ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ:

  • ಉಡುಪಿ ನಗರ: ಪಿರ್ಯಾದುದಾರ ಬಾಬು ಆಚಾರ್ಯ (60) ತಂದೆ: ದಿ. ಕೃಷ್ಣಯ್ಯ ಆಚಾರ್ಯ ವಾಸ: ನಂಬ್ರ: 1-4-57, ದುಗ್ಗಣ್ಣಬೆಟ್ಟು ಮಾರ್ಗ, ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ, ಗುಂಡಿಬೈಲು, ಎಂಬಲ್ಲಿ ಆಗಸ್ಟ್‌  24 ರಂದು ಹಳೆ ಮನೆಯ ಹಿಂಬದಿಯಲ್ಲಿ ಹೊಸ ಮನೆ ನಿರ್ಮಾಣ ಮಾಡಿದ್ದು, ಹಳೆ ಮನೆಯಲ್ಲಿ ಮನೆ ದೇವರು ಇದ್ದುದರಿಂದ ಹಗಲು ಹೊತ್ತು ಹಳೆ ಮನೆಯಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದು, ರಾತ್ರಿ ವೇಳೆ ಹೊಸ ಮನೆಯಲ್ಲಿ ಹೋಗಿ ಮಲಗುತ್ತಿದ್ದರು. ದಿನಾಂಕ 16/11/2021 ರಂದು 21:15 ಗಂಟೆಯಿಂದ ದಿನಾಂಕ 17/11/2021 ರಂದು ಬೆಳಿಗ್ಗೆ 05:30 ಗಂಟೆ ನಡುವೆ ಯಾರೋ ಕಳ್ಳರು ಪಿರ್ಯಾದುದಾರರ  ಹಳೆ ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ, ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1, ಒಟ್ಟು 90 ಗ್ರಾಂ ತೂಕದ ರೂ. 3,60,000/- ಮೌಲ್ಯದ ಚಿನ್ನಾಭರಣಗಳು ಹಾಗೂ ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000/- ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂ. 3,70,400/- ಆಗಬಹುದು. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 165/2021ಕಲಂ 457, 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಪಘಾತ ಪ್ರಕರಣ :

  • ಕುಂದಾಪುರ: ದಿನಾಂಕ 16/11/2021  ರಂದು  ಸಂಜೆ ಸುಮಾರು 5:00  ಗಂಟೆಗೆ, ಕುಂದಾಪುರ  ತಾಲೂಕಿನ ಕಾಳಾವರ ಗ್ರಾಮದ  ಕರಿಕಲ್‌ಕಟ್ಟೆ ಬಳಿ ರಸ್ತೆಯಲ್ಲಿ, ಆಪಾದಿತ ರಾಮಚಂದ್ರ ನಾವುಡ  ಎಂಬವರು KA20-N-2165ನೇ ಮಾರುತಿ ಓಮ್ನಿ ಕಾರನ್ನು ಹುಣ್ಸೆಮಕ್ಕಿ ಕಡೆಯಿಂದ ಕೊಟೇಶ್ವರ ಕಡೆಗೆ ಚಾಲನೆ ಮಾಡಿಕೊಂಡು ಹೋಗಿ, ಕಾರನ್ನು ನಿಧಾನಿಸಿ ರಸ್ತೆಯ ಎಡಬದಿಗೆ ಚಲಾಯಿಸಿದ ಸಮಯ, ಕಾರಿನ ಹಿಂದುಗಡೆಯಲ್ಲಿ ಅದೇ ದಿಕ್ಕಿನಲ್ಲಿ ಗಣೇಶ್‌ಎಸ್‌ ಎಂಬವರು KA20-EQ8258 ನೇ ಯಮಹ FZ ಬೈಕನ್ನು ಕಾರಿನ ಬಲಬದಿಯಿಂದ  ಮುಂದಕ್ಕೆ  ಸವಾರಿ ಮಾಡಿಕೊಂಡು ಹೋಗುತ್ತಿರುವಾಗ, ಓಮ್ನಿ ಕಾರಿನ  ಚಾಲಕ ಕಾರನ್ನು  ಒಮ್ಮೇಲೆ ಅತೀವೇಗ  ಹಾಗೂ ನಿರ್ಲಕ್ಷ್ಯತನದಿಂದ ಯಾವುದೇ  ಸೂಚನೆ ನೀಡದೇ ರಸ್ತೆಯ ಬಲಬದಿಗೆ ತಿರುಗಿಸಿ  ಸದ್ರಿ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ  ಗಣೇಶ್‌ಎಸ್‌ರವರು  ಬೈಕ್‌ಸಮೇತ ಬಿದ್ದು, ಅವರ ಎಡಕಾಲಿಗೆ, ಸೊಂಟಕ್ಕೆ ಒಳಜಕಂ ಹಾಗೂ ಮೈ ಕೈಗೆ ತರಚಿದ ಗಾಯವಾಗಿ ಕುಂದಾಪುರ  ವಿವೇಕ್‌  ಆಸ್ಪತ್ರೆಯಲ್ಲಿ  ಪ್ರಥಮ  ಚಿಕಿತ್ಸೆ  ಪಡೆದು  ಹೆಚ್ಚಿನ ಚಿಕಿತ್ಸೆ  ಬಗ್ಗೆ ಮಣಿಪಾಲ  ಕೆ.ಎಂಸಿ   ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಈ ಬಗ್ಗೆ ಅರುಣ್‌  ಪ್ರಾಯ  28  ವರ್ಷ   ತಂದೆ :  ನಾರಾಯಣ     ವಾಸ:  ನೆಂಪು, ಕರ್ಕುಂಜಿ  ಗ್ರಾಮ    ಕುಂದಾಪುರ  ತಾಲೂಕು ರವರು ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಠಾಣಾ ಅಪರಾಧ ಕ್ರಮಾಂಕ 90/2021 ಕಲಂ:279,338 ಐಪಿಸಿ  ಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ನವೀಕರಣ​ : 17-11-2021 06:16 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080