ಅಭಿಪ್ರಾಯ / ಸಲಹೆಗಳು

ಅಫಘಾತ ಪ್ರಕರಣ

  • ಮಣಿಪಾಲ : ದಿನಾಂಕ: 10.06.2022 ರಂದು ಪಿರ್ಯಾದಿ ಸುರೇಶ ಇವರು ತಮ್ಮ ಬಾಬ್ತು KA 20 B 9228 ಆಟೋ ರಿಕ್ಷಾವನ್ನು ವ್ಯಾಲಿವೂ – ಕಾಯಿನ್ ಸರ್ಕಲ್ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಸಮಯ ರಾತ್ರಿ 10:45 ಗಂಟೆಗೆ ಮಣಿಪಾಲ ಕೆ ಎಂ ಸಿ ಹಳೆ ವಸತಿ ಗೃಹದ ಕ್ರಾಸ್ ಬಳಿ  ಎದುರಿನಿಮದ ಅಂದರೆ ಕಾಯಿನ್ ಸರ್ಕಲ್ ಕಡೆಯಿಂದ ವ್ಯಾಲಿವೂ ಕಡೆಗೆ KA 20 EX 9548 ನೇ ಟಿ ವಿ ಎಸ್ ಸುಜುಕಿ ಎಕ್ಸೆಸ್ ಮೋಟಾರ್ ಸೈಕಲ್ ನ ಸವಾರ ಪ್ರೇಮ್ ಕಿರಣ ಎಂಬುವರು ತನ್ನ  ಮೋಟಾರ್ ಸೈಕಲ್ ನ್ನು  ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಎಡಭಾಗದಲ್ಲಿ ಹೋಗುತ್ತಿದ್ದ ಪಿರ್ಯದಿದಾರರ ಆಟೋ ರಿಕ್ಷಾದ ಬಲ ಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರೇಮ್ ಕಿರಣ ರವರು ಮೋಟಾರ್ ಸೈಕಲ್ ನ ಸಮೇತ ರಸ್ತೆಗೆ ಬಿದ್ದಿದ್ದು ಅವರ ಬಲಕಾಲಿನ ಮೊಣಗಂಟಿನ ಬಳಿ ಗುದ್ದಿದ ಒಳನೋವು ಮತ್ತು ಕೈಗಳಿಗೆ ತರಚಿದ ಗಾಯ ಉಂಟಾಗಿರುತ್ತದೆ, ಮತ್ತು ಪಿರ್ಯಾದಿದಾರರ ಆಟೋ ರಿಕ್ಷಾದ ಬಲಭಾಗ ಹಾಗೂ ಮೋಟಾರ್ ಸೈಕಲ್ ಜಖಂ ಗೊಂಡಿರುತ್ತದೆ, ಗಾಯಗೊಂಡ ಪ್ರೇಮ್ ಕಿರಣ ರವರು ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 83/2022 ಕಲಂ 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಮಟ್ಕಾ ಜುಗಾರಿ ಪ್ರಕರಣ

  • ಉಡುಪಿ: ಮಹೇಶ್ ಟಿ.ಎಂ, ಪಿಎಸ್‌ಐ, ಉಡುಪಿ ನಗರ ಪೊಲೀಸ್‌ ಠಾಣೆ ಇವರು ದಿನಾಂಕ: 13/06/2022 ರಂದು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಉಡುಪಿ ಸಿಟಿ ಬಸ್‌ ನಿಲ್ದಾಣದ ಬಳಿಯಲ್ಲಿರುವ ಮಲ್ಪೆ ಬಸ್‌ ನಿಲ್ದಾಣದ  ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಖಚಿತ ಮಾಹಿತಿ ದೊರೆತ ಮೇರೆಗೆ ಪಂಚರು ಮತ್ತು ಸಿಬ್ಬಂದಿಯವರೊಂದಿಗೆ ಬೆಳಿಗ್ಗೆ  08:20  ಗಂಟೆಗೆ ಸ್ಥಳಕ್ಕೆ ತೆರಳಿ ಖಚಿತಪಡಿಸಿಕೊಂಡು 08:25 ಗಂಟೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಸಂಜೀವ ದೇವಾಡಿಗ ಉಡುಪಿ ಮತ್ತು ಕುಶಾಲ್ ಶೆಟ್ಟಿ ಕುಂದಾಪುರ ಎಂಬವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾವು ಕಮೀಷನ್‌ ಹಣಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿದ್ದು, ತಾವು ಸಂಗ್ರಹಿಸುತ್ತಿದ್ದ ಹಣವನ್ನು 3ನೇ ಆಪಾದಿತ ಲಿಯೋ ಎಂಬವರ ಪರವಾಗಿ  ಆತನ  ಹೆಂಡತಿಯಾದ  4ನೇ  ಆರೋಪಿತೆ ಶ್ರೀಮತಿ ಗ್ರೆಟ್ಟಾ ಬಾಯಿರವರಿಗೆ ಕೊಡುತ್ತಿರುವುದಾಗಿ ತಿಳಿಸಿದ್ದು, ಆಪಾದಿತರ  ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂ 6,660/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1, ಬಾಲ್‌ಪೆನ್‌-1 ಮತ್ತು ಆಪಾದಿತರ  ವಶದಲ್ಲಿದ್ದ 4,000/- ರೂಪಾಯಿ ಮೌಲ್ಯದ ವಿವೋ ಮೊಬೈಲ್‌ ಫೋನ್‌-1, 1,000/- ರೂ. ಮೌಲ್ಯದ ನೋಕಿಯಾ ಕಂಪೆನಿಯ ಕೀಪ್ಯಾಡ್ ಮೊಬೈಲ್‌ ಫೋನ್‌-1 ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 95/2022 ಕಲಂ :  95/2022 ಕಲಂ: 78 (i) (iii) Karnataka Police (Amendment) ACT-2021 ರಂತೆ ಪ್ರಕರಣ ದಾಖಲಾಗಿರುತ್ತದೆ. 

ಅಸ್ವಾಭಾವಿಕ ಮರಣ ಪ್ರಕರಣ

  • ಬ್ರಹ್ಮಾವರ: ಪಿರ್ಯಾದಿ ಶ್ರವಣ್‌ ಠಾಕೂರ್‌ ಇವರ ತಂದೆಯಾದ ಶಂಕರ್‌ ಠಾಕೂರ್‌ ಪ್ರಾಯ: 65 ವರ್ಷ ಎಂಬವರು ಬ್ರಹ್ಮಾವರ  ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಪಂಚಾಯತ್‌ಗೆ ಸಂಬಂಧಿಸಿದ ಕಟ್ಟಡದಲ್ಲಿ ಬೀಡ ಅಂಗಡಿಯನ್ನು ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು, ಅವರಿಗೆ ಸುಮಾರು 5 ವರ್ಷಗಳಿಂದ ಫೀಡ್ಸ್‌ ಖಾಯಿಲೆ ಇದ್ದು, ಅಲ್ಲದೇ ಅವರಿಗೆ ಬಿ.ಪಿ ಹಾಗೂ ಶುಗರ್‌ ಖಾಯಿಲೆಗಳು ಇರುತ್ತದೆ. ಶಂಕರ್‌ ಠಾಕೂರ್‌ ರವರಿಗಿರುವ ಬಿ.ಪಿ, ಶುಗರ್‌ ಹಾಗೂ ಫೀಡ್ಸ್‌ ಖಾಯಿಲೆಯಿಂದಲೊ ಅಥವಾ ಇತರೇ ಯಾವುದೋ ದೈಹಿಕ ಖಾಯಿಲೆಯಿಂದಲೊ  ದಿನಾಂಕ: 12.06.2022 ರಂದು ರಂದು ಸಂಜೆ 7:30 ಗಂಟೆಯಿಂದ ದಿನಾಂಕ 13.06.2022 ರಂದು ಬೆಳಿಗ್ಗೆ 7:00 ಗಂಟೆಯ ಮಧ್ಯಾವದಿಯಲ್ಲಿ ತನ್ನ ಅಂಗಡಿಯಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 28/2022 ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 13-06-2022 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080