ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 19/02/2023  ರಂದು  ರಾತ್ರಿ   8:30 ಗಂಟೆಗೆ ಕುಂದಾಪುರ ತಾಲೂಕು, ಬಸ್ರೂರು ಗ್ರಾಮದ ಪಾನಕದ ಕಟ್ಟೆಯ ಬಸ್‌ಸ್ಟಾಪ್‌‌ಬಳಿ SH 52 ರಸ್ತೆಯಲ್ಲಿ,  ಆಪಾದಿತ ಕೃಷ್ಣಯ್ಯ ಶೆಟ್ಟಿ ಎಂಬುವವರು KA-04-MB-2062ನೇ ಕಾರನ್ನು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ಅತೀವೇಗ ಹಾಗೂ  ನಿರ್ಲಕ್ಷ್ಯ ತನದಿಂದ  ಚಾಲನೆ ಮಾಡಿಕೊಂಡು  ಬಂದು, ಅದೇ ದಿಕ್ಕಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಿರ್ಯಾದಿದಾರರಾದ ಅಬ್ದುಲ್‌‌ ಶುಕುರ್‌ ‌‌ಸಾಹೇಬ್‌‌ರವರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅಬ್ದುಲ್‌ ‌ಶುಕುರ್‌ ‌‌ಸಾಹೇಬ್‌‌ರವರ ಎಡಕಾಲಿನ ಮುಂಗಾಲು ಗಂಟಿಗೆ ಒಳಜಖಂ, ಎಡಕಾಲಿಗೆ, ಬಲಕಾಲಿಗೆ, ಎರಡೂ ಕೈಗಳಿಗೆ, ತಲೆಗೆ ಹಾಗೂ ಹಣೆಗೆ  ತರಚಿದ ರಕ್ತಗಾಯವಾಗಿ ಚಿಕಿತ್ಸೆ  ಬಗ್ಗೆ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ  ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 20/2023 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹೆಬ್ರಿ: ದಿನಾಂಕ 20/02/2023 ರಂದು ಪಿರ್ಯಾದಿದಾರರಾದ ಚಂದನ್‌ ರಾವ್‌ (23), ತಂದೆ: ಕೃಷ್ಣ ರಾವ್‌, ವಾಸ: ಸಾಲಿಕೇರಿ ಬ್ರಹ್ಮಾವರ, ಬ್ರಹ್ಮಾವರ ತಾಲೂಕು ಉಡುಪಿ ಜಿಲ್ಲೆ ಇವರು KA-20-MA-0721  ನೇ ಕಾರಿನಲ್ಲಿ ಸಂಬಂದಿಕರಾದ ಸುನೀತಾ, ಸುಶ್ಮೀತಾ, ಸುಶಾಂತ್  ರವರನ್ನು ಕುಳ್ಳಿರಿಸಿಕೊಂಡು ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿರುವಾಗ ಮಧ್ಯಾಹ್ನ 12:00 ಗಂಟೆಗೆ ನಾಡ್ಪಾಲು  ಗ್ರಾಮದ ಸೋಮೇಶ್ವರ ಘಾಟಿಯ 2ನೇ ತಿರುವು ತಲುಪುವಾಗ ಎದುರುಗಡೆಯಿಂದ ಆಗುಂಬೆ ಕಡೆಯಿಂದ ಉಡುಪಿ ಕಡೆಗೆ KA-14-B-5306 ನೇ ಟಿಪ್ಪರ್ ಲಾರಿಯನ್ನು ಅದರ ಚಾಲಕ ನಾಗೇಶ್ ಶೆಣೈ ಇವರು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಪಿರ್ಯಾದಿದಾರರ ಕಾರಿನ ಬಲಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂದಿನ ಬಲಬದಿಯ ಭಾಗವು ಜಖಂ ಅಗಿರುತ್ತದೆ.  ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 09/2023 ಕಲಂ: 279 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಕಾರ್ಕಳ: ಪಿರ್ಯಾದಿದಾರರಾದ ಸುಕೇಶ್ (22) , ತಂದೆ: ಸುಂದರ, ವಾಸ: ದರ್ಖಾಸು ಮನೆ ಮಂಜಲ್ತಾರ್ ಮಾಳ   ಅಂಚೆ, ಮತ್ತು  ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ತಂದೆ ಶ್ರೀ ಸುಂದರ (47) ಇವರು ಎರಡೂವರೆ ವರ್ಷದಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದು,ಈ ಬಗ್ಗೆ ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಿನಾಂಕ 20/02/2023 ರಂದು ಬೆಳಿಗ್ಗೆ 07:30 ಗಂಟೆಗೆ ಮನೆಯಲ್ಲಿ ಊಟ ಮಾಡುತ್ತಿರುವಾಗ ಉಸಿರಾಡಲು ಆಗದೇ ತೀವ್ರ ಅಸ್ವಸ್ಥಗೊಂಡವರನ್ನು ಚಿಕಿತ್ಸೆ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ  ಆಸ್ಪತ್ರೆಯ ವೈದ್ಯರು ಬೆಳಿಗ್ಗೆ 08:10 ಗಂಟೆಗೆ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 13/2023 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 20-02-2023 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080