ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಬ್ರಹ್ಮಾವರ: ದಿನಾಂಕ 13.01.2023  ರಂದು ಫಿರ್ಯಾದುದಾರರಾದ ಎ. ಗುರುರಾಜ್‌ ರಾವ್‌ ರವರು  ಉಪ್ಪೂರು ಗ್ರಾಮದ ಕೆ.ಜಿ ರೋಡ್‌ ನ ರಾ.ಹೆ-66ರ ಪಕ್ಕದ ಉಡುಪಿ ಕಡೆಗೆ ಹೋಗುವ ಬಸ್ಸು ನಿಲ್ದಾಣದ ಬಳಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಾ ನಿಂತುಕೊಂಡಿರುವಾಗ, ಕೆ.ಜಿ ರೋಡ್‌ ಪೇಟೆ ಕಡೆಯಿಂದ  ಜಯಲಕ್ಷ್ಮೀ ಭಟ್‌ ಎಂಬವರು ನಡೆದುಕೊಂಡು ಬಂದು ಬ್ರಹ್ಮಾವರ ಕಡೆ ಹೋಗುವ ಬಸ್ಸ್‌ ನಿಲ್ದಾಣದ ಕಡೆಗೆ ಹೋಗಲು  ಕುಂದಾಪುರ- ಉಡುಪಿ  ರಾಹೆ 66 ನ್ನು ದಾಟುತ್ತಾ ರಸ್ತೆಯ ಪಶ್ಚಿಮ ಅಂಚಿನ ಬಳಿ ತಲುಪುವಾಗ ಸಮಯ ಸುಮಾರು ಬೆಳಿಗ್ಗೆ 11.30 ಗಂಟೆಗೆ ರಾ.ಹೆ 66 ರಲ್ಲಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಆರೋಪಿ ಅಬ್ದುಲ್‌ ಮುತಾಲಿ ಅವರ ಬಾಬ್ತು KA.20.MD.5133 ನೇ ಮಹೇಂದ್ರ ಬುಲೆರೋ ಜೀಪನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ  ಚಲಾಯಿಸಿಕೊಂಡು ಬಂದು ಜಯಲಕ್ಷ್ಮೀ ಭಟ್‌ ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದ ಪರಿಣಾಮ ಜಯಲಕ್ಷ್ಮೀ ಭಟ್‌ ರವರು ರಸ್ತೆಗೆ ಬಿದ್ದು,  ಅವರ ತಲೆಯ ಭಾಗಕ್ಕೆ ತೀವ್ರ ಒಳಜಖಂ ಆಗಿರುತ್ತದೆ. ಕೂಡಲೇ ಅವರನ್ನು ಚಿಕಿತ್ಸೆ ಬಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯಾಧಿಕಾರಿಯವರು ಜಯಲಕ್ಷ್ಮೀರವರನ್ನು ಪರೀಕ್ಷಿಸಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ಮಧ್ಯಾಹ್ನ 12:45 ಗಂಟೆಗೆ ತಿಳಿಸಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 03/2023 ಕಲಂ : 279, 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-01-2023 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080