ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣಗಳು

  • ಕುಂದಾಪುರ: ದಿನಾಂಕ 11/02/2021 ರಂದು ಮಧ್ಯಾಹ್ನ 1:30 ಗಂಟೆಗೆ,  ಕುಂದಾಪುರ  ತಾಲೂಕಿನ, ಗುಲ್ವಾಡಿ  ಗ್ರಾಮದ  ಕಂಡ್ಲೂರು ಮರಾಸಿ ಎಂಬಲ್ಲಿ ರಸ್ತೆಯಲ್ಲಿ ಆಪಾದಿತ ಪ್ರಶಾಂತ  KA-20-AB-0810ನೇ ಟಿಪ್ಪರನ್ನು ಕಂಡ್ಲೂರು ಕಡೆಯಿಂದ ಮಾವಿನಕಟ್ಟೆ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ಬಲಬದಿಗೆ   ಚಲಾಯಿಸಿಕೊಂಡು ಬಂದು ಪಿರ್ಯಾದಿದಾರರಾದ ನಾಗರಾಜ್ ಬಿನ್ ಸಂಕ (30), ವಾಸ: ಸೌಕುರು ಕೆಳಮನೆ ಅಂಚೆ ಗುಲ್ವಾಡಿ ಕುಂದಾಪುರ ತಾಲೂಕು ಇವರು ಮಾವಿನಕಟ್ಟೆ ಕಡೆಯಿಂದ ಕಂಡ್ಲೂರಿನ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಆಟೋ ರಿಕ್ಷಾ ನಂಬ್ರ KA-20-AB-0810 ನೇದಕ್ಕೆ ಎದುರುಗಡೆಯಿಂದ ಡಿಕ್ಕಿ ಹೊಡೆದ  ಪರಿಣಾಮ ಆಟೋರಿಕ್ಷಾದ ಎದುರುಗಡೆ ಜಖಂ ಆಗಿರುತ್ತದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 24/2021 ಕಲಂ: 279 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.    
  • ಉಡುಪಿ: ಪಿರ್ಯಾದಿದಾರರಾದ ವಸಂತ ರಾವ್‌(70), ತಂದೆ: ದಿ. ರಾಮೋಜಿ ರಾವ್ , ವಾಸ: ಜಂಗಮರಬೆಟ್ಟು, ಕಲ್ಯಾಣಪುರ, ಮೂಡುತೋನ್ಸೆ ಗ್ರಾಮ, ಉಡುಪಿ  ಇವರು ದಿನಾಂಕ 11/02/2021 ರಂದು ಸಂಜೆ 6:15 ಗಂಟೆಗೆ ಸಂತೆಕಟ್ಟೆ ಬಳಿ ಇರುವ ಆಶೀರ್ವಾದ ಜಂಕ್ಷನ್‌ ಬಳಿ ರಸ್ತೆ ದಾಟಲು ರಸ್ತೆ ಬದಿ ನಿಂತುಕೊಂಡಿರುವಾಗ ಕರಾವಳಿ ಜಂಕ್ಷನ್‌ ಕಡೆಯಿಂದ ಬ್ರಹ್ಮಾವರ ಕಡೆಗೆ ಕಾರು ನಂಬ್ರ KA-47-M-8392  ನ್ನು ಅದರ ಚಾಲಕ ಮೋಹನ್‌.ಎಂ ನಾಯ್ಕ್‌ ಎಂಬುವವರು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ತೀರ ಎಡಬದಿಗೆ ಚಲಾಯಿಸಿ ಪಿರ್ಯಾದಿದಾರರರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ, ಕಾಲಿಗೆ ರಕ್ತ ಗಾಯ ಉಂಟಾಗಿರುತ್ತದೆ . ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 13/2021 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ದಿನಾಂಕ 11/02/2021 ರಂದು ಸಂಜೆ  5:45 ಗಂಟೆಗೆ,  ಕುಂದಾಪುರ  ತಾಲೂಕಿನ, ಕೋಟೇಶ್ವರ  ಗ್ರಾಮದ  ಕೋಟೇಶ್ವರ ನಟರಾಜ್ ಬಾರ್ ಬಳಿ ರಾಷ್ಟ್ರೀಯ ಹೆದ್ದಾರಿ 66 ಕುಂದಾಪುರ-ಬ್ರಹ್ಮಾವರ ರಸ್ತೆಯಲ್ಲಿ ಆಪಾದಿತ ಸಂದೀಪ್ ಶೆಟ್ಟಿ  ಎಂಬುವವರು KA-19-EM-2601 ನೇ ಕಾರನ್ನು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರ ಎಡಬದಿಗೆ   ಚಲಾಯಿಸಿಕೊಂಡು ಬಂದು ಅಲ್ಲೇ ನಿಂತಿದ್ದ ಪಿರ್ಯಾದಿದಾರರಾದ  ರವಿಂದ್ರ ಪೂಜಾರಿ (45), ವಾಸ: ಮಕ್ಕಿಮನೆ ಹಿಲ್ ಕೋಡ್ ನೇರಳಕಟ್ಟೆ ಅಂಚೆ ಕರ್ಕುಂಜೆ ಗ್ರಾಮ ಕುಂದಾಪುರ ತಾಲೂಕು  ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಬಲ ಸೊಂಟ, ಬಲಕಾಲಿನ ತೊಡೆ, ಬಲಕಾಲಿನ ಗಂಟಿನ ಕೆಳಗೆ ಮೂಳೆ ಮುರಿತ ಗಾಯ ಹಾಗೂ ಬಲಕೈ ಗಂಟು ಮತ್ತು ಗಲ್ಲಕ್ಕೆ ತರಚಿದ ಗಾಯವಾಗಿ ಕುಂದಾಪುರ  ಚಿನ್ಮಯಿ  ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿರುತ್ತಾರೆ . ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 25/2021 ಕಲಂ: 279, 338  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 12-02-2021 10:07 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080