಹಾಂತೇಶ್‌ (27), 5) ಮಲ್ಲಪ್ಪ(42), 6) ರಮೇಶ್‌ ಬಾಬು (66) ಇವರನ್ನು ಹಾಗೂ ಅಂದರ್ ಬಾಹರ್ ಆಟಕ್ಕೆ ಬಳಸಿದ ಇಸ್ಪೀಟ್‌ಎಲೆಗಳು- 52, ದಿನ ಪತ್ರಿಕೆ ಮತ್ತು ನಗದು ರೂಪಾಯಿ 2,430/- ನ್ನು ವಶಕ್ಕೆ ಪಡೆದಿಕೊಂಡಿದ್ದಾಗಿರುತ್ತದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 42/2023 ಕಲಂ: 87 KP Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 06-03-2023 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080