ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ಸುರೇಶ (44), ತಂದೆ: ಗೋವಿಂದ ನಾಯ್ಕ, ವಾಸ: ನೀರುಕೊಡ್ಲು ಮನೆ ನೇರಳಕಟ್ಟೆ, ಕರ್ಕುಂಜೆ ಗ್ರಾಮ ಕುಂದಾಪುರ ತಾಲೂಕು ಇವರ ಅಣ್ಣ ರಮೇಶ (55) ರವರು ದಿನಾಂಕ 07/05/2021 ರಂದು ಬೆಳಿಗ್ಗೆ 08:00 ಗಂಟೆಗೆ ಮನೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ಬೊಬ್ಬೆ ಹೊಡೆಯುತ್ತಿದ್ದು ಅವರನ್ನು ಚಿಕಿತ್ಸೆಯ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲು ಮಾಡುವಂತೆ ತಿಳಿಸಿದ ಮೇರೆಗೆ ದಾಖಲು ಮಾಡಿದ್ದು  ದಿನಾಂಕ 12/05/20201 ರಂದು 14:05 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು , ಪಿರ್ಯಾದಿದಾರರ ಅಣ್ಣ ವಯೋವೃದ್ದರಾಗಿದ್ದು ಅಂಗವಿಕಲರಾಗಿದ್ದು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 13/2021 ಕಲಂ:  174  ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.   

ಇತರ ಪ್ರಕರಣಗಳು

  • ಉಡುಪಿ: ಪಿರ್ಯಾದಿದಾರರಾದ ಬಿ ಪ್ರೇಮಾನಂದ ಶೆಟ್ಟಿ (70), ತಂದೆ: ಶೀನಪ್ಪ ಶೆಟ್ಟಿ, ವಾಸ: ಸುಂದರಿ, ಕಾಂಗ್ರೆಸ್ ಭವನದ ಬಳಿ, ಬ್ರಹ್ಮಗಿರಿ, ಉಡುಪಿ ತಾಲೂಕು ಮತ್ತು ಜಿಲ್ಲೆ ಇವರು, ಜಯರಾಮ್ ಶೆಟ್ಟಿ ಮತ್ತು ಆರೋಪಿ ಸುಧೀರ್ ಆಚಾರ್ಯ  ಸೇರಿ M/S NIREL ಎಂಬ ಪಾಲುದಾರಿಕೆ ಸಂಸ್ಥೆಯನ್ನು  ಮಾಡಿಕೊಂಡಿರುತ್ತಾರೆ. ದಿನಾಂಕ 18/03/2011 ರಂದು ಪಿರ್ಯಾದಿದಾರರು ಹಾಗೂ ಜಯರಾಮ್ ಶೆಟ್ಟಿ ರವರು ಬಡಗಬೆಟ್ಟು ಗ್ರಾಮದ ಸರ್ವೇ ನಂಬ್ರ 32/2ಬಿ ರಲ್ಲಿ 18 ಸೆಂಟ್ಸ್ ಸ್ಥಿರಾಸ್ತಿಯನ್ನು ತ್ಯಾಗರಾಜ್ ರವರಿಂದ ಖರೀದಿ ಮಾಡಿಕೊಂಡಿದ್ದು,  ಸ್ಥಿರಾಸ್ತಿಯಲ್ಲಿ ಆರೋಪಿ ಸುಧೀರ್ ಆಚಾರ್ಯ  ಫ್ಲ್ಯಾಟ್ ಗಳನ್ನು ಕಟ್ಟಿ, ಮಾರಾಟ ಮಾಡಿ ಅದರಿಂದ ಬಂದ ಲಾಭವನ್ನು ಹಂಚಿಕೊಳ್ಳುವ ಎಂದು ಪಿರ್ಯಾದಿದಾರರನ್ನು ನಂಬಿಸಿ, ಆರೋಪಿ ಸುಧೀರ್ ಆಚಾರ್ಯ  ಸ್ಥಿರಾಸ್ತಿಯಲ್ಲಿ ಫ್ಲ್ಯಾಟ್ ಗಳನ್ನು ನಿರ್ಮಿಸಿ ಮಾರಾಟ ಮಾಡಿ ಅದರಲ್ಲಿ ಬಂದಂತಹ ಲಾಭವನ್ನು ಪಿರ್ಯಾದಿದಾರರಿಗೆ ಹಾಗೂ ಅದರ ಪಾಲುದಾರರಾದ ಜಯರಾಮ್ ರವರಿಗೆ ನೀಡದೇ ಮೋಸ ಮಾಡಿದ್ದು,  ಅಲ್ಲದೆ ಪಿರ್ಯಾದುದಾರರು ಹಣ ಕೇಳಲು ಹೋದಾಗ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 82/2021 ಕಲಂ: 420, 504,506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಗಂಗೊಳ್ಳಿ: ದಿನಾಂಕ 12/05/2021 ರಂದು ರತ್ನಾಕರ, ಹೆಡ್ ಕಾನ್ಸಟೇಬಲ್, ಗಂಗೊಳ್ಳಿ ಪೊಲೀಸ್ ಠಾಣೆ ಇವರು ತ್ರಾಸಿ ಗ್ರಾಮದ ತ್ರಾಸಿ ಜಂಕ್ಷನ್‌ ನಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವಾಗ (1) KA-47-V-0219 ACCESS-125 ನೇ ಸ್ಕೂಟರನ್ನು ಅದರ ಸವಾರ ಅಬ್ದುಲ್ ಖಾದೀರ್ (26) ಎಂಬುವವರು ಸಕಾರಣವಿಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುವ ಮೂಲಕ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತವು ಕೋವಿಡ್-19 ತಡೆಗಟ್ಟಲು ಹೊರಡಿಸಿದ ಲಾಕ್‌ಡೌನ್ ಆದೇಶ/ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದು, ಮಾನವನ ಪ್ರಾಣಕ್ಕೆ ಅಪಾಯಕಾರಿಯಾದ ಕೋವಿಡ್-19 ಸೋಂಕು ಹರಡುವ ಸಂಭವ ಇದೆ ಎಂದು ತಿಳಿದೂ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 43/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ದಿನಾಂಕ 12/05/2021 ರಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ರವೀಶ್ ಹೊಳ್ಳ ಇವರು ಕೋವಿಡ್‌-19 ವೈರಾಣು ಸಾಂಕ್ರಾಮಿಕ ರೋಗದ ಹರಡುವಿಕೆ ನಿಯಂತ್ರಣದ ಸಂಬಂಧ ಮುಂಜಾಗ್ರತಾ ಕ್ರಮದ ಬಗ್ಗೆ  ಕರ್ತವ್ಯದಲ್ಲಿರುವ ವೇಳೆ ಕುಂದಾಪುರ ತಾಲೂಕು  ಕಾವ್ರಾಡಿ ಗ್ರಾಮದ  ದೂಪದಕಟ್ಟೆ ಬಳಿ  KA-20-EV-7716  ನೇ ವಾಹನದ ಚಾಲಕನು ತನ್ನ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು.ವಾಹನ ಚಾಲಕನು ಕೋವಿಡ್‌-19 ಸಂಬಂಧ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸದೆ, ನಿರ್ಲಕ್ಷತನ ತೋರಿಸಿರುವುದಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 35/2021 ಕಲಂ:  269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾಪು: ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ದಿನಾಂಕ 10/05/2021 ,  ಬೆಳಿಗ್ಗೆ 6:00 ಗಂಟೆಯಿಂದ ದಿನಾಂಕ 24/05/2021ರ ಬೆಳಿಗ್ಗೆ 6:00 ಗಂಟೆಯ ವರೆಗೆ ಲಾಕ್ ಡೌನ್ ಘೋಷಿಸಿದ್ದು ಈ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ತಿಮ್ಮೇಶ ಬಿ ಎನ್ , ಪೊಲೀಸ್ ಉಪನಿರೀಕ್ಷಕರು (ಅಪರಾಧ), ಕಾಪು ಪೊಲೀಸ್ ಠಾಣೆ ಇವರು ಸಿಬ್ಬಂದಿಯವರೊಂದಿಗೆ  ದಿನಾಂಕ 12/05/2021 ರಂದು 11:00 ಗಂಟೆಯಿಂದ 14:00 ಗಂಟೆಯವರೆಗೆ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ಕಾಪು ಪೇಟೆಯಲ್ಲಿ ಸಿಬ್ಬಂದಿಯವರ ಸಹಾಯದಿಂದ ಸಾರ್ವಜನಿಕ ರಸ್ತೆಯಲ್ಲಿ ವಾಹನ ತಪಾಸಣೆಯಲ್ಲಿರುತ್ತಾ  ಅಗತ್ಯ ವಸ್ತುಗಳ ಖರೀದಿ ಬಗ್ಗೆ ಸರಕಾರ ನಿಗದಿಪಡಿಸಿದ ಸಮಯ ಅವಕಾಶದ ಬಳಿಕವೂ  ಅನಗತ್ಯವಾಗಿ ಗುಂಪು ಸೇರಿ  ಸಂಚರಿಸುತ್ತಿರುವವರ ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸಿ ಪರಿಶೀಲಿಸಿದಲ್ಲಿ  1. ಟಿವಿಎಸ್ ಕಂಪೆನಿಯ ಸ್ಟಾರ್ ಸಿಟಿ ಕೆ.ಎ. 20 ಇ.ಎಸ್ 1011  ನೇದರ ಸವಾರನ ಹೆಸರು  ಮಹಮ್ಮದ್ ಶಾಹಿಲ್ (21), ತಂದೆ: ಸುಲೇಮಾನ್, ವಾಸ: ಕಾಲೇಜು ರೋಡ್ ಮಲ್ಲಾರು ಗ್ರಾಮ  ಕಾಪು ತಾಲೂಕು ಇವರ ಓಡಾಟದ ಕಾರಣವನ್ನು ವಿಚಾರಿಸಲಾಗಿ, ಯಾವುದೇ ತುರ್ತು ಕಾರಣವಿಲ್ಲದೇ, ಅನಗತ್ಯವಾಗಿ ಸಂಚರಿಸುವುದು ಕಂಡು ಬಂದಿರುತ್ತದೆ. ಹಾಗೂ 2) ಪಲ್ಸರ್ ಮೋಟಾರ್ ಸೈಕಲ್ ನಂಬ್ರ ಕೆ.ಎ. 20 ಎಲ್- 9062  ಸವಾರನು ತನ್ನ ಬಾಬ್ತು ಮೋಟಾರು ಸೈಕಲ್ ನ್ನು ಹೆಲ್ಮೆಟ್ ಇಲ್ಲದೇ ಸವಾರಿಮಾಡಿಕೊಂಡು ಹೊಗುತ್ತಿದ್ದಾಗ ಸ್ಥಳದಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ನಮ್ಮನ್ನು ಕಂಡು ಸ್ಥಳದಲ್ಲಿ ತನ್ನ  ಮೋಟಾರು ಸೈಕಲನ್ನು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿರುತ್ತಾನೆ. ಆರೋಪಿಗಳು  ಘನ ಕರ್ನಾಟಕ ಸರಕಾರವು ಕೋವಿಡ್‌ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 72/2021 ಕಲಂ: 269 ಐಪಿಸಿ ಮತ್ತು ಕಲಂ: 129 ಜೊತೆಗೆ 177 ಐಎಂವಿ ಆಕ್ಟ್ ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾಪು: ತಿಮ್ಮೇಶ ಬಿ ಎನ್ , ಪೊಲೀಸ್ ಉಪನಿರೀಕ್ಷಕರು (ಅಪರಾಧ), ಕಾಪು ಪೊಲೀಸ್ ಠಾಣೆ ಇವರು ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ದಿನಾಂಕ 10/05/2021, ಬೆಳಿಗ್ಗೆ 6:00 ಗಂಟೆಯಿಂದ ದಿನಾಂಕ 24/05/2021ರ ಬೆಳಿಗ್ಗೆ 6:00 ಗಂಟೆಯ ವರೆಗೆ ಲಾಕ್ ಡೌನ್ ಘೋಷಿಸಿದ್ದು ಈ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಮೇಲಾಧಿಕಾರಿಯವರ ಆದೇಶದಂತೆ ದಿನಾಂಕ 12/05/2021 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಪಾಂಗಾಳಾ ಗ್ರಾಮದ ಪಾಂಗಾಳಗುಡ್ಡೆ ಎಂಬಲ್ಲಿ ಶಿವ ಪೂಜಾರಿ ಎಂಬುವವರು ತನ್ನ ದಿನಸಿ ಅಂಗಡಿಯನ್ನು ತೆರೆದು ತನ್ನ ಅಂಗಡಿಯ ಎದುರಿನಲ್ಲಿ ಸಾರ್ವಜನಿಕರಿಗೆ ಮಧ್ಯ ಸೇವನೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿರುವುದಾಗಿ ಮಾಹಿತಿ ಬಂದಂತೆ ಸಿಬ್ಬಂದಿಯವರೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ಹೋಗಿ ಶಿವ ಪೂಜಾರಿ ರವರ ಅಂಗಡಿಯಿಂದ ಸ್ವಲ್ಪ ದೂರದಲ್ಲಿ ಮರೆಯಲ್ಲಿ ನಿಂತು ನೋಡಲಾಗಿ ಶಿವ ಪೂಜಾರಿಯವರು ತನ್ನ ಅಂಗಡಿ ತೆರೆದು ಸಾರ್ವಜನಿಕರಿಗೆ ದಿನಸಿ ಸಾಮಾಗ್ರಿಗಳನ್ನು ನೀಡುತ್ತಿರುವುದು ಕಂಡು ಬಂದಿದ್ದು, ಅಲ್ಲದೇ ಅಂಗಡಿಯ ಹೊರಗಡೆ ಮರದ ಬೆಂಚ್ ನಲ್ಲಿ ಕುಳಿತ್ತಿದ್ದ ಇಬ್ಬರು ವ್ಯಕ್ತಿಗಳು ಯಾವುದೋ ಪಾನೀಯವನ್ನು ಸೇವಿಸುತ್ತಿರುವಂತೆ ಕಂಡು ಬಂದಿದ್ದು, ಬೆಂಚ್ ಮೇಲೆ ಕುಳಿತ ವ್ಯಕ್ತಿಗಳು ಮದ್ಯ ಸೇವನೆ ಮಾಡುತ್ತಿರುವುದನ್ನು ಖಚಿತ ಪಡಿಸಿಕೊಂಡು ದಾಳಿ ನಡೆಸಿದ್ದು,  ಆ ವೇಳೆ ಅಂಗಡಿಯಲ್ಲಿ ದಿನಸಿ ಖರೀದಿ ಮಾಡುತ್ತಿದ್ದ ಹಾಗೂ ಬೆಂಚ್ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಗಳು ಓಡಿ ಹೋಗಿದ್ದು ಅಂಗಡಿಯ ಒಳಗಿದ್ದ ಶಿವ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಿಸಿದಲ್ಲಿ ತನ್ನ ಹೆಸರು ಶಿವ ಎಮ್ ಪೂಜಾರಿ, ಪ್ರಾಯ 50 ವರ್ಷ,ತಂದೆ: ದಿ: ಮಹಾಬಲ ಪೂಜಾರಿ, ವಾಸ: ಶಿವಛಾಯಾ, ಅಂಬಾಡಿ ಬೈಲು, ಮಟ್ಟು ಗ್ರಾಮ,ಕಾಪು ಎಂಬುದಾಗಿ ತಿಳಿಸಿದ್ದು,  ತಾನು ಕೋವಿಡ್-19 ಗೆ ಸಂಬಂದಿಸಿದಂತೆ ರಾಜ್ಯ ಸರಕಾರದ ಆದೇಶವನ್ನು ಉಲ್ಲಂಘಿಸಿ ತನ್ನ ದಿನಸಿ ಅಂಗಡಿಯನ್ನು ತೆರೆದಿದ್ದು ಅಲ್ಲದೇ ತನ್ನ ಅಂಗಡಿಯ ಹೊರಗಡೆ ಸಾರ್ವಜನಿಕರಿಗೆ ಮದ್ಯ ಸೇವನೆ ಮಾಡಲು ಅನುಮತಿ ನೀಡಿರುವುದಾಗಿ ಒಪ್ಪಿಕೊಂಡಿದ್ದು ಆತನ ಬಳಿ ಮಧ್ಯ ಸೇವನೆ ಮಾಡುತ್ತಿದ್ದವರ ಹೆಸರು ಕೇಳಲಾಗಿ ಅವರುಗಳ ಹೆಸರು ದಿನೇಶ್ ಪೂಜಾರಿ ಪಾಂಗಾಳ ಮತ್ತು ಕೃಷ್ಣಪ್ಪ ಪೂಜಾರಿ ಪಾಂಗಾಳ ಎಂದು ತಿಳಿಸಿರುತ್ತಾನೆ. ಸ್ಥಳವನ್ನು ಪರಿಶೀಲಿಸಿದಲ್ಲಿ ದಿನೇಶ್ ಪೂಜಾರಿ ಪಾಂಗಾಳ ಮತ್ತು ಕೃಷ್ಣಪ್ಪ ಪೂಜಾರಿ ಪಾಂಗಾಳ ರವರು ಸೇವಿಸುತ್ತಿದ್ದ ಮೈಸೂರು ಲ್ಯಾನ್ಸರ್  ಎಂದು ಬರೆದ 180 ಎಮ್ ಎಲ್ ನ ಅರ್ಧ ಖಾಲಿಯಾದ ಎರಡು ಮದ್ಯದ ಬಾಟಲಿಗಳು ಮತ್ತು ಮದ್ಯ ಸೇವಿಸಲು ಉಪಯೋಗಿಸಿದ ಎರಡು ಪ್ಲಾಸ್ಟಿಕ್ ಗ್ಲಾಸ್ ಗಳಿದ್ದು. ಆರೋಪಿಗಳು ಘನ ಕರ್ನಾಟಕ ಸರಕಾರವು ಕೋವಿಡ್‌ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ನಿಯಮ ಉಲ್ಲಂಘಿಸಿರುವುದಾಗಿದೆ.   ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 73/2021 ಕಲಂ: 15(A), 32(B), KE Act ಕಲಂ: 269 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 26/04/2021 ರಿಂದ 12/05/2021 ರವರೆಗೆ ಕೋವಿಡ್ ಕರ್ಪ್ಯೂ ವಿಧಿಸಿದ್ದು ಕರ್ಪ್ಯೂ ಜ್ಯಾರಿಗೊಳಿಸುವ ಬಗ್ಗೆ ಆದೇಶ ಹೊರಡಿಸಿದ್ದು ಈ ಬಗ್ಗೆ  ದಿನಾಂಕ 13/05/2021 ರಂದು ಸುದರ್ಶನ್ ಬಿ.ಎನ್, ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಸಂಚಾರ ಪೊಲೀಸ್ ಠಾಣೆ ಇವರು ವಕ್ವಾಡಿ ಗ್ರಾಮದ ವಕ್ವಾಡಿ ಕ್ರಾಸ್ ವಾಹನ ತಪಾಸಣೆ ಕರ್ತವ್ಯದಲ್ಲಿರುವಾಗ 11:00 ಗಂಟೆಯಿಂದ 19:30 ಗಂಟೆಯ ಮದ್ಯಾವಧಿಯಲ್ಲಿ KA-20-RT-9073 ಮೋಟಾರ್ ಸೈಕಲನ್ನು ಆಪಾದಿತನು ಚಲಾಯಿಸಿಕೊಂಡು ಬರುತ್ತಿದ್ದನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ  ದ್ವಿಚಕ್ರ ವಾಹನಗಳನ್ನು ಅದರ ವಾಹನ ಸವಾರರು ಚಲಾಯಿಸಿಕೊಂಡು ಸಕಾರಣವಿಲ್ಲದೆ ಅನಗತ್ಯವಾಗಿ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುತ್ತದೆ. ಆಪಾದಿತನು ಕೋವಿಡ್ – 2019  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು  ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು  ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಅನಾವಶ್ಯಕವಾಗಿ ಸಕಾರಣವಿಲ್ಲದೆ ಸಾರ್ವಜನಿಕ  ಸ್ಥಳದಲ್ಲಿ  ಸಂಚರಿಸಿಕೊಂಡು ನಿರ್ಲಕ್ಷತನದಿಂದ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 63/2021  ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 13-05-2021 10:03 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080