Feedback / Suggestions

ಅಪಘಾತ ಪ್ರಕರಣ

  • ಉಡುಪಿ: ಪಿರ್ಯಾದಿರರಾದ ಪಾರ್ವತಿ (45), ಗಂಡ: ಪ್ರೇಮ್ ಕುಮಾರ್, ವಾಸ: ಆತಿಥಿ ಬಿಲ್ಡಿಂಗ್, ಬ್ಯಾಂಕ್ ಆಫ್ ಬರೋಡಾ ಬಿಲ್ಡಿಂಗ್ ,ಸಂತೆಕಟ್ಟೆ, ಪುತ್ತೂರು ಗ್ರಾಮ ಇವರ ಗಂಡ ಪ್ರೇಮ್ ಕುಮಾರ್ (57) ರವರು ಆತಿಥಿ ಬಿಲ್ಡಿಂಗ್ ನಲ್ಲಿ ವ್ಯಾಚ್‌ಮ್ಯಾನ್ ಕೆಲಸ ಮಾಡುಕೊಂಡಿದ್ದು, ದಿನಾಂಕ 21/09/2022 ರಂದು ಬೆಳಿಗ್ಗ ಬಾಡಿಗೆ ಹಣವನ್ನು ಪಿರ್ಯಾದಿದಾರರು ವಾಸ್ತವ್ಯ ಇರುವ ಬಿಲ್ಡಿಂಗ್ ಎದುರುಗಡೆ ಇರುವ ಪೈಂಟಿಂಗ್ ಅಂಗಡಿಯಲ್ಲಿಕೊಟ್ಟು ವಾಪಾಸು ರಾಷ್ಟ್ರೀಯ ಹೆದ್ದಾರಿ 66 ನೇ ಸಾರ್ವಜನಿಕ ರಸ್ತೆಯ ಮದ್ಯದಲ್ಲಿರುವ ಡಿವೈಡರ್ ದಾಟಿ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹಾದು ಹೋಗಿರುವ ಸಾರ್ವಜನಿಕ ಡಾಮಾರು ರಸ್ತೆಯನ್ನು ದಾಟಿ ರಸ್ತೆಯ ಅಂಚಿನಲ್ಲಿರುವಾಗ  ಬೆಳಿಗ್ಗೆ 09:30 ಗಂಟೆಗೆ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ KA-20-EX-7169 ನೇ  ಸ್ಕೂಟರ್ ಸವಾರನು ತಾನು ಸವಾರಿ ಮಾಡುತ್ತಿದ್ದ ಸ್ಕೂಟರ್‌ನ್ನು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ಪಿರ್ಯಾದಿದಾರರ ಗಂಡನಿಗೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರ  ಗಂಡ ರಸ್ತೆಗೆ ಬಿದ್ದು, ತಲೆಗೆ ರಕ್ತಗಾಯ ಮತ್ತು ಬಲಕಾಲಿಗೆ ಮೂಳೆ ಮುರಿತದ ಜಖಂ ಆದವರನ್ನು ಚಿಕಿತ್ಸೆಯ ಬಗ್ಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿರುವುದಾಗಿದೆ. ಅಲ್ಲದೇ ಆರೋಪಿ ಸ್ಕೂಟರ್ ಸವಾರನಿಗೂ ಅಫಘಾತದಿಂದ ಸಣ್ಣಪುಟ್ಟ ಗಾಯಗಳಾಗಿರುತ್ತದೆ.  ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 75/2022 ಕಲಂ: 279, 337,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

  • ಉಡುಪಿ: ದಿನಾಂಕ 20/09/2022 ರಂದು ಕೇಶವ ಗೌಡ , ಸಹಾಯಕ ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ ಇವರಿಗೆ  ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ರೋಯಲ್ ಎಂಬೆಸ್ಸಿ ಬಳಿ, ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತು ಸೇವಿಸಿರುವಂತೆ ಕಂಡು ಬಂದ ರಿಷಿತ್  ವಡ್ಡೆಪಳ್ಳಿ (21) ಎಂಬಾತನನ್ನು ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿ,  ದಿನಾಂಕ 22/09/2022 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ತಜ್ಞ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ರಿಷಿತ್ ವಡ್ಡೆಪಳ್ಳಿ ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 72/2022  ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ 20/09/2022 ರಂದು ಕೇಶವ ಗೌಡ, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ ಇವರಿಗೆ  ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ರೋಯಲ್ ಎಂಬೆಸ್ಸಿ ಬಳಿ, ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತು ಸೇವಿಸಿರುವಂತೆ ಕಂಡು ಬಂದ ನಿಲಯ್ ಪ್ರಶಾಂತ್ ಬಜಾರಿಯಾ (20) ಎಂಬಾತನನ್ನು ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿ, ದಿನಾಂಕ 22/09/2022 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ತಜ್ಞ ವರದಿಯನ್ನು ಸ್ವೀಕರಿಸಿ, ವರದಿಯಲ್ಲಿ ನಿಲಯ್ ಪ್ರಶಾಂತ್ ಬಜಾರಿಯಾ ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 73/2022  ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ 20/09/2022 ರಂದು ಕೇಶವ ಗೌಡ,  ಸಹಾಯಕ ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ ಇವರಿಗೆ  ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ರೋಯಲ್ ಎಂಬೆಸ್ಸಿ ಬಳಿ, ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತು ಸೇವಿಸಿರುವಂತೆ ಕಂಡು ಬಂದ ವೇದಾಂತ್ ಪ್ರಶಾಂತ್ ಬಜಾರಿಯಾ (22) ಎಂಬಾತನನ್ನು ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿ, ದಿನಾಂಕ 22/09/2022 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ತಜ್ಞ ವರದಿಯನ್ನು  ಸ್ವೀಕರಿಸಿ, ವರದಿಯಲ್ಲಿ ವೇದಾಂತ್ ಪ್ರಶಾಂತ್ ಬಜಾರಿಯಾ  ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 74/2022  ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ದಿನಾಂಕ 20/09/2022 ರಂದು ಕೇಶವ ಗೌಡ,  ಸಹಾಯಕ ಪೊಲೀಸ್ ಉಪನಿರೀಕ್ಷಕರು, ಸೆನ್ ಅಪರಾಧ ಪೊಲೀಸ್ ಠಾಣೆ ಇವರಿಗೆ  ಉಡುಪಿ ತಾಲೂಕು, ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನ ನಗರದ ರೋಯಲ್ ಎಂಬೆಸ್ಸಿ ಬಳಿ, ಸಾರ್ವಜನಿಕ ಸ್ಥಳದಲ್ಲಿ ಮೇಲ್ನೋಟಕ್ಕೆ ಮಾದಕ ವಸ್ತು ಸೇವಿಸಿರುವಂತೆ ಕಂಡು ಬಂದ ವೇದಾಂತ್ ದೇಶ್‌ಮುಖ್ (19) ಎಂಬಾತನನ್ನು ವಶಕ್ಕೆ ಪಡೆದು ಮೆಡಿಕಲ್ ತಪಾಸಣೆಗೊಳಪಡಿಸಿ, ದಿನಾಂಕ 22/09/2022 ರಂದು ಮಣಿಪಾಲ ಕೆ.ಎಂ.ಸಿ. ಫಾರೆನ್ಸಿಕ್ ವಿಭಾಗದಿಂದ ತಜ್ಞ ವರದಿಯನ್ನುಸ್ವೀಕರಿಸಿ, ವರದಿಯಲ್ಲಿ ವೇದಾಂತ್ ದೇಶ್‌ಮುಖ್  ಗಾಂಜಾ ಸೇವನೆ ಮಾಡಿರುವುದು ಖಚಿತಪಟ್ಟಿರುವುದಾಗಿದೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 75/2022  ಕಲಂ: 27 (b) ಎನ್‌.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Last Updated: 22-09-2022 06:09 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : UDUPI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080