Feedback / Suggestions

ಇತರ ಪ್ರಕರಣ

  • ಮಲ್ಪೆ: ದಿನಾಂಕ 11/05/2021 ರಂದು ಸಂಜೆ 16:00 ಗಂಟೆಗೆ ಸಕ್ತಿವೇಲು ಈ, ಪೊಲೀಸ್ ಉಪನಿರೀಕ್ಷಕರು, ಮಲ್ಪೆ ಪೊಲೀಸ್ ಠಾಣೆ, ಮಲ್ಪೆ ಉಡುಪಿ ಇವರು ಸಿಟಿಜನ್ ಸರ್ಕಲ್ ಬಳಿ  ರಸ್ತೆಯಲ್ಲಿ ರೌಂಡ್ಸ್ ನಲ್ಲಿರುವ ಸಮಯ KA-20-EQ-0384 ನೇ ಸ್ಕೂಟರ್ ನಲ್ಲಿ ಸವಾರನು ಹಿಂಬದಿಯಲ್ಲಿ ಸಹಸವಾರರನ್ನು ಕುಳ್ಳಿರಿಸಿಕೊಂಡು ಹಾಗೂ KA-20-ET-5871 ನೇ ಸ್ಕೂಟರ್ ಸವಾರನು ತಲೆಗೆ ಹೆಲ್ಮೆಟ್ ಧರಿಸದೆ ಸ್ಕೂಟರನ್ನು ಚಲಾಯಿಸಿಕೊಂಡು ಮಲ್ಪೆ ಜಂಕ್ಷನ್ ಕಡೆಯಿಂದ  ಮಲ್ಪೆ ಬೀಚ್ ಕಡೆಗೆ  ಬರುತ್ತಿದ್ದರು . ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆಯವರು ಜಿಲ್ಲೆಯಾದ್ಯಂತ  ನಿಷೇದಾಜ್ಞೆ ಹೊರಡಿಸಿದ್ದು ಈ ಬಗ್ಗೆ ಆರೋಪಿತರು ಕೊರೊನಾ ಕಾಯಿಲೆ ಹರಡದಂತೆ ಮುಂಜಾಗೃತ ಕ್ರಮವಾಗಿ ಮುಖಕ್ಕೆ ಯಾವುದೇ ಮಾಸ್ಕ್ ಧರಿಸದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಸ್ವೆಚ್ಚಾಚಾರದಿಂದ ತಿರುಗಾಡಿಕೊಂಡು ಮುಂಜಾಗೃತ ಕ್ರಮಕೈಗೊಳ್ಳದೆ ಬೇಜವಾಬ್ದಾರಿಯುತವಾಗಿ ಸ್ಕೂಟರ್ ಸವಾರಿ ಮಾಡಿಕೊಂಡಿದ್ದ ಶ್ರೀಕಾಂತ ಸಹಸವಾರ ವೆಂಕಟೇಶ್ ನಾಯ್ಕ ಹಾಗೂ  ಇನ್ನೊಂದು ಸ್ಕೂಟರ್ ಸವಾರ ಜೋವಿನ್ ಶನಾನ್  ಇವರುಗಳಿಂದ ಕೊವಿಡ್ 19  ಸೋಂಕು ಸಾರ್ವಜನಿಕರಿಗೆ ಹರಡುವ ಸಂಭವವಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರದ ಸ್ಪಷ್ಟ ಆದೇಶವಿದ್ದರೂ ಸಹಾ ಆದೇಶವನ್ನು ಪಾಲಿಸದೆ ಕಾನೂನು ಉಲ್ಲಂಘಿಸಿರುವುದಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 51/2021  ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಅಮಾಸೆಬೈಲು: ದಿನಾಂಕ 12/05/2021 ರಂದು ಸುಬ್ಬಣ್ಣ ಬಿ, ಪೊಲೀಸ್ ಉಪನಿರೀಕ್ಷಕರು ಅಮಾಸೆಬೈಲು ಪೊಲೀಸ್ ಠಾಣೆ ಇವರು ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದು ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 10/05/2021  ರಿಂದ 24/05/2021  ರವರೆಗೆ ಕೋವಿಡ್ – 19  ಸಾಂಕ್ರಾಮಿಕ  ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದ್ದು ಅನಗತ್ಯ ವಾಹನಗಳ ಓಡಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು ಬೆಳಿಗ್ಗೆ 10:30 ಗಂಟೆಗೆ ಹೊಸಂಗಡಿ ಗ್ರಾಮದ ಕೆರೆಕಟ್ಟೆ ಚರ್ಚ್ ಬಳಿ ಈ ಕೆಳಗೆ ತಿಳಿಸಿದ ದ್ವಿಚಕ್ರ ವಾಹನವನ್ನು ಆಪಾದಿತ ಕೃಷ್ಣ ಶೆಟ್ಟಿ (44),  ತಂದೆ: ರಾಮಣ್ಣ ಶೆಟ್ಟಿ, ವಾಸ: ಅತ್ತಿಕೋಡ್ಲು ಹೊಸಂಗಡಿ ಗ್ರಾಮ ಇವರು KA-14-EN-5645 Maestro Scooty  ಚಲಾಯಿಸಿಕೊಂಡು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುತ್ತದೆ.    ಮೇಲ್ಕಂಡ ದ್ವಿಚಕ್ರ ವಾಹನ ಸವಾರ  ಕೋವಿಡ್ – 2019  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು  ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಅನಾವಶ್ಯಕವಾಗಿ ಸಕಾರಣವಿಲ್ಲದೆ ಸಾರ್ವಜನಿಕ  ಸ್ಥಳದಲ್ಲಿ  ಸಂಚರಿಸಿಕೊಂಡು ನಿರ್ಲಕ್ಷತನದಿಂದ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 16/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಅಸ್ವಾಭಾವಿಕ ಮರಣ ಪ್ರಕರಣ

  • ಹೆಬ್ರಿ: ಪಿರ್ಯಾದಿದಾರರಾದ ನಯನಾ ಶೆಟ್ಟಿ (33), ಗಂಡ: ಜೀವನ್ ಶೆಟ್ಟಿ , ವಾಸ: ಸಾಯಿ ರಕ್ಷಾ  ಸ್ವಾಗತ ಗೋಪುರದ ಬಳಿ ಕೆಮ್ತೂರು  ಅಂಚೆ ಕೊರಂಗ್ರಪಾಡಿ ಗ್ರಾಮ ಉಡುಪಿ ತಾಲೂಕು ಮತ್ತು ಜಿಲ್ಲೆ ಇವರ ತಂದೆ ರಾಜೀವ ಶೆಟ್ಟಿ (65) ರವರು ಚಾರಾ ಗ್ರಾಮದ ಹೊಸಮನೆ ಎಂಬಲ್ಲಿ ಒಬ್ಬರೇ ವಾಸ ಮಾಡಿಕೊಂಡಿದ್ದು ಅವರು  ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು. ಉಡುಪಿ ಬಾಳಿಗ ಅಸ್ಪತ್ರೆಯಿಂದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದವರು ಈ ಬಗ್ಗೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಮನನೊಂದು ದಿನಾಂಕ 12/05/2021 ರಂದು ಬೆಳಿಗ್ಗೆ 07:30 ಗಂಟೆಯಿಂದ ಬೆಳಿಗ್ಗೆ 09:00 ಗಂಟೆಯ ಮದ್ಯಾವಧಿಯಲ್ಲಿ ಚಾರಾ ಗ್ರಾಮದ ಕಾರಾಡಿ ಎಂಬಲ್ಲಿ ಮೋಹನ್ ಶೆಟ್ಟಿ ರವರಿಗೆ ಸಂಬಂಧಿಸಿದ ದನದ ಕೊಟ್ಟಿಗೆಯ ಹೊರಗಿನ ಕಿಟಿಕಿಗೆ ಹುರಿ ಹಗ್ಗವನ್ನು ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದು ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 17/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  
     
     

Last Updated: 12-05-2021 06:07 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080