ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 15/12/2021ರಂದು ಬೆಳಿಗ್ಗೆ ಸುಮಾರು 7:35 ಗಂಟೆಗೆ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಗ್ರಾಮದ ಪಿರ್ಯಾದಿ ವಿನ್ಸೆಂಟ್‌ಅನಿಲ್‌ಡಯಾಸ್‌ ಪ್ರಾಯ 49 ವರ್ಷ ತಂದೆ :  ಜೋಸೆಫ್‌ಡಯಾಸ್‌  ವಾಸ:ಗುಂಡಾಡಿಬೆಟ್ಟು, ಉಪ್ಪಿನಕುದ್ರು ಗ್ರಾಮ ಇವರ ಮನೆಯ ಬಳಿಯ ರೋನಿಯವರ ಅಂಗಡಿಯ ಬಳಿ ರಸ್ತೆಯಲ್ಲಿ, ಆಪಾದಿತ ರಂಜನ್‌ ಎಂಬವರು KA19-EX-8961ನೇ ಬೈಕನ್ನು ತಲ್ಲೂರು ಕಡೆಯಿಂದ ಉಪ್ಪಿನಕುದ್ರು ಕಡೆಗೆ ಅತೀವೇಗ  ಹಾಗೂ ನಿರ್ಲಕ್ಷತನದಿಂದ ಸವಾರಿ   ಮಾಡಿಕೊಂಡು ಬಂದು, ರಸ್ತೆಯ ಬದಿಯಲ್ಲಿ  ನಿಂತುಕೊಂಡಿದ್ದ ಪಿರ್ಯಾದಿದಾರರ 8 ವರ್ಷದ ಮಗ ಜೇಸನ್‌ ಡಯಾಸ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಜೇಸನ್‌ ಡಯಾಸ್‌ನ ತಲೆಗೆ, ಮುಖಕ್ಕೆ, ಎಡ ಕಣ್ಣಿನ ಹತ್ತಿರ ಹಾಗೂ ಕಾಲುಗಳಿಗೆ  ತರಚಿದ  ಗಾಯವಾಗಿ ಕುಂದಾಪುರ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಹಾಗೂ ಆಪಾದಿತ   ರಂಜನ್‌ ರವರು ಸಹ ಗಾಯಗೊಂಡು ಆದರ್ಶ  ಆಶ್ಪತ್ರೆಯಲ್ಲಿ  ಚಿಕಿತ್ಸೆ  ಪಡೆದಿರುತ್ತಾನೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 106/2021 ಕಲಂ 279, 337 IPC ಯಂತೆ ಪ್ರಕರಣ ದಾಖಲಾಗಿರುತ್ತದೆ.      

ಅಸ್ವಾಭಾವಿಕ ಮರಣ ಪ್ರಕರಣ

  • ಶಂಕರನಾರಾಯಣ: ಪಿರ್ಯಾದಿದಾರರಾದ ಆನಂದ ನಾಯ್ಕ (42) ತಂದೆ, ಸಂಜೀವ ನಾಯ್ಕ ವಾಸ, ಮಾವಿನಕೊಡ್ಲು ಕುಳ್ಳುಂಜೆ ಗ್ರಾಮ ಕುಂದಾಪುರ ಇವರ ತಮ್ಮ ಸುಧಾಕರ ನಾಯ್ಕ (39) ಇವರು ಸುಮಾರು ಸಮಯದಿಂದ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು, ಹಾಗೂ ಊರಿನಲ್ಲಿ ವಿಪರೀತ ಸಾಲ   ಮಾಡಿದ್ದು, ಅಲ್ಲದೆ ಸುಮಾರು ಸಮಯದಿಂದ ಕೆಲಸ ಇಲ್ಲದೆ ಮನೆಯಲ್ಲಿ ಇದ್ದು, ಈ ವಿಷಯದಲ್ಲಿ ಜೀವನದಲ್ಲಿ   ಜಿಗುಪ್ಸೆಗೊಂಡು ದಿನಾಂಕ 14/11/2021 ರಂದು 17:45 ಗಂಟೆಗೆ ಕುಂದಾಪುರ ತಾಲೂಕಿನ ಕುಳ್ಳುಂಜೆ ಗ್ರಾಮದ  ಮಾವಿನಕೊಡ್ಲು ಎಂಬಲ್ಲಿ ಆತನ ವಾಸದ ಮನೆಯಲ್ಲಿ  ಯಾರೂ ಇಲ್ಲದ ಸಮಯ ವಿಷ ಸೇವಿಸಿದವನನ್ನು  ಚಿಕಿತ್ಸೆಯ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ  ದಿನಾಂಕ 16/12/2021 ರಂದು ಬೆಳಗ್ಗಿನ ಜಾವ ಸುಮಾರು 2:00 ಘಂಟೆಗೆ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಯು.ಡಿ.ಆರ್ ಕ್ರಮಾಂಕ 50/2021 ಕಲಂ: 174 ಸಿ.ಆರ್‌.ಪಿ.ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 16-12-2021 06:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080