ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

  • ಬೈಂದೂರು: ದಿನಾಂಕ 14/09/2022 ರಂದು ರಾತ್ರಿ 9:00 ಗಂಟೆಗೆ ಪಿರ್ಯಾದಿದಾರರಾದ ಪುರುಷೋತ್ತಮ ತಾಂಡೇಲ್ (54), ತಂದೆ: ದಿ. ಗಿರಿಯ ತಾಂಡೆಲ್,  ವಾಸ: ಸೀಬರ್ಡ್ ಕಾಲೋನಿ ಹಾರವಾಡ ಗ್ರಾಮ,ಅಂಕೋಲಾ ತಾಲೂಕು ಉತ್ತರಕನ್ನಡ ಜಿಲ್ಲೆ ಇವರು ತನ್ನ KA-30-A-4807 ಲಾರಿಯನ್ನು ತನ್ನ ಮನೆಯಿಂದ ಮಗ ಸಾಹಿಲ್ ನ  ಜೊತೆಯಲ್ಲಿ ಚಲಾಯಿಸಿಕೊಂಡು ಹೊರಟು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬರುತ್ತಾ ರಾತ್ರಿ 11:30 ಗಂಟೆ ಬೈಂದೂರು ತಾಲೂಕು ಶಿರೂರು ಗ್ರಾಮದ ಶಿರೂರು ಟೋಲ್ ಗೇಟ ನಿಂದ ಸ್ವಲ್ಪ ಹಿಂದೆ ತಲುಪಿದಾಗ ಸ್ವಲ್ಪ ನಿದ್ದೆ ಮಂಪರು ಬಂದ ಕಾರಣ ಲಾರಿಯನ್ನು ಟೋಲ್ ಗೇಟ್ ನಿಂದ ಸ್ವಲ್ಪ ಹಿಂದಕ್ಕೆ ರಾಷ್ಟ್ರೀಯ ಹೆದ್ದಾರಿ 66 ರ ಪೂರ್ವ ಬದಿಯ ರಸ್ತೆಯ ಅಂಚಿನಲ್ಲಿ ನಿಲ್ಲಿಸಿಕೊಂಡು ಮೊಬೈಲ್ ನಲ್ಲಿ ಬೆಳಿಗ್ಗೆ 4:00 ಗಂಟೆಗೆ ಅಲರಾಂ ಇಟ್ಟುಕೊಂಡು ಪಿರ್ಯಾದಿದಾರರು ಹಾಗೂ ಮಗ ಸಾಹಿಲ್ ಲಾರಿಯಲ್ಲಿ ಮಲಗಿದ್ದು, ದಿನಾಂಕ 15/09/2022 ರಂದು ಬೆಳಿಗ್ಗೆ 4:00 ಗಂಟೆಗೆ ಅಲರಾಂ ಶಬ್ದಕ್ಕೆ ಪಿರ್ಯಾದಿದಾರರು  ಎದ್ದು,  ಹೊರಡಲು  ಲಾರಿಯನ್ನು ಸ್ಟಾರ್ಟ್ ಮಾಡಿ ಗೇರ್ ಹಾಕಿ ಮುಂದಕ್ಕೆ ಚಲಾಯಿಸಲು ಯತ್ನಿಸಿದಾಗ ಲಾರಿಯು ಎಡಭಾಗಕ್ಕೆ ವಾಲಿಕೊಂಡಿದ್ದರಿಂದ ಪಿರ್ಯಾದಿದಾರರು ಕೂಡಲೇ ಲಾರಿಯ ಇಂಜಿನ್ ನನ್ನು ಆಫ್ ಮಾಡಿ ಕೆಳಗಿಳಿದು ನೋಡಿದಾಗ ಲಾರಿಯ ಎಡಬದಿಯ ಹಿಂದಿನ 4 ಚಕ್ರಗಳು ಇಲ್ಲದೇ ಇದ್ದು, ಅಲ್ಲದೇ ಲಾರಿಯ ಹಿಂಬದಿಯಲ್ಲಿದ್ದ ಸ್ಟೆಪ್ನಿ ಚಕ್ರವು ಕೂಡಾ ಇಲ್ಲದೇ ಇದ್ದು ಯಾರೋ ಕಳ್ಳರು ದಿನಾಂಕ 14/09/2022 ರಂದು ರಾತ್ರಿ 11:30 ಗಂಟೆಯಿಂದ ದಿನಾಂಕ 15/09/2022 ರಂದು ಬೆಳಗಿನ ಜಾವ 4:00 ಗಂಟೆಯ ಮಧ್ಯಾವಧಿಯಲ್ಲಿ 16 ಚಕ್ರದ ಟಾಟಾ ಲಾರಿ ನಂಬ್ರ KA-30-A-4807 ನೇದರ 5 ಚಕ್ರಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ 5 ಚಕ್ರಗಳ ಮೌಲ್ಯ 1,85,000/- ಆಗಿರುತ್ತದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 186/2022 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

  • ಗಂಗೊಳ್ಳಿ: ದಿನಾಂಕ 15/09/2022 ರಂದು ಗಂಗೊಳ್ಳಿ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ವಿನಯ ಕೊರ್ಲಹಳ್ಳಿ ರವರಿಗೆ ತ್ರಾಸಿ ಗ್ರಾಮದ ತ್ರಾಸಿ ಬೀಚ್‌ ಬಳಿ ಪಾರ್ಕ್ ನಲ್ಲಿ ಕೆಲವು ಹುಡುಗರು ಕುಳಿತು ಗಾಂಜಾ ಸೇವಿಸುತ್ತಿರುವುದಾಗಿ ದೊರೆತ ಮಾಹಿತಿಯಂತೆ  ಸ್ಥಳಕ್ಕೆ ಹೋಗಿ  ಪರಿಶೀಲಿಸಲಾಗಿ 2  ಜನರು ಕುಳಿತುಕೊಂಡಿರುವುದು  ಕಂಡು ಬಂದಿದ್ದು, ಅವರ ಹೆಸರು ವಿಳಾಸ ಕೇಳಲಾಗಿ 1] ಹರ್ಷ(23),  2] ಅವಿನಾಶ್(24) ಎಂಬುವುದಾಗಿ ತಿಳಿಸಿದ್ದು, ಅವರು ಗಾಂಜಾದಂತಹ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದಿರುವುದರಿಂದ ಕುಂದಾಪುರ ಶ್ರೀ ಮಾತಾ ಆಸ್ಪತ್ರೆ ವೈಧ್ಯಾದಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಹರ್ಷ, ಮತ್ತು  ಅವಿನಾಶ್ ಇಬ್ಬರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವುದಾಗಿ ವರದಿ ನೀಡಿರುತ್ತಾರೆ.  ಈ ಬಗ್ಗೆ್ಗಂಗೊಳ್ಳಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 87/2022 ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ದಿನಾಂಕ 15/09/2022 ರಂದು ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರಾದ ಪವನ್‌ ನಾಯಕ್‌ ರವರು ರೌಂಡ್ಸ್  ಕರ್ತವ್ಯದಲ್ಲಿರುವ ಸಮಯ   ಕುಂದಾಪುರ ತಾಲೂಕು ಕಂದಾವರ ಗ್ರಾಮದ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣದ  ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಗಾಂಜಾ  ಸೇವಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಹೋಗಿ ಆರೋಪಿ ಮದನ್‌ಕುಮಾರ್‌ (36) ಎಂಬಾತನನ್ನು ವಿಚಾರಿಸಿ ಬಳಿಕ ಆರೋಪಿಯನ್ನು ಗಾಂಜಾ ಸೇವಿಸಿರುವ ಬಗ್ಗೆ ದೃಢ ಪಡಿಸುವ ಸಲುವಾಗಿ ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ವೈದ್ಯಾಧಿಕಾರಿವರ ಮುಂದೆ ಹಾಜರುಪಡಿಸಿದಲ್ಲಿ ವೈದ್ಯಾಧಿಕಾರಿ ವರು  ಆರೋಪಿತನನ್ನು   ಪರೀಕ್ಷಿಸಿ   ನಿಷೇದಿತ ಮಾದಕ ದ್ರವ್ಯ ಗಾಂಜಾ ಸೇವನೆ   ಮಾಡಿದ್ದಾಗಿ ವರದಿ ನೀಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 45/2022 ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 16-09-2022 09:32 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080