ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

  • ಬ್ರಹ್ಮಾವರ: ಪಿರ್ಯಾದಿದಾರರಾದ ಗಿರೀಶ್ ಪೂಜಾರಿ ಎಂಬವರು ದಿನಾಂಕ: 07.06.2021 ರಂದು ಸಂಜೆ 6:45 ಗಂಟೆಗೆ ಅವರ ಬಾಬ್ತು ಮೋಟಾರ್ ಸೈಕಲ್‌ನಲ್ಲಿ ಬ್ರಹ್ಮಾವರ ತಾಲೂಕು, ಹೇರೂರು ಗ್ರಾಮದ, ಸುಪ್ರೀಮ್ ಫೀಡ್ಸ್‌ ನ ಸ್ವಲ್ಪ ಹಿಂದೆ , ರಾಹೆ 66 ರಲ್ಲಿ ಬ್ರಹ್ಮಾವರ ದಿಂದ ಮನೆಗೆ ಹೋಗುತ್ತಿರುವಾಗ ಅವರ ಎದುರಿನಿಂದ ಆರೋಪಿ ವಿಜಯ್ ಕುಮಾರ್ ರವರು ಅವರ ಬಾಬ್ತು KA20ES2985 ನೇ ಹೊಂಡಾ ಆ್ಯಕ್ಟಿವಾ  ಮೋಟಾರ್ ಸೈಕಲ್‌ನ್ನು ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಎಡಭಾಗ ದಿಂದ ಸವಾರಿ ಮಾಡಿ, ರಸ್ತೆಯ ತೀರಾ ಎಡ ಬದಿಯಲ್ಲಿ ಹೇರೂರು ಕಡೆಗೆ ನಡೆದು ಕೊಂಡು ಹೋಗುತ್ತಿದ್ದ ಸೀತಾರಾಮ ಶೆಟ್ಟಿ ಎಂಬವರಿಗೆ ಸದ್ರಿ ಮೋಟಾರ್ ಸೈಕಲ್‌ನ ಹ್ಯಾಂಡಲ್‌ ತಾಗಿ  ಸೀತಾರಾಮ ಶೆಟ್ಟಿ ರವರು ರಸ್ತೆಗೆ ಬಿದ್ದರು, ಅಲ್ಲದೇ ಆರೋಪಿಯು ಕೂಡ ಹತೋಟಿ ತಪ್ಪಿ ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದಿರುವುದಾಗಿದೆ. ಈ ಅಪಘಾತದ ಪರಿಣಾಮ ಸೀತಾರಾಮ ಶೆಟ್ಟಿ ರವರ ತಲೆಗೆ ತೀವ್ರ ಗಾಯವಾಗಿ ಮಾತನಾಡುತ್ತಿರಲಿಲ್ಲ, ಹಾಗೂ ಆರೋಪಿಯ ಎಡಕೈಯಮುಂಗೈ ಬಳಿ, ಬಲ ಕಣ್ಣಿನ ಹುಬ್ಬಿನ ಬಳಿ ತರಚಿದ ಗಾಯವಾಗಿರುತ್ತದೆ. ಗಾಯಾಳು ಇಬ್ಬರನ್ನು ಚಿಕಿತ್ಸೆ ಬಗ್ಗೆ ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಸೀತಾರಾಮ ಶೆಟ್ಟಿ ರವರನ್ನು ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಿರುವುದಾದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 115/2021 ಕಲಂ 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ: 06-06-2021ರಂದು ಉಡುಪಿಯ ಕಾಪುವಿನಿಂದ ಮಲ್ಪೆಯ ಕಡೆಗೆ KA 03KC 5480ನೇ ಸ್ಕೂಟರ್ ಚಾಲಕ ಸಿದ್ದಿಕ್ ಎಂಬಾತ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಾಯಿಸಿಕೊಂಡು ಬಂದು ಸಮಯ ಸುಮಾರು 07-30ಗಂಟೆಗೆ ಕಿನ್ನಿಮುಲ್ಕಿಯ ಪ್ಲೇ ಓವರ್ ಕೆಳಗೆ ದುಡುಕುತನ ಮತ್ತು ನಿರ್ಲಕ್ಷತನದಿಂದ ಚಲಾಯಿಸಿದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಸಿದ್ದಿಕ್ ರಸ್ತೆಗೆ ಬಿದ್ದಿದ್ದು, ಸಿದ್ದಿಕ್ ನ ಹೊಟ್ಟೆಯ ಭಾಗಕ್ಕೆ ಗುದ್ದಿದ ಗಾಯವಾಗಿರುತ್ತದೆ. ಈ ಅಪಘಾತದಿಂದ ಸ್ಕೂಟರ್ ಸಹ ಜಖಂಗೊಂಡಿರುತ್ತದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 36/2021 ಕಲಂ  279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಶ್ರೀಧರ ಭಂಡಾರಿಯವರು ಸುಮಾರು 20 ವರ್ಷಗಳಿಂದ ಮನೆ ಬಿಟ್ಟಿದ್ದು ಕುಂದಾಪುರ ಪರಿಸರದಲ್ಲಿ ತಿರುಗಾಡುತ್ತಿದ್ದು ವಿಪರೀತ ಮದ್ಯಪಾನ ಮಾಡುವ ಗುಣ ಹೊಂದಿರುವುದಾಗಿದೆ. ವಿಪರೀತ ಮದ್ಯಪಾನದಿಂದಾಗಿ ಶ್ರೀಧರ ಭಂಡಾರಿಯವರು ಅಸ್ವಸ್ಥರಾಗಿದ್ದು ಚಿಕಿತ್ಸೆ ಬಗ್ಗೆ ದಿನಾಂಕ 07-06-2021 ರಂದು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ದಿನಾಂಕ 08-06-2021 ರಂದು 05:45 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕುಂದಾಪುರ ಠಾಣಾ ಯುಡಿಆರ್‌ ಕ್ರಮಾಂಕ 22/2021 ಕಲಂ: 174 ಸಿ.ಆರ್.ಪಿ.ಸಿ. ರಂತೆ ಪ್ರಕರಣ ದಾಖಲಿಸಲಾಗಿದೆ.  

ಇತ್ತೀಚಿನ ನವೀಕರಣ​ : 08-06-2021 06:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080