ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ

  • ಶಂಕರನಾರಾಯಣ: ಫಿರ್ಯಾದಿ ಸುಜನ್   ಕುಲಾಲ್   ಇವರು ದಿನಾಂಕ  15.01.2023 ರಂದು 17;35  ಘಂಟೆಗೆ   ಕೆಎ. 20  ಇಆರ್. 9037  ನೇ   ನಂಬ್ರದ   ಮೋಟಾರ್ ಸೈಕಲ್‌‌‌ನಲ್ಲಿ ಕುಂದಾಪುರ ತಾಲೂಕಿನ ಕುಳ್ಳುಂಜೆ  ಗ್ರಾಮದ   ಮಾವಿನಕೊಡ್ಲು ಮುಂಡಕೋಡು  ದೇವಸ್ಥಾನದ  ಬಳಿ  ಹೋಗುತ್ತಿರುವಾಗ  ಆರೋಪಿತ ಚಂದ್ರ  ನಾಯ್ಕ ಕೆಎ.20  ಇಕೆ.5057 ನೇ ನಂಬ್ರದ ಮೋಟಾರ ಸೈಕಲ್‌ನ್ನು ಹಾಲಾಡಿ ಕಡೆಯಿಂದ ಅಮ್ಯಾಸೆಬೈಲ್  ಕಡೆಗೆ  ಅತೀ ವೇಗ  ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಯಾವುದೇ ಮುನ್ಸೂಚನೇ ನೀಡದೇ ಒಮ್ಮೆಲೇ ಬಾಗಿಮನೆ  ಕಡೆಗೆ  ಹೋಗುವ ರಸ್ತೆಯಲ್ಲಿ  ಚಲಾಯಿಸಿ  ಫಿರ್ಯಧುದಾರರು  ಚಲಾಯಿಸಿಕೊಂಡಿದ್ದ  ಮೋಟಾರ್ ಸೈಕಲ್‌‌ಗೆ ಡಿಕ್ಕಿ  ಹೊಡೆದಿರುತ್ತಾನೆ, ಇದರ  ಪರಿಣಾಮ ಎರಡು ಮೋಟಾರ್  ಸೈಕಲ್ ಸವಾರರು ರಸ್ತೆಯ ಮೇಲೆ ಬಿದ್ದು,  ಗಾಯಗೊಂಡಿದ್ದು, ಅದರಲ್ಲಿ  ಫಿರ್ಯಾದುದಾರರ  ಬಲಕೈಗೆ ಮೂಳೆ ಮುರಿತದ ಗಾಯವಾಗಿದೆ, ಹಾಗೂ ಎಡಕಾಲಿಗೆ ತರಚಿದ  ಗಾಯವಾಗಿದೆ.  ಚಿಕಿತ್ಸೆಯ  ಬಗ್ಗೆ  ಕೊಟೇಶ್ವರ ಡಾ. ಎನ್.ಆರ್. ಆಚಾರ್ಯ  ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 08/2023 ಕಲಂ:  279,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 ಜುಗಾರಿ ಪ್ರಕರಣ

  • ಕುಂದಾಪುರ: ದಿನಾಂಕ 15/01/2023 ರಂದು ಪ್ರಸಾದ್ ಕುಮಾರ್ ಕೆ  ಪಿ.ಎಸ್.ಐ (ತನಿಖೆ)ರವರು ರೌಂಡ್ಸ್  ಕರ್ತವ್ಯದಲ್ಲಿರುವಾಗ  ಕುಂದಾಪುರ ತಾಲೂಕು ಕುಂದಾಪುರ ಕಸಬಾ  ಗ್ರಾಮದ  ಮೀನು ಮಾರ್ಕೆಟ್  ರಸ್ತೆಯಲ್ಲಿರುವ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನದ  ಬಳಿ  ಸಾರ್ವಜನಿಕ  ಸ್ಥಳದಲ್ಲಿ ಅಂದರ್ ಬಾಹರ್ ಎಂಬ ಜುಗಾರಿ ಆಟ ಆಡುತ್ತಿದ್ದಾರೆಂದು ಮಾನ್ಯ ಪೊಲೀಸ್ ಉಪಾಧೀಕ್ಷಕರು ಕುಂದಾಫುರ ಉಪವಿಭಾಗ ಇವರಿಗೆ ದೊರೆತ ಖಚಿತ ಮಾಹಿತಿಯಂತೆ ದಾಳಿ ನಡೆಸಲು ಆದೇಶ  ನೀಡಿದ ಮೇರೆಗೆ ಪಂಚರು ಹಾಗೂ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಠಾಣೆಯಿಂದ 16:15 ಗಂಟೆಗೆ ಹೊರಟು 16:30 ಗಂಟೆಗೆ ಕುಂದಾಪುರ ತಾಲೂಕು ಕುಂದಾಫುರ ಕಸಬಾ ಗ್ರಾಮದ ಮೀನು ಮಾರ್ಕೆಟ್ ರಸ್ತೆಯಲ್ಲಿ ರುವ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನದ ಬಳಿ ತಲುಪಿ ಇಲಾಖಾ ವಾಹನವನ್ನು ಮರೆಯಲ್ಲಿ ನಿಲ್ಲಿಸಿ ಅಲ್ಲಿಂದ ನಡೆದುಕೊಂಡು ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಎಂಬ ಇಸ್ಪೀಟ್ ಆಟದಲ್ಲಿ ಹಣವನ್ನು ಪಣವಾಗಿಟ್ಟು  ಜೂಜಾಟ ಆಡುತ್ತಿರುವುದನ್ನು ಖಚಿತಪಡಿಸಿಕೊಂಡು 16:45 ಗಂಟೆಗೆ ಸದ್ರಿ ಸ್ಥಳಕ್ಕೆ ದಾಳಿ ಮಾಡಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ 1). ಸತೀಶ ಪ್ರಾಯ: 35 ವರ್ಷ, ತಂದೆ: ಲಕ್ಷ್ಮೀನಾರಾಯಣ ಶೆರೆಗಾರ, ವಾಸ: ಗೋವೆಬೆಟ್ಟು, ನೇರಂಬಳ್ಳಿ ಹಂಗಳೂರು ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ 2). ಗಣೀಶ, ಪ್ರಾಯ: 32 ವರ್ಷ, ತಂದೆ: ರಾಜು ಪೂಜಾರಿ, ವಾಸ: ಗಿರಿಜಾ ನಿಲಯ, ಕಲ್ಯಾಣಸ್ವಾಮಿ ರಸ್ತೆ, ಕುಂದಾಪುರ ಕಸಬಾ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ 3). ಅನಿಲ್ ಡಿ’ಸೋಜಾ, ಪ್ರಾಯ: 43 ವರ್ಷ, ತಂದೆ: ತೋಮಸ್ ಡಿ’ಸೋಜಾ, ವಾಸ:  ಬಾಯಮ್ಮನ ಹಿತ್ಲು, ಮೀನು ಮಾರ್ಕೇಟ್ ರಸ್ತೆ, ಕುಂದಾಪುರ ಕಸಬಾ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ 4). ಸಂದೇಶ, ಪ್ರಾಯ: 31 ವರ್ಷ, ತಂದೆ: ಸುರೇಂದ್ರನಾಥ, ವಾಸ: ಅಂಚೆಮನೆ, ಮೀನು ಮಾರ್ಕೇಟ್ ರಸ್ತೆ, ಕುಂದಾಪುರ ಕಸಬಾ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಇವರುಗಳನ್ನು ಸಿಬ್ಬಂದಿಗಳ  ಸಹಾಯದಿಂದ  ಹಿಡಿದುಕೊಂಡು ಅವರ ಹೆಸರು ವಿಳಾಸ ವಿಚಾರಿಸಿ ಅವರುಗಳು ತಾವು ಇಸ್ಪೀಟ್ ಜುಗಾರಿ  ಆಟದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಟ ಆಟ ಆಡುತ್ತಿದ್ದುದಾಗಿ ಒಪ್ಪಿಕೊಂಡಿದ್ದ ರಿಂದ ಅವರನ್ನು ವಶಕ್ಕೆ ಪಡೆದು  ಆರೋಪಿತರು ಇಸ್ಪೀಟು ಜುಗಾರಿ ಆಟಕ್ಕೆ ಉಪಯೋಗಿಸಿದ ನಗದು ರೂ. 2140/-, ಹಳೆಯ ದಿನಪತ್ರಿಕೆ-1, ಇಸ್ಪೀಟು ಎಲೆಗಳು-52 ಇವುಗಳನ್ನು ಸ್ವಾಧೀನಪಡಿಸಿಕೊಂಡಿದ್ದು ಈ ಬಗ್ಗೆ ಕುಂದಾಪುರ  ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 06/2023  ಕಲಂ: ಮತ್ತು  87 KP ACT   ನಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 16-01-2023 06:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080