ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ದಿನಾಂಕ 06/02/2021 ರಂದು 19:15 ಗಂಟೆಗೆ ಕಾರ್ಕಳ ತಾಲೂಕಿನ ಕಸಬ ಗ್ರಾಮದ ಕರಿಯಕಲ್ಲು ಎಂಬಲ್ಲಿ ಹಾದು ಹೋಗುವ ಪುಲ್ಕೇರಿ-ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿರ್ಯಾದಿದಾರರಾದ ಅಭಿಷೇಕ್ (15), ತಂದೆ: ರಂಗನಾಥ, ವಾಸ: ಕರಿಯಕಲ್ಲು, ಸಾಣೂರು ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರು ತನ್ನ ತಂದೆ ರಂಗನಾಥರವರೊಂದಿಗೆ ದ್ವಿಚಕ್ರ ವಾಹನ ನಂಬ್ರ KA-20-EW-0229 ನೇಯದರಲ್ಲಿ ಸಹಸವಾರನಾಗಿ ಕುಳಿತುಕೊಂಡು ಸೂರಾಲುಗುಂಡಾಜೆ ಕಡೆಗೆ ಹೋಗಲು ರಸ್ತೆಯ ಎಡಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಮಾರುತಿ ಓಮ್ನಿ ಕಾರು ನಂಬ್ರ KA-04-MM-2009 ನೇಯದರ ಚಾಲಕನು ಮಾರುತಿ ಓಮ್ನಿ ಕಾರನ್ನು ಬಜಗೋಳಿ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮತ್ತು ಸಹಸವಾರನು ದ್ವಿಚಕ್ರ ವಾಹನ ಸಮೇತ ಡಾಮಾರು ರಸ್ತೆಗೆ ಬಿದ್ದ ಪರಿಣಾಮ ಪಿರ್ಯಾದಿದಾರರ ಬಲಕಾಲಿನ ತೊಡೆಯ ಬಳಿ ಒಳ ಜಖಂ ಹಾಗೂ ರಂಗನಾಥ ಇವರ  ಎಡಕಾಲಿನ ಕೋಲು ಕಾಲಿಗೆ ಒಳ ಜಖಂ ಮತ್ತು ಬಲಕಾಲಿನ ಕೋಲು ಕಾಲಿಗೆ ತರಚಿದ ಗಾಯವಾಗಿರುತ್ತದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 18/2020 ಕಲಂ: 279, 337, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕೋಟ: ಪಿರ್ಯಾದಿದಾರರಾದ ರಾಮಚಂದ್ರ ಮೊಗವೀರ (86), ತಂದೆ: ದಿ ಶಾಸ ಮೊಗವೀರ, ವಾಸ:ಹೆಗ್ರಿ ಪಾಂಡೇಶ್ವರ  ಕಾಳಿಂಗ ರಾವ್ ರಸ್ತೆ  ಸಾಸ್ತಾನ ಅಂಚೆ ಬ್ರಹ್ಮಾವರ ತಾಲೂಕು ಇವರ ಮಗ ಮೃತ ಬಾಲ ಸುಬ್ರಮಣ್ಯ (30) ಇವರು ದಿನಾಂಕ 05/02/2021 ರಂದು ರಾತ್ರಿ 10:00 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು ಆ ನಂತರ ಮನೆಗೆ ಬಂದಿರುವುದಿಲ್ಲ. ಆತನ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಬರುತ್ತಿದ್ದು , ಸಂಬಂಧಿಕರು ಹಾಗೂ ನೆರೆಕೆರೆಯವರಲ್ಲಿ ವಿಚಾರಿಸಿದಲ್ಲಿ ಎಲ್ಲಿಯೂ   ಪತ್ತೆಯಾಗಿರುವುದಿಲ್ಲ. ದಿನಾಂಕ 07/02/2021 ರಂದು ಹುಡುಕುತ್ತಿರುವಾಗ ಮನೆಯ ಹತ್ತಿರದ ವಿನಯ ಕುಮಾರ್ ಸೆಟ್ಟಿಗಾರ್ ರವರ  ಖಾಲಿ ಜಾಗದಲ್ಲಿರುವ  ಆವರಣವಿಲ್ಲದ ಬಾವಿಯಲ್ಲಿ  ಬೆಳಿಗ್ಗೆ  09.00 ಗಂಟೆಗೆ ಬಾಲ ಸುಬ್ರಮಣ್ಯ  ರವರ ಮೃತ ದೇಹ ತೇಲುತ್ತಿರುವುದು ಕಂಡು ಬಂದಿರುತ್ತದೆ. ಬಾಲ ಸುಬ್ರಮಣ್ಯ ರವರು ದಿನಾಂಕ 05/02/2021 ರಂದು ರಾತ್ರಿ 10.00 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗುವಾಗ ಆಕಸ್ಮಿಕ ವಾಗಿ ಆವರಣವಿಲ್ಲದ  ಬಾವಿಗೆ ಬಿದ್ದಿದ್ದು ಅಥವಾ ಇನ್ನಾವುದೋ ಕಾರಣದಿಂದ ಬಿದ್ದಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆ ಯುಡಿಆರ್ ಕ್ರಮಾಂಕ 03/2021 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

 

 

ಇತ್ತೀಚಿನ ನವೀಕರಣ​ : 07-02-2021 07:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080