ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಮಣಿಪಾಲ: ದಿನಾಂಕ  20/05/2022 ರಂದು 17:45 ಗಂಟೆಗೆ ಉಡುಪಿ ತಾಲೂಕು ಅಲೆವೂರು ಗ್ರಾಮದ ಮೂಡು ಅಲೆವೂರು ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸ್ವಲ್ಪ ಮುಂದೆ ಅಲೆವೂರು - ಕರ್ವಾಲು ರಸ್ತೆಯಲ್ಲಿ KA-20-MA-7318 ನೇ ಕ್ರೇನ್ ವಾಹನದ ಚಾಲಕ ಸಂಜಯ  ಕ್ರೇನ್ ನನ್ನು ಕರ್ವಾಲು ಕಡೆಯಿಂದ ಅಲೆವೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರ ಎಡಬದಿಯಿಂದ ಚಲಾಯಿಸಿ ಕರ್ವಾಲು ಕಡೆಯಿಂದ ಅಲೆವೂರು ಕಡೆಗೆ ರಸ್ತೆಯ ಎಡ ಅಂಚಿನಲ್ಲಿ ನಡೆದುಕೊಂಡು ಹೋಗುತ್ತೀದ್ದ ನಾತು ಶೇರಿಗಾರ್ (85 ) ಎಂಬುವವರಿಗೆ ಡಿಕ್ಕಿ ಹೊಡೆದು  ಕ್ರೇನ್ ನ ಎದುರಿನ ಚಕ್ರ ನಾತು ಶೇರಿಗಾರ್ ರವರ ಮೇಲೆ ಹರಿದು ತಲೆಯ ಬಲಭಾಗ , ಎರಡು ಕೈಗಳು, ಎರಡು ಕಾಲುಗಳಿಗೆ ತೀವ್ರ ರಕ್ತ ಗಾಯವಾಗಿದ್ದು  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ಸಾಗಿಸುತ್ತಿದ್ದಾಗ ನಾತು  ಶೇರಿಗಾರ ರವರು ಮೃತಪಟ್ಟಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 69/2022 ಕಲಂ: 279, 304(A) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಪಡುಬಿದ್ರಿ: ಪಿರ್ಯಾದಿದಾರರಾದ ಶಶಿಧರ ಶೆಟ್ಟಿ (60), ತಂದೆ: ದಿ. ಭೋಜರಾಜ ಶೆಟ್ಟಿ, ವಾಸ:ಸೌರಭ ಮನೆ, ಬೆಳ್ಮಣ್ಣು ಗ್ರಾಮ. ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರು ಕಾಪು ತಾಲೂಕು ಪಾದೆಬೆಟ್ಟು ಗ್ರಾಮ ಕಂಚಿನಡ್ಕದಲ್ಲಿ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ನಡೆಸಿಕೊಂಡಿದ್ದು,  ದಿನಾಂಕ 19/05/2022 ರಂದು ಪೆಟ್ರೋಲ್ ಪಂಪಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿರುವ ತುಳಸಿ (35) ಎಂಬುವವರು ತಮ್ಮ ಮಗ ಅದ್ವೀತ್ (6) ನಿಗೆ ಔಷಧ ತರಲೆಂದು ಅವರ  KA-19-EC-0362 ನೇ ನಂಬ್ರದ ಸ್ಕೂಟಿಯಲ್ಲಿ ಪಡುಬಿದ್ರಿಗೆ ಹೋಗಿ ವಾಪಾಸ್ಸು ಪಡುಬಿದ್ರಿ–ಕಾರ್ಕಳ ರಾಜ್ಯಹೆದ್ದಾರಿ-01 ರಲ್ಲಿ ಬರುತ್ತಾ ಸಂಜೆ 19:00 ಗಂಟೆಗೆ ಪೆಟ್ರೋಲ್ ಪಂಪ್ ಬಳಿ ತಮ್ಮ ಮನೆಗೆ ಹೋಗಲು ಸೂಚನೆ ನೀಡಿ ಸ್ಕೂಟಿಯನ್ನು ಬಲಕ್ಕೆ ತಿರುಗಿಸಿ ಚಲಾಯಿಸುತ್ತಿದ್ದಂತೆ KL-30-F-7859 ನೇ ನಂಬ್ರದ ಮೋಟಾರ್ ಸೈಕಲ್ ಸವಾರ ಕಣ್ಣನ್  ತನ್ನ ಮೋಟಾರ್ ಸೈಕಲ್ ನ್ನು ಕಾರ್ಕಳ  ಕಡೆಯಿಂದ ಪಡುಬಿದ್ರಿ ಕಡೆಗೆ ಅತೀವೇಗ ಹಾಗೂ ಅಜಾರೂಕತೆಯಿಂದ ಚಲಾಯಿಸಿಕೊಂಡು ಬಂದು ತುಳಸಿ ರವರ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡೂ ಮೋಟಾರ್ ಸೈಕಲ್‌‌ಗಳು ಸವಾರ ಹಾಗೂ ಸಹ ಸವಾರರ ಸಮೇತ ರಸ್ತೆಗೆ ಬಿದ್ದಿರುತ್ತಾರೆ.  ಅಪಘಾತದಿಂದ ಎರಡೂ ಮೋಟಾರ್ ಸೈಕಲ್ಲುಗಳು ಜಖಂಗೊಂಡಿದ್ದು, ತುಳಸಿ ರವರ ಎಡಕೈ ಮತ್ತು ಎರಡೂ ಕೈಗಳು ಎತ್ತಲಾಗದ ಸ್ಥಿತಿಯಲ್ಲಿದ್ದು, ಅವರಮ ಅದ್ವಿತ್‌ನ ತಲೆಗೆ ಮತ್ತು ಕೈ ಕಾಲುಗಳಿಗೆ ಗಾಯವಾಗಿದ್ದು, ಮೋಟಾರ್ ಸೈಕಲ್ ಸವಾರ ಕಣ್ಣನ್ ರವರ ಕೈ ಕಾಲುಗಳಿಗೂ ತರಚಿದ ಗಾಯವಾಗಿರುತ್ತದೆ. ನಂತರ ಗಾಯಾಳುಳಿಗೆ ಪಡುಬಿದ್ರಿಯ ಸಿದ್ದಿವಿನಾಯಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ತುಳಸಿ ಮತ್ತು ಅದ್ವಿತ್‌ನನ್ನು ಉಡುಪಿಯ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ನಂತರ ಆಯುಷ್ಮಾನ್ ಯೋಜನೆಯಲ್ಲಿ ಚಿಕಿತ್ಸೆ ಸೌಲಭ್ಯ ಪಡೆಯಲು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಿಸಿರುವುದಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 58/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಉಡುಪಿ: ಪಿರ್ಯಾದಿದಾರರಾದ ಸಂದೀಪ ಎನ್‌ ದೇವಾಡಿಗ (36), ತಂದೆ: ಪಿ.ಎನ್‌ ದೇವಾಡಿಗ, ವಾಸ: ನಾಗಿ ನಿಲಯ, ಮನೆ ನಂಬ್ರ:7-50, ನಿಟ್ಟೂರು, ಪುತ್ತೂರು ಗ್ರಾಮ, ಉಡುಪಿ ತಾಲೂಕು ಇವರ ತಾಯಿ ಶ್ರೀಮತಿ ಸರಸ್ವತಿ (58) ರವರು ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದವರು, ದಿನಾಂಕ 20/05/2022 ರಂದು 15:15 ಗಂಟೆಗೆ ಸರಸ್ವತಿಯವರಿಗೆ ಅಸ್ತಮಾ ಖಾಯಿಲೆ ಉಲ್ಬಣಗೊಂಡು ತೀವ್ರ ಅಸ್ವಸ್ಥಗೊಂಡವರನ್ನು ಉಡುಪಿ ಹೈಟೆಕ್‌ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಸರಸ್ವತಿಯವರು ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 29/2022 ಕಲಂ: 174 CrPC ಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-05-2022 09:40 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080