ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಬೈಂದೂರು: ದಿನಾಂಕ 04/04/2022 ರಂದು ಶಿರೂರು ಚೆಕ್ ಪೋಸ್ಟ್ ನಲ್ಲಿ  ರಾತ್ರಿ ಪಾಳಿ ಕರ್ತವ್ಯಕ್ಕೆ ನೇಮಿಸಿದ್ದ ಬೈಂದೂರು ಪೊಲೀಸ್ ಠಾಣೆ ಸಿಬ್ಬಂದಿಯವರು  ಚೆಕ್ ಪೋಸ್ಟ್  ನಲ್ಲಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡಿಕೊಂಡಿದ್ದು ದಿನಾಂಕ, 05/04/2022 ರಂದು ಬೆಳಗ್ಗಿನ ಜಾವ 6:30 ಗಂಟೆಗೆ  ವಾಹನಗಳನ್ನು ತಪಾಸಣೆ ನಡೆಸುತ್ತಿರುವ  ಸಮಯ ಆರೋಪಿ KA-50-M-9652 ನೇ  ಸ್ವಿಪ್ಟ್ ಡಿಸೈರ್ ಕೆಂಪು ಬಣ್ಣದ ಕಾರಿನ ಚಾಲಕನು  ಆತನ ಕಾರನ್ನು ಶಿರೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗ ಹಾಗೂ  ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶಿರೂರು  ಪೊಲೀಸ್ ಚೆಕ್ ಪೋಸ್ಟ್  ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಳವಡಿಸಿದ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದಿದ್ದು ,ಆರೋಪಿ ಚಾಲಕನಿಗೆ ಕಾರನ್ನು ನಿಲ್ಲಿಸುವಂತೆ   ಸೂಚನೆ ನೀಡಿದರೂ ನಿಲ್ಲಿಸದೇ  ಕಾರಿನೊಂದಿಗೆ ಪರಾರಿಯಾಗಿರುತ್ತಾನೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 71/2022 ಕಲಂ: 279 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ರತ್ನಾಕರ ಜಿ ಪೂಜಾರಿ (51), ತಂದೆ:ದಿ ಗೋವಿಂದ ಪೂಜಾರಿ, ವಾಸ: ಮಾಚಿಮನೆ, ಬಿ.ಟಿ.ಆರ್ ರಸ್ತೆ, ವಡೇರಹೋಬಳಿ ಗ್ರಾಮ, ಕುಂದಾಪುರ ತಾಲೂಕು ಇವರ ಅಕ್ಕನ ಮಗಳು ಶ್ರೀಮತಿ ನಾಗರತ್ನ (39) ರವರು ಬ್ರಹ್ಮಾವರ ಮೂಲದ ಪ್ರಶಾಂತ ಎಂಬುವವರನ್ನು 9 ವರ್ಷಗಳ ಹಿಂದೆ ವಿವಾಹವಾಗಿದ್ದು,  3-4 ವರ್ಷ ಗಳ ಹಿಂದೆ ನಾಗರತ್ನರವರ ತಲೆಯ ಒಳಭಾಗದಲ್ಲಿ ಗುಳ್ಳೆ ಕಾಣಿಸಿಕೊಂಡಿದ್ದು  ಈ ಬಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಂಡಿದ್ದು ತದ ನಂತರ ನಾಗರತ್ನರವರ ಆರೋಗ್ಯ ಸರಿ ಇಲ್ಲದೇ ಇರುತ್ತದೆ. ಹೀಗಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ನಾಗರತ್ನರವರು ದಿನಾಂಕ 05/04/2022  ರಂದು 10:30 ಗಂಟೆಗೆ  ಬಿ.ಟಿ.ಆರ್ ರಸ್ತೆ,ಯಲ್ಲಿರುವ ವಾಸದ ಮನೆಯ ಕೋಣೆಯೊಳಗೆ ಕಿಟಕಿಯ ರಾಡಿಗೆ ಚೂಡಿದಾರದ ವೇಲಿನಿಂದ  ಕುತ್ತಿಗೆ ಗೆ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ಸ್ಥಿತಿಯಲ್ಲಿ  ಕಂಡುಬಂದಿದ್ದು ಅವರನ್ನು ಚಿಕತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ವೈದ್ಯರು  ಪರೀಕ್ಷಿಸಿ ನಾಗರತ್ನರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ನಾಗರತ್ನರವರು ಅನಾರೋಗ್ಯದಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿ ದಿನಾಂಕ  05/04/2022  ರಂದು 09:30 ರಿಂದ 10:30 ಗಂಟೆಯ ಮಧ್ಯಾವಧಿಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 11/2022 ಕಲಂ: 174 ಸಿ.ಅರ್.ಪಿ.ಸಿಯಂತೆ ಪ್ರಕರಣ ದಾಖಾಗಿರುತ್ತದೆ.  

ಇತ್ತೀಚಿನ ನವೀಕರಣ​ : 06-04-2022 09:28 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080