ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಬೈಂದೂರು: ಪಿರ್ಯಾದಿದಾರರಾದ ರಾಘವೇಂದ್ರ ಪೂಜಾರಿ ((41 , ತಂದೆ: ಮಂಜು ಪೂಜಾರಿ, ವಾಸ: ಜನನಿ ನಿಲಯ, ಕೋಟಿ ಮನೆ, ರಾಗಿ ಹಕ್ಲು ಪೋಸ್ಟ್ ಯೆರುಕೋಣೆ , ಹೆರೂರು ಗ್ರಾಮ ಬೈಂದೂರು ತಾಲೂಕು ಇವರು ದಿನಾಂಕ 17/08/2022 ರಂದು ಸಂಜೆ 6:45 ಗಂಟೆಗೆ ಅರೆ ಶಿರೂರಿನಲ್ಲಿ ಕೆಲಸ ಮುಗಿಸಿ ಹೆರೂರಿನ ಮನೆಗೆ ಹೋಗಲು ಅವರ KA-20-EA-7917 ನೇ ಮೋಟಾರು ಸೈಕಲ್ ನ್ನು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸವಾರಿ ಮಾಡಿಕೊಂಡು  ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಬಳಿ ಹೋಗುತ್ತಿರುವಾಗ  ಅವರ ಹಿಂದಿನಿಂದ  ಬೈಂದೂರು ಕಡೆಯಿಂದ  KA-20-AB-4396 ನೇ ಟಿಪ್ಪರ್ ಲಾರಿ ಚಾಲಕನು ಆತನ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು  ಪಿರ್ಯಾದಿದಾರರ ಮೋಟಾರ್ ಸೈಕಲ್ ನ ಬಲಭಾಗಕ್ಕೆ ಬಂದು ಯಾವುದೇ ಸೂಚನೆಯನ್ನು ನೀಡದೇ ಒಮ್ಮೇಲೆ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಪಿರ್ಯಾದಿದಾರರ ಮೋಟಾರು ಸೈಕಲ್ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು ಬಲ ಕಣ್ಣಿನ ಹತ್ತಿರ ಒಳ ಜಖಂ, ಹಲ್ಲಿನ ಸೆಟ್ಟಿ ಗೆ ಒಳ ನೋವು  ಹಾಗೂ  ಬೆನ್ನಿಗೆ ತರಚಿದ ಗಾಯವಾದವರನ್ನು ಟಿಪ್ಪರ್ ಚಾಲಕ ಹಾಗೂ ಸ್ಥಳೀಯರು ಸೇರಿ  ಅಂಬುಲೆನ್ಸ್ ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆ ತಂದಲ್ಲಿ ಅಲ್ಲಿನ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದು ಪಿರ್ಯಾದಿದಾರರ ಸಂಬಂಧಿಕರು ಹೆಚ್ಚಿನ ಚಿಕಿತ್ಸೆ ಬಗ್ಗೆ ಪಿರ್ಯಾದಿದಾರರನ್ನು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಕರೆ ತಂದು ಒಳರೋಗಿಯಾಗಿ ದಾಖಲಿಸಿರುತ್ತಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 160/2022 ಕಲಂ: 279 , 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಗಂಗೊಳ್ಳಿ: ಪಿರ್ಯಾದಿದಾರರಾದ ಪಾಂಡುರಂಗ. ಕೆ(50), ತಂದೆ: ಗುಂಡಯ್ಯ,, ವಾಸ: ಅಂಗಡಿಮನೆ ಕೋಳೂರು ಕುಂದಬಾರಂದಾಡಿ ಅಂಚೆ ಮತ್ತು ಗ್ರಾಮ, ಕುಂದಾಪುರ  ತಾಲೂಕು ಇವರ  ತಂಗಿ ಶಾಂಭವಿ (48) ರವರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದು,  ದಿನಾಂಕ 18/08/2022 ರಂದು ಮಧ್ಯಾಹ್ನ 12:30 ಗಂಟೆಗೆ ತೋಟದ ಕಡೆಗೆ ಹೋದವರು ಮನೆಗೆ ಬಾರದೇ ಇದ್ದು ಹುಡುಕಾಡುತ್ತಿರುವಾಗ ಮಧ್ಯಾಹ್ನ 2:30 ಗಂಟೆಗೆ ಪಿರ್ಯಾದಿದಾರರ ಮನೆಯಿಂದ ಅರ್ಧ ಕೀ.ಮೀ  ದೂರದಲ್ಲಿರುವ ಕುಂದಬಾರಂದಾಡಿ ಗ್ರಾಮದ ಕುಂದಕಟ್ಟು ಎಂಬಲ್ಲಿ ನೂಜಾಡಿ ಹೊಳೆಯಲ್ಲಿ ಶಾಂಭವಿ ರವರ ಮೃತದೇಹ ನೀರಿನಲ್ಲಿ ತೇಲಾಡುತ್ತಿರುವುದಾಗಿ ಮನೆಯ ಹತ್ತಿರದ ಮಂಜುನಾಥ ಮಡಿವಾಳ ರವರು ಪಿರ್ಯಾದಿದಾರರಿಗೆ ಕರೆ ಮಾಡಿ ತಿಳಿಸಿದ್ದು ಪಿರ್ಯಾದಿದಾರರು ಅಲ್ಲಿಗೆ ಹೋಗಿ ನೋಡಲಾಗಿ ಅದು ಪಿರ್ಯಾದಿದಾರರ ತಂಗಿ ಶಾಂಭವಿ ರವರ ಮೃತದೇಹವಾಗಿದ್ದು ಶಾಂಭವಿಯವರು ಮಾನಸಿಕ ಖಾಯಿಲೆಯಿಂದ  ಬಳಲುತ್ತಿದ್ದು ಗುಣಮುಖವಾಗದೇ ಇದ್ದು ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 18/08/2022 ರಂದು 12:30 ಗಂಟೆಯಿಂದ ಮಧ್ಯಾಹ್ನ 14:30 ಗಂಟೆಯ ಮಧ್ಯಾವಧಿಯಲ್ಲಿ  ನೂಜಾಡಿ ಹೊಳೆಗೆ ಹಾರಿ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 19/2022 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ:  ಪಿರ್ಯಾದಿದಾರರಾದ ಸುಭಾಸ್‌ ಶೆಟ್ಟಿ (55), ತಂದೆ: ಮಂಜಯ್ಯ ಶೆಟ್ಟಿ, ವಾಸ: ಉದ್ದಿನಹಕ್ಲು, ಹೊಸೂರು ಗ್ರಾಮ, ಕುಂದಾಪುರ ತಾಲೂಕು ಇವರ  ಮಗಳ ಗಂಡ ಜಯರಾಮ ಶೆಟ್ಟಿ(42) ರವರು ದಿನಾಂಕ 18/08/2022 ರಂದು ವಂಡ್ಸೆ ಅಡಿಕೆಕೊಡ್ಲು ಉದಯ ಕುಮಾರ್‌ಶೆಟ್ಟಿ ಎಂಬುವವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು 13:30 ಗಂಟೆಯ ಹೊತ್ತಿಗೆ ವಂಡ್ಸೆ ಚಕ್ರ ನದಿಗೆ ಕೈಕಾಲು ತೊಳೆಯಲು ಹೋದವರು ಆಕಸ್ಮಿಕವಾಗಿ ಕಾಲು ಜಾರಿ ಚಕ್ರ ನದಿಗೆ ಬಿದ್ದು ನದಿಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದವರು 15:30 ಗಂಟೆಗೆ ಗುಲ್ವಾಡಿ ಗ್ರಾಮದ ವಂಡ್ಸೆ ಸೇತುವೆಯ ಕೆಳಭಾಗದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 23/2022 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 19-08-2022 09:58 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080