ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣಗಳು

  • ಉಡುಪಿ: ವಿಜಯ. ಸಿ. ಎ.ಎಸ್.ಐ. ಉಡುಪಿ ನಗರ ಪೊಲೀಸ್ ಠಾಣೆ ಇವರು ದಿನಾಂಕ: 17/05/2021 ರಂದು ಬೆಳಿಗ್ಗೆ ಸಿಬ್ಬಂದಿಯವರೊಂದಿಗೆ ಠಾಣಾ ಸರಹದ್ದಿನಲ್ಲಿ ಲಾಕ್ ಡೌನ್ ಪ್ರಯುಕ್ತ ಸಾರ್ವಜನಿಕರು ಹಾಗೂ ಅಂಗಡಿಯ ಮಾಲೀಕರು ಕೋವಿಡ್-19 ರ ಬಗ್ಗೆ ತೆಗೆದುಕೊಳ್ಳುತ್ತಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ಬಗ್ಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಸಮಯ ಸುಮಾರು10:30 ಗಂಟೆಗೆ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಸುದರ್ಶನ್ ಬೇಕರಿ ಮಾಲೀಕನಾದ ಆರೋಪಿ ಸಂದೀಪ (37) ತಂದೆ:ದಿ, ಕೆ .ವಸಂತ ವಾಸ: ಸುದರ್ಶನ್ ಮಾರ್ಕೇಟ್ ಯಾರ್ಡ್ ಹಿಂಬದಿ, ಆದಿ ಉಡುಪಿ, ಮೂಡನಿಡಂಬೂರು ಗ್ರಾಮ ಬೆಳಿಗ್ಗೆ 10-00 ಗಂಟೆಗೆ ಅಂಗಡಿ ಬಂದ್ ಮಾಡಲು ಆದೇಶ ಇದ್ದರೂ ಸಹ ಬೇಕರಿಯನ್ನು ಬಂದ್  ಮಾಡದೇ ಮಾನ್ಯ ರಾಜ್ಯ ಸರ್ಕಾರ ಹಾಗೂ ಉಡುಪಿ ಜಿಲ್ಲಾಧಿಕಾರಿಯವರು ದಿನಾಂಕ;10/05/21021 ರಿಂದ ದಿನಾಂಕ: 24/05/2021 ರವರೆಗೆ ವಿಧಿಸಿದ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಕೋವಿಡ್-19 ಸಾಂಕ್ರಾಮಿಕ ಖಾಯಿಲೆಯ ಸ್ಟೋಟ ಮತ್ತು ಹರಡುವುದನ್ನು ತಡೆಗಟ್ಟಲು ನಿರ್ಲಕ್ಷ ವಹಿಸಿರುತ್ತಾರೆ ಎಂಬಿತ್ಯಾದಿಯಾಗಿರುತ್ತದೆ, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 83/2021 ಕಲಂ: 269 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.
  • ಶಿರ್ವ: ದಿನಾಂಕ 17.05.2021 ರಂದು ಶಿರ್ವಾ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ  ಶ್ರೀಶೈಲ್ ಡಿ.ಎಂ  ಇವರು ಸಿಬ್ಬಂದಿಯವರೊಂದಿಗೆ ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ದಿನಾಂಕ 10/05/2021 ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ 24/05/2021ರ ಬೆಳಿಗ್ಗೆ 06:00 ಗಂಟೆಯವರೆಗೆ ಲಾಕ್ ಡೌನ್ ಘೋಷಿಸಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ವಾಹನ  ತಪಾಸಣೆ ನಡೆಸುವಂತೆ ಮೇಲಾಧಿಕಾರಿಯವರ ಆದೇಶದಂತೆ ದಿನಾಂಕ 17.05.2021 ರಂದು 11:15 ಶಿರ್ವಾ ಗ್ರಾಮದ ಶಿರ್ವಾ ಪೇಟೆಯಲ್ಲಿರುವ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಯವರೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ವಾಹನ ತಪಾಸಣೆಯಲ್ಲಿರುತ್ತಾ  ಅಗತ್ಯ ವಸ್ತುಗಳ ಖರೀದಿ ಬಗ್ಗೆ ಸರಕಾರ ನಿಗದಿಪಡಿಸಿದ ಸಮಯ ಅವಕಾಶದ ಬಳಿಕವೂ ಅನಗತ್ಯವಾಗಿ  ವಾಹನಗಳಲ್ಲಿ ಸಂಚರಿಸುತ್ತಿರುವವರ ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸಿ ಪರಿಶೀಲಿಸಿದಲ್ಲಿ ನೀಲಿ ಬಣ್ಣದ ಮ್ಯಾಸ್ಟ್ರೋ ದ್ವಿಚಕ್ರವಾಹನ ನೊಂದಣಿ ಸಂಖ್ಯೆ ಕೆಎ 20 ಇಎಫ್ 6965  ನೇದರ ಸವಾರ ಗಣೇಶ್ ಪ್ರಾಯ 18 ವರ್ಷ ತಂದೆ: ಶ್ರೀನಿವಾಸ  ವಾಸ: ಪಕೀರಣಕಟ್ಟೆ ಉರ್ದು ಶಾಲೆಯ ಹತ್ತಿರ, ಪಕೀರಣಕಟ್ಟೆ, ಮಲ್ಲಾರು ಗ್ರಾಮ ಕಾಪು ತಾಲೂಕು ಮೊ : 9663293241 ಎಂದು ತಿಳಿಸಿದ್ದು, ಸದ್ರಿಯವರ ಓಡಾಟದ ಕಾರಣವನ್ನು ವಿಚಾರಿಸಲಾಗಿ ಯಾವುದೇ ತುರ್ತು ಕಾರಣವಿಲ್ಲದೇ ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡು ಬಂದಿರುತ್ತದೆ. ಸದ್ರಿ ಆರೋಪಿಯು ಘನ ಕರ್ನಾಟಕ ಸರಕಾರವು ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿರುವುದರಿಂದ ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 26/2021 ಕಲಂ: 269 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.
  • ಅಮಾಸೆಬೈಲು: ದಿನಾಂಕ 17/05/2021 ರಂದು ಸುಬ್ಬಣ್ಣ ಬಿ ಪೊಲೀಸು ಉಪನಿರೀಕ್ಷಕರು ಅಮಾಸೆಬೈಲು ಪೊಲೀಸು ಠಾಣೆ ಇವರು  ಠಾಣಾ ಸಿಬ್ಬಂದಿಯವ ರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದು ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 10-05-2021  ರಿಂದ 24-05-2021  ರವರೆಗೆ ಕೋವಿಡ್ – 19  ಸಾಂಕ್ರಾಮಿಕ  ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದ್ದು ಅನಗತ್ಯ ವಾಹನಗಳ ಓಡಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು  ಮದ್ಯಾಹ್ನ 14:00 ಗಂಟೆಗೆ ಹೊಸಂಗಡಿ ಗ್ರಾಮದ ಹೊಸಂಗಡಿ ಜಂಕ್ಷನ್  ಬಳಿ ಆಪಾದಿತ ಸುಜಯ್  ಪ್ರಾಯ 18 ವರ್ಷ ತಂದೆ: ನರಸಿಂಹ ವಾಸ: ಕಪ್ಪೆಹೊಂಡ, ಹೊಸಂಗಡಿ, ಕೆ ಪಿ ಸಿ ಕಾಲೋನಿ ಈತನು KA 20 EN 7191 Hero Honda Splender ಮೋಟಾರ್ ಸೈಕಲ್ ಗಾಡಿಯನ್ನು ಚಲಾಯಿಸಿಕೊಂಡು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುತ್ತದೆ. ಸದ್ರಿ  ಮೇಲ್ಕಂಡ ದ್ವಿಚಕ್ರ ವಾಹನ ಸವಾರ  ಕೋವಿಡ್ – 2019  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು  ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು  ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಅನಾವಶ್ಯಕವಾಗಿ ಸಕಾರಣವಿಲ್ಲದೆ ಸಾರ್ವಜನಿಕ  ಸ್ಥಳದಲ್ಲಿ  ಸಂಚರಿಸಿಕೊಂಡು ನಿರ್ಲಕ್ಷತನದಿಂದ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದರಿಂದ ಈ ಬಗ್ಗೆ ಅಮಾಸೆಬೈಲು  ಪೊಲೀಸ್ ಠಾಣೆ  ಅಪರಾಧ ಕ್ರಮಾಂಕ 21/2021 ಕಲಂ: 269 ಐಪಿಸಿಯಂತೆ ಪ್ರಕರಣ  ದಾಖಲಿಸಲಾಗಿರುತ್ತದೆ.

 ಅಸ್ವಾಭಾವಿಕ ಮರಣ ಪ್ರಕರಣ

  • ಮಣಿಪಾಲ : ಅಶ್ವತ್‌ ಶೆಟ್ಟಿ(30)ರವರು ಸುಮಾರು 5-6 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಈ ಬಗ್ಗೆ ಮಣಿಪಾಲದ ಕೆಎಮ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಅಶ್ವತ್‌ ಶೆಟ್ಟಿಯು ದಿನಾಂಕ: 15.05.2021ರಂದು 16:00 ಗಂಟೆಯಿಂದ ದಿನಾಂಕ: 17.05.2021ರಂದು ಬೆಳಿಗ್ಗೆ 09:30ಗಂಟೆಯ ಮಧ್ಯಾವಧಿಯಲ್ಲಿ ಬಾಳ್ಕಟ್ಟ ಗೋಪಾಲ ಶೆಟ್ಟಿಯವರಿಗೆ ಸಂಬಂಧಿಸಿದ ಪಾಳುಬಿದ್ದ ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಠಾಣೆ ಯುಡಿಆರ್ ನಂ. 16/2021 ಕಲಂ 174 ಸಿಆರ್‌ಪಿಸಿ  ರಂತೆ ಪ್ರಕರಣ  ದಾಖಲಿಸಲಾಗಿದೆ.

ಇತ್ತೀಚಿನ ನವೀಕರಣ​ : 17-05-2021 06:05 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080