ಅಭಿಪ್ರಾಯ / ಸಲಹೆಗಳು

ಜುಗಾರಿ ಪ್ರಕರಣಗಳು

  • ಕೋಟ: ದಿನಾಂಕ 12/06/2021  ರಂದು ಬೆಳಿಗ್ಗೆ ಸಂತೋಷ್ ಬಿ.ಪಿ,  ಪೊಲೀಸ್ ಉಪನಿರೀಕ್ಷಕರು ಕೋಟ ಪೊಲೀಸ್ ಠಾಣೆ ಇವರಿಗೆ ಕೋಟ ಗಿಳಿಯಾರು ಗ್ರಾಮ ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಗುಂಡ್ಮಿ ಗ್ರಾಮದ ಚೆಲ್ಲಮಕ್ಕಿ ಎಂಬಲ್ಲಿ ಮಯ್ಯಾದಿರವರ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿರುವ ಬಗ್ಗೆ ಬಂದ ವರ್ತಮಾನದಂತೆ  ದಾಳಿ ನಡೆಸಿ  ಇಸ್ಪಿಟು ಜುಗಾರಿ ಆಟ ಆಡುತ್ತಿದ್ದ 1) ಅಲ್ತಾಫ್ (36), ತಂದೆ: ಅನ್ವರ್ ಸಾಹೇಬ್ , ವಾಸ: ಕೋಡಿ ರಸ್ತೆ, ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ, 2) ಉಸ್ಮಾನ್( 53), ತಂದೆ: ದಿ ಸುಫಿ ಬ್ಯಾರಿ, ವಾಸ: ಕೋಡಿ ರಸ್ತೆ, ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ, 3) ಇಬ್ರಾಹಿಂ(48), ತಂದೆ: ಬಿ.ಕೆ ಇಸ್ಮಾಯಿಲ್ , ವಾಸ: ಚೆಲ್ಲಮಕ್ಕಿ,  ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ, 4) ಅನೀಫ್(26). ತಂದೆ: ಹಮೇದ್ ಬ್ಯಾರಿ, ವಾಸ: ಕೋಡಿ ರಸ್ತೆ, ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ, 5) ಅಬ್ಬೂಬಕರ್ (46), ತಂದೆ: ಸುಫಿ ಬ್ಯಾರಿ, ವಾಸ: ಕೋಡಿ ರಸ್ತೆ, ಗುಂಡ್ಮಿ ಗ್ರಾಮ ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ ಇವರನ್ನು ವಶಕ್ಕೆ ಪಡೆದು ಅವರ ಬಳಿ ಜುಗಾರಿ ಆಟಕ್ಕೆ ಬಳಸಿದ ರೂಪಾಯಿ 11,150/-, ಇಸ್ಪೀಟು ಎಲೆ -52 ನ್ನು ಹಾಗೂ ಕಾಗದದ ಪೇಪರನ್ನು ಮುಂದಿನ ಕಾನೂನು ಕ್ರಮದ ಬಗ್ಗೆ ಸ್ವಾಧೀನಪಡಿಸಿ ಕೊಂಡಿರುವುದಾಗಿದೆ. ಪ್ರಸ್ತುತ  ಕೋವಿದ್ -19  ಕೊರೋನಾ  ವೈರಸ್ ವ್ಯಾಪಕವಾಗಿ  ಹರಡುತ್ತಿರುವ  ಹಿನ್ನಲೆಯಲ್ಲಿ  ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಲಾಕ್ ಡೌನ್ ಘೋಷಿಸಿ ಜನರ ಅನಗತ್ಯ  ಒಟ್ಟುಗೂಡದಂತೆ  ನಿಷೇಧಿಸಿದ್ದರೂ ಸಾಂಕ್ರಾಮಿಕ ರೋಗ ಹರಡುವ ಸಂಭವ ಇದೆ ಎಂದು ತಿಳಿದೂ  ಕೂಡಾ  ಅನಗತ್ಯ ಒಟ್ಟುಗೂಡಿ   ಸರ್ಕಾರದ ಆದೇಶವನ್ನು  ಉಲ್ಲಂಘನೆ ಮಾಡಿರುವುದಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 120/2021 ಕಲಂ: 269 IPC, 87 KP ACT  ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ದಿನಾಂಕ 12/06/2021 ರಂದು ಸದಾಶಿವ ಆರ್. ಗವರೋಜಿ, ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಪೊಲೀಸ್‌ ಠಾಣೆ ಇವರಿಗೆ ಕುಂದಾಪುರ ತಾಲೂಕು ವಕ್ವಾಡಿ ಗ್ರಾಮದ ಗುರುಕುಲ ಪಬ್ಲಿಕ್ ಸ್ಕೂಲ್ ಪಕ್ಕದ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಆಟವಾಡುತ್ತಿದ್ದಾರೆಂದು ಬಂದ  ಮಾಹಿತಿ ಮೇರೆಗೆ  ನೋಡಲಾಗಿ ಸಾರ್ವಜನಿಕ ಸ್ಥಳದಲ್ಲಿ 7 ಜನರು ಕುಳಿತುಕೊಂಡಿದ್ದು ಅಂದರ್ ಬಾಹರ್ ಎಂಬ ಇಸ್ಪೀಟ್ ಆಟದಲ್ಲಿ ಹಣವನ್ನು ಪಣವಾಗಿಟ್ಟು  ಜೂಜಾಟ ಆಡುತ್ತಿರುವುದನ್ನು ಖಚಿತಪಡಿಸಿಕೊಂಡು  ದಾಳಿ ಮಾಡಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ 1). ನಾಗರಾಜ  ಪೂಜಾರಿ (34), ತಂದೆ: ವೆಂಕಟೇಶ ಪೂಜಾರಿ  ಪೂಜಾರಿ, ವಾಸ: ಮಾಲತಿ ನಿಲಯ ಹೆಚ್.ಎಮ್.ಟಿ ರೋಡ್ ಕೋಣಿ   ಗ್ರಾಮ, ಕುಂದಾಪುರ ತಾಲೂಕು, 2) ಹರೀಶ್ ದೇವಾಡಿಗ (26) ,ತಂದೆ: ಬಾಬು ದೇವಾಡಿಗ, ದೇವಾಡಿರ ಬೆಟ್ಟು  ಗುರುಕುಲ ರಸ್ತೆ, ನವನಗರ  ವಕ್ವಾಡಿ ಗ್ರಾಮ ಕುಂದಾಪುರ ತಾಲೂಕು, 3). ಸಂದೀಪ ಪೂಜಾರಿ (35), ತಂದೆ: ನರಸಿಂಹ ಪೂಜಾರಿ, ವಾಸ: ಪ್ರೀತಿ ನಿಲಯ ಹೆಚ್.ಎಮ್ .ಟಿ ರೋಡ್ ಕೋಣಿ ಗ್ರಾಮ ಕುಂದಾಪುರ ತಾಲೂಕು ಇವರನ್ನು ಸಿಬ್ಬಂದಿಗಳ  ಸಹಾಯದಿಂದ ಹಿಡಿದಿದ್ದು, 4 ಜನರು ಓಡಿಹೋಗಿರುತ್ತಾರೆ. ಆರೋಪಿತರು ಇಸ್ಪೀಟು ಜುಗಾರಿ ಆಟಕ್ಕೆ ಉಪಯೋಗಿಸಿದ ನಗದು ರೂಪಾಯಿ 3720/, ಹಳೆಯ ದಿನಪತ್ರಿಕೆ-1, ಇಸ್ಪೀಟು ಎಲೆಗಳು-52, ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಆರೋಪಿತರು ಕೋವಿಡ್-19 ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ಹಾಗೂ ಮಾನ್ಯ ಜಿಲ್ಲಾ ದಂಡಾಧಿಕಾರಿಗಳ ಆದೇಶದ ಬಗ್ಗೆ ತಿಳುವಳಿಕೆ ಇದ್ದರೂ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಆರೋಪಿತರು ಒಟ್ಟು ಸೇರಿಕೊಂಡು  ಜೂಜಾಟದಲ್ಲಿ ಪಾಲುಗೊಂಡಿದ್ದು, ಅಪಾಯಕಾರಿಯಾದ ರೋಗದ ಸೋಂಕನ್ನು ತಡೆಗಟ್ಟುವಲ್ಲಿ ನಿರ್ಲಕ್ಷ್ಯತನ ತೋರಿ ಅಪರಾಧ ಎಸಗಿರುತ್ತಾರೆ.  ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 79/2021  ಕಲಂ:269 IPC ಮತ್ತು  87 KP ACT   ರಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 13-06-2021 10:34 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080