ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಶಂಕರನಾರಾಯಣ: ದಿನಾಂಕ 17/08/2022 ರಂದು 16:45 ಗಂಟೆಗೆ ಆರೋಪಿ ಅರವಿಂದ  ಯಡಿಯಾಳ  KA-20-JE-5463  ನೇ ನಂಬ್ರದ ಬುಲೇಟ್  ಮೋಟಾರ್ ಸೈಕಲ್‌‌ನ್ನು  ಸಿದ್ದಾಪುರ ಕಡೆಯಿಂದ  ಅಂಪಾರು  ಕಡೆಗೆ  ಅತೀ ವೇಗ  ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕೆ. ಭಾಸ್ಕರ ಶೆಟ್ಟಿ ಇವರು  ಕೋಟೆಬೆಟ್ಟು ಕ್ರಾಸ್‌ನಿಂದ ಸಿದ್ದಾಪುರ  ಕಡೆಗೆ  ಚಲಾಯಿಸಿಕೊಂಡು  ಹೋಗುತ್ತಿದ್ದ  KA-20-W-9901 ನೇ  ನಂಬ್ರದ  ಮೋಟಾರ್  ಸೈಕಲ್‌‌ಗೆ  ಡಿಕ್ಕಿ ಹೊಡೆದ ಪರಿಣಾಮ  KA-20-W-9901ನೇ ನಂಬ್ರದ  ಮೋಟಾರ್  ಸೈಕಲ್‌‌ ಸವಾರ   ಗಂಬೀರ ಗಾಯಗೊಂಡಿದ್ದು, ಚಿಕಿತ್ಸೆಯ  ಬಗ್ಗೆ ಕುಂದಾಪುರ  ಸರಕಾರಿ  ಆಸ್ಪತ್ರೆಗೆ  ಕರೆದುಕೊಂಡು ಹೋಗುವಾಗ  ದಾರಿ ಮಧ್ಯೆ  ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 79/2022  ಕಲಂ: 279, 304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹಿರಿಯಡ್ಕ: ಪಿರ್ಯಾದಿದಾರರಾದ ಬಿ ಕಾಳು ಕುಲಾಲ್  (59), ತಂದೆ: ದಿ. ವೀರ ಕುಲಾಲ್, ವಾಸ: 6-4/16 ಅಲಂಗಾರು ರಸ್ತೆ ಪೆರ್ಡೂರು ಗ್ರಾಮ ಉಡುಪಿ ತಾಲೂಕು ಇವರು ದಿನಾಂಕ 16/08/2022 ರಂದು ಸಂಜೆ 19:30  ಗಂಟೆಗೆ ತನ್ನ ನಂಬ್ರ KA-20-P-2660 ನೇ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಉಡುಪಿ ಕಡೆಯಿಂದ ಪೆರ್ಡೂರು ಕಡೆಗೆ ಹೊರಟು  ಪುತ್ತಿಗೆಯ ಪಿ ಕೆ ಅಹಮ್ಮದ್ ರವರ ಮನೆಯ ಬಳಿ ತಲುಪುತ್ತಿದ್ದಂತೆ ಎದುರಿನಿಂದ  ಪೆರ್ಡೂರು ಕಡೆಯಿಂದ ಉಡುಪಿ ಕಡೆಗೆ KA-15-EE-2374 ನೇ ಬೈಕ್ ಸವಾರ ಮನೋಜ್ ಸಹ ಸವಾರರನ್ನಾಗಿ ದೇವರಾಜ್ ಎಂಬುವವರನ್ನು ಕುಳ್ಳಿರಿಸಿಕೊಂಡು ಮೋಟಾರ್ ಸೈಕಲನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು ರಸ್ತೆಯ ತೀರಾ ಬಲ ಬಾಗಕ್ಕೆ ಬಂದು ಪಿರ್ಯಾದಿದಾರರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ,  ಮೋಟಾರ್ ಸೈಕಲ್ ಸವಾರ ಮನೋಜ್ ರವರಿಗೆ ಬಲಕಾಲು, ಬಲಕೈ ಹಾಗೂ ಕಣ್ಣಿನ ಬಳಿ ರಕ್ತಗಾಯವಾಗಿದ್ದು ಸಹ ಸವಾರ ದೇವರಾಜ್ ರವರಿಗೆ ಬಲಕಾಲು ಹಾಗೂ ಇತರ ದೇಹದ ಬಾಗಕ್ಕೆ ಸಣ್ಣ ಪುಟ್ಟ ಗಾಯವಾಗಿರುತ್ತದೆ. ಗಾಯಗೊಂಡವರನ್ನು ಚಿಕಿತ್ಸೆ ಬಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 44/2022  ಕಲಂ:  279, 337  ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ರಂಜಿತ್(34), ತಂದೆ: ಕುಷ್ಠ ಪೂಜಾರಿ, ವಾಸ:ಗುಲ್ವಾಡಿ ಶಾಲೆ ಹತ್ತಿರ  ಗುಲ್ವಾಡಿ ಗ್ರಾಮ ಇವರ ತಂದೆ ಕುಷ್ಠ ಪೂಜಾರಿ(60) ರವರು ವಿಪರೀತ ಮದ್ಯಪಾನ ಚಟವನ್ನು ಹೊಂದಿದ್ದು ಅಲ್ಲದೇ ಇದರಿಂದ ಅನಾರೋಗ್ಯಕ್ಕೆ ಒಳಗಾಗಿ ದಿನಾಂಕ 17/08/2022 ರಂದು  ಮಧ್ಯಾಹ್ನ 12:00   ಗಂಟೆಗೆ  ಕಾವ್ರಾಡಿ ಗ್ರಾಮದ ಕಂಡ್ಲೂರು  ಗಂಗಾ  ವೈನ್ಸ ಶಾಪ್ ಹತ್ತಿರದಲ್ಲಿರುವ ಖಾಲಿ ಜಾಗದಲ್ಲಿ ಹೃದಯಾಘಾತವಾಗಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 22/2022 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
     

      

ಇತ್ತೀಚಿನ ನವೀಕರಣ​ : 18-08-2022 09:32 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080