ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಮಣಿಪಾಲ: ದಿನಾಂಕ 11/02/2022 ರಂದು ರಾತ್ರಿ 9:30 ಗಂಟೆಗೆ ಪಿರ್ಯಾದಿದಾರರಾದ ಕಿಶೋರ್‌ಕುಮಾರ್‌ (36), ತಂದೆ:ಶ್ರೀನಿವಾಸ ಆಚಾರ್ಯ, ವಾಸ: ಶ್ರೀದೇವಿ  ಪ್ರಸಾದ, ಕಾಪಿ ತೋಟ, ಪೆರ್ಡೂರು ಗ್ರಾಮ, ಉಡುಪಿ ತಾಲೂಕು ಇವರು ಕೆಲಸ ಮುಗಿಸಿ ಮನೆಗೆ KA-20-EC-2835 ನೇ ಮೋಟಾರ್‌ಸೈಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಮಣಿಪಾಲ ಪರ್ಕಳ ಮಾರ್ಗವಾಗಿ ಹೋಗುತ್ತಿದ್ದು, ಕೆಳಪರ್ಕಳ ತಲುಪುತ್ತಿದ್ದಂತೆ ಪರ್ಕಳ ಕಡೆಯಿಂದ ಮಣಿಪಾಲ ಕಡೆಗೆ KA-20-EU-9752ನೇ ಮೋಟಾರ್‌ಸೈಕಲ್‌ನ್ನು ಅದರ ಸವಾರನು ವಿರುದ್ಧ ದಿಕ್ಕಿನಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ರಸ್ತೆಯ ಬಲಭಾಗಕ್ಕೆ ಬಂದು ಪಿರ್ಯಾದಿದಾರರ ಮೋಟಾರ್‌ಸೈಕಲ್‌ಗೆ ಡಿಕ್ಕಿಹೊಡೆದ ಪರಿಣಾಮ ಪಿರ್ಯಾದಿದರರ ಬಲಕೈಯ ಮಣಿಗಂಟಿನ ಬಳಿ ಮತ್ತು ಬಲಕಾಲಿನ ಮಣಿಗಂಟಿನ ಬಳಿ ತೀವ್ರ ಮೂಳೆ ಮುರಿತದ ಗಾಯ ಮತ್ತು ಬಲ ಕೈಯ ಮುಂಗೈ ಬಳಿ ತರಚಿದ ಗಾಯ ಹಾಗೂ ಅಪಘಾತವೆಸಿಗಿದ ಮೋಟಾರ್ ಸೈಕಲ್ ಸವಾರನ ಕಾಲಿಗೆ ಸಣ್ಣಪುಟ್ಟ ಗಾಯ  ಉಂಟಾಗಿದ್ದು ಮಣಿಪಾಲ KMC ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 23/2022  ಕಲಂ: 279, 337, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ರಾಜೇಂದ್ರ ಪ್ರಸಾದ (35), ತಂದೆ ಮಹಾಲಿಂಗ ಶೇರೆಗಾರ್, ವಾಸ:ಉಗ್ರಾಣಿಮನೆ, ಸುಬ್ರಮಣ್ಯ ದೇವಸ್ಥಾನದ ಹತ್ತಿರ ಉಳ್ಳುರು ಕಂದಾವ್ರ ಗ್ರಾಮ ಕುಂದಾಪುರ ತಾಲೂಕು ಇವರ ಅಣ್ಣ  ಯು. ರಾಘವೇಂದ್ರ (42)  ರವರು ದಿನಾಂಕ  12/02/2022 ಮದ್ಯಾಹ್ನ 2:30  ಗಂಟೆಯಿಂದ ದಿನಾಂಕ 12/02/2022  ರಂದು 4:00  ಗಂಟೆಯ ನಡುವಿನ ಅವಧಿಯಲ್ಲಿ  ಜೀವನದಲ್ಲಿ ಜಿಗುಪ್ಸೆಗೊಂಡು ತಾನು ವಾಸವಾಗಿರುವ ಬಾಡಿಗೆಮನೆಯಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 04/2022 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾರ್ಕಳ: ಕಾರ್ಕಳ ತಾಲೂಕು ದುರ್ಗಾ ಗ್ರಾಮದ  ಶೆಟ್ಟಿಬೆಟ್ಟು ಎಂಬಲ್ಲಿ ವಾಸವಾಗಿರುವ ಚಿದಾನಂದ ಭಟ್ಟ (42) ರವರು 12 ವರ್ಷದಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆ ಕೊಡಿಸುತ್ತಿದ್ದು,  ದಿನಾಂಕ 12/02/2022 ರಂದು 15:00 ಗಂಟೆ ಸಮಯಕ್ಕೆ ಮಾನಸಿಕ ಸೀಮಿತ ಕಳೆದುಕೊಂಡು ಮನೆಯ ಹಿಂಭಾಗ ಇರುವ ಬಾವಿಗೆ ಹಾರಿ  ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 07/ 2022 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-02-2022 09:39 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080