ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಫರೀದಾ ಬಾನು (60), ಗಂಡ:ಅಬ್ದುಲ್ ರಹೀಮ್, ವಾಸ: ಮನೆ ನಂ: 20-103 ಸ್ಟಾರ್ ಮಂಜಿಲ್,ಮೂಡುಬೆಟ್ಟು ಕೊಡವೂರು ಗ್ರಾಮ ಮತ್ತು ಅಂಚೆ ಇವರು ದಿನಾಂಕ 05/03/2023 ರಂದು ತನ್ನ ಮಗ ಮಹಮ್ಮದ್ ಜಹೀರ್ ನೊಂದಿಗೆ KA-20-EJ-1608 ನೇ ಮೋಟಾರು ಸೈಕಲ್ ನಲ್ಲಿ ಸಹಸವಾರರಾಗಿ ಆದಿ ಉಡುಪಿ ಕಡೆಯಿಂದ ಅಂಬಲಪಾಡಿ ಕಡೆಗೆ ಬರುತ್ತಿರುವಾಗ ಬೆಳಿಗ್ಗೆ 09:50 ಗಂಟೆಗೆ ಅಂಬಲಪಾಡಿ ಗ್ರಾಮದ ಕರಾವಳಿ ಜಂಕ್ಷನ್ ನ ಅಂಡರ್ ಪಾಸ್ ನಲ್ಲಿ  ವಾಹನಗಳು ಶಾರದಾ ಹೋಟೆಲ್ ಕಡೆಯಿಂದ ಅಂಬಲಪಾಡಿ ಕಡೆಗೆ ಸಂಚರಿಸುವ ಸರ್ವಿಸ್ ರಸ್ತೆಯನ್ನು ತಲುಪುವಾಗ ಆರೋಪಿ KA-19-EZ-2181 ನೇ ಸ್ಕೂಟರ್ ಸವಾರ ಅನ್ಫಾಲ್ ತಾನು ಸವಾರಿ ಮಾಡುತ್ತಿದ್ದ ಸ್ಕೂಟರ್ ನ್ನು ಆದಿ ಉಡುಪಿ ಕಡೆಯಿಂದ ಉಡುಪಿ ಕಡೆಗೆ ಕರಾವಳಿ ಜಂಕ್ಷನ್ ನಲ್ಲಿರುವ ಅಂಡರ್ ಪಾಸ್ ನಲ್ಲಿ ದುಡುಕುತನ ಮತ್ತು ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ವಾಹನಗಳು ಏಕಮಖವಾಗಿ ಸಂಚರಿಸುವ ರಸ್ತೆಯಲ್ಲಿ ವಿರುದ್ದ ದಿಕ್ಕಿನಲ್ಲಿ ಸವಾರಿ ಮಾಡಿಕೊಂಡು ಬಂದು ಪಿರ್ಯಾದಿದಾರರು ಮತ್ತು ಅವರ ಮಗ ಸವಾರಿಮಾಡಿಕೊಂಡು ಬರುತ್ತಿದ್ದ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ಮತ್ತು ಮಹಮ್ಮದ್  ಜಹೀರ್  ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಪಿರ್ಯಾದಿದಾರರ  ಎಡಕೈಯ ಮಣಿಕಟ್ಟಿಗೆ ಮೂಳೆಮುರಿತದ ಜಖಂ, ಮತ್ತು ಸೊಂಟದ ಬಳಿ ಗುದ್ದಿದ ಒಳಜಖಂ ಆಗಿ ಚಿಕಿತ್ಸೆಯ ಬಗ್ಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ದಾಖಲಾಗಿರುವುದಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 25/2023 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಶಿರ್ವಾ: ಪಿರ್ಯಾದಿದಾರರಾದ ಬಾಸೀಲು ಪುರ್ಟಾದೋ  (73), ತಂದೆ: ದಿ: ಕಾಮಿಲ್‌ ಪುರ್ಟಾದೋ ,ವಾಸ: ಗೋಳಿಬೆಟ್ಟು 108 ಕಳತ್ತೂರು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಇವರ ಪತ್ನಿ ಆಗ್ನೇಸ್‌ಪುರ್ಟಾದೋ (63)  ರವರು ದಿನಾಂಕ 06/03/2023 ರಂದು ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 13:00  ಗಂಟೆಯ ನಡುವಿನ ಅವಧಿಯಲ್ಲಿ ಕಳತ್ತೂರು ಗ್ರಾಮದ ಗೋಳಿಬೆಟ್ಟು ಎಂಬಲ್ಲಿರುವ ಪಿರ್ಯಾದಿದಾರರ ವಾಸದ ಮನೆಯ ಚಾವಡಿಯ  ಪಕ್ಕಾಸಿಗೆ ಬಟ್ಟೆಯ ಸಹಾಯದಿಂದ  ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.   ಪಿರ್ಯಾದಿದಾರರ ಪತ್ನಿ ಬಿ.ಪಿ. ಖಾಯಿಲೆ ಬಗ್ಗೆ ಔಷಧಿಯನ್ನು ಸೇವಿಸುತ್ತಿದ್ದು, ಯಾವುದೋ ಕಾರಣಕ್ಕೆ ಆತ್ಮಹತ್ಯೆ  ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 05/2023  ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ .

ಮಟ್ಕಾ ಜುಗಾರಿ ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಶ್ರೀ ಮಹೇಶ್‌ ಟಿ.ಎಂ, ಪೊಲೀಸ್‌ ಉಪನಿರೀಕ್ಷಕರು(ಕಾ.ಸು-1), ಉಡುಪಿ ನಗರ ಪೊಲೀಸ್‌ ಠಾಣೆ ಇವರು  ದಿನಾಂಕ 06/03/2023 ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕಡಿಯಾಳಿ ಬಿಜೆಪಿ ಕಛೇರಿ ಬಳಿ ಮೀನು ಮಾರುಕಟ್ಟೆ ಬಳಿ ಓರ್ವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಬಂದ ಮಾಹಿತಿ  ಮೇರೆಗೆ  ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಗಣಪತಿ (46),  ತಂದೆ:  ರಾಮ  ಪೂಜಾರಿ,  ವಾಸ:  ಗದ್ದೆಮನೆ,  ಸಾಲಿಕೇರಿ,  ಹಾರಾಡಿ  ಗ್ರಾಮ,  ಬ್ರಹ್ಮಾವರ ತಾಲೂಕು,  ಉಡುಪಿ  ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಕಮೀಷನ್‌ ಹಣಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿದ್ದು, ಸಂಗ್ರಹಿಸಿದ ಹಣವನ್ನು 2ನೇ ಆಪಾದಿತ ಪೇತ್ರಿಯ ದಿವಾಕರ್‌ ಎಂಬಾತನಿಗೆ ಕೊಡುತ್ತಿರುವುದಾಗಿ ತಿಳಿಸಿದ್ದು, ಆಪಾದಿತನ  ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 940/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್‌ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 32/2023 ಕಲಂ: 78 (i) (iii) ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ಪಿರ್ಯಾದಿದಾರರಾದ ಶ್ರೀಮತಿ ಮಮತಾ ಶಂಕರ ನಾಯ್ಕ್‌, ಪೊಲೀಸ್‌ ಉಪನಿರೀಕ್ಷಕರು ತನಿಖೆ-3, ಉಡುಪಿ ನಗರ ಪೊಲೀಸ್‌ ಠಾಣೆ ಇವರು ದಿನಾಂಕ 06/03/2023 ರಂದು ಹೊಯ್ಸಳ ವಾಹನದಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ  ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಆದಿಉಡುಪಿ ಎಪಿಎಂಸಿ ಮಾರುಕಟ್ಟೆ ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಮಾಹಿತಿ ದೊರೆತ ಮೇರೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಮಂಜುನಾಥ (38), ತಂದೆ:  ರಾಜಶೇಖರ್‌,  ವಾಸ: ಮುಖ್ಯ  ಪ್ರಾಣ  ರಸ್ತೆ,  ಚಂದ್ರಕಟ್ಟ, ಆದಿಉಡುಪಿ, ಅಂಬಲಪಾಡಿ  ಗ್ರಾಮ, ಉಡುಪಿ  ಜಿಲ್ಲೆ, 2) ಪಾಂದಾರಿ  ಪ್ರಸಾದ್‌ (49), ತಂದೆ: ಸೊರ್ಗಿ ವಿಶ್ವನಾಥ್‌,  ವಾಸ: ಅನಿಲ್‌ರವರ ಬಾಡಿಗೆ ಮನೆ, ಮಧ್ವನಗರ,  ಕೊಡವೂರು  ಗ್ರಾಮ,  ಉಡುಪಿ ಜಿಲ್ಲೆ ಇವರನ್ನು ವಶಕ್ಕೆ ಪಡೆದು , ಆಪಾದಿತರ ವಶದಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ರೂಪಾಯಿ 2,440/- ಮತ್ತು ಮಟ್ಕಾ ನಂಬರ್‌ ಬರೆದ ಚೀಟಿ-1, ಬಾಲ್‌ಪೆನ್‌ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 33/2023 ಕಲಂ: 78 (i) (iii) ಕರ್ನಾಟಕ ಪೊಲೀಸ್ ಕಾಯಿದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.  
     
     

      

ಇತ್ತೀಚಿನ ನವೀಕರಣ​ : 07-03-2023 09:35 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080