ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಗಂಗೊಳ್ಳಿ: ದಿನಾಂಕ 19/11/2022 ರಂದು ಪಿರ್ಯಾದಿದಾರರಾದ ಸುರೇಶ್‌ ನಾಯಕ್‌(38), ,ದಿ. ರಾಮಕೃಷ್ಣ ನಾಯಕ್‌, ವಾಸ: ಭಗತ್‌ನಗರ, ಹೊಸಾಡು ಗ್ರಾಮ, ಕುಂದಾಪುರ ತಾಲೂಕು ಇವರು ಗಂಗೊಳ್ಳಿಯಿಂದ ತ್ರಾಸಿ ಕಡೆಗೆ ತನ್ನ ಮೋಟಾರು ಸೈಕಲ್‌ನಲ್ಲಿ ಬರುತ್ತಿರುವಾಗ 19:30 ಗಂಟೆಗೆ ಕುಂದಾಪುರ ತಾಲೂಕು ಗುಜ್ಜಾಡಿ ಗ್ರಾಮದ ಕೊಡಪಾಡಿ ಹೆಚ್‌ ಪಿ ಗ್ಯಾಸ್‌ ಎಜೆನ್ಸಿಯ ಬಳಿ ರಸ್ತೆಯಲ್ಲಿ ಪಿರ್ಯಾದಿದಾರರ ಎದುರಿನಿಂದ ತ್ರಾಸಿ ಕಡೆಯಿಂದ ಗಂಗೊಳ್ಳಿ ಕಡೆಗೆ ಕವಿತಾ ಗಾಣಿಗ ಎಂಬುವವರು KA-20-ED-7829 ನೇ ಸ್ಕೂಟರನಲ್ಲಿ ರಾಜೇಶ ಗಾಣಿಗರವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಚಲಾಯಿಸಿಕೊಂಡು ಬರುತ್ತಿರುವಾಗ ನಾಯಿಯೊಂದು ಸ್ಕೂಟರ್‌ ಗೆ ಅಡ್ಡ ಬಂದಿದ್ದು, ಸ್ಕೂಟರ ಸವಾರಳು ಒಮ್ಮೇಲೆ ಬ್ರೇಕ್‌ ಹಾಕಿದ ಪರಿಣಾಮ ಸವಾರಳು ಹಾಗೂ ಸಹಸವಾರ, ಸ್ಕೂಟರ ಸಮೇತವಾಗಿ ರಸ್ತೆಗೆ ಬಿದ್ದಿದ್ದು ಸಹಸವಾರ ರಾಜೇಶ ಗಾಣಿಗ ರವರಿಗೆ ಬಲ ಕೈಗೆ ತರಚಿದ ಗಾಯ ಹಾಗೂ ಬಲಭುಜಕ್ಕೆ ಗುದ್ದಿದ ಗಾಯವಾಗಿರುತ್ತದೆ.  ಗಾಯಗೊಂಡ  ರಾಜೇಶ್‌ರವರನ್ನು ಹೈದರ ಎಂಬುವವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ಕರೆದುಕೊಂಡು ಹೋಗಿರುತ್ತಾರೆ.  ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 107/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ .

 ಇತರ ಪ್ರಕರಣ

  • ಕೋಟ: ಪಿರ್ಯಾದಿದಾರರಾದ ಬಿ ಸುರೇಂದ್ರ ಹೆಗ್ಡೆ (63), ತಂದೆ: ಮುದ್ದಣ್ಣ ಹೆಗ್ಡೆ, ವಾಸ: ಕೆದೂರು ಕುಂದಾಪುರ ತಾಲೂಕು ಇವರು ದಿನಾಂಕ 21/11/2022 ರಂದು ಉಳ್ತೂರಿನ ತನ್ನ ಸ್ವಂತ ಕ್ರಯದ  ಹಕ್ಕಿನ ಸ್ಥಿರಾಸ್ತಿಯಲ್ಲಿ ಕಟ್ಟಡ ಕಾಮಗಾರಿ ಮಾಡಲು ಬಾಡಿಗೆ ಜೆ.ಸಿ.ಬಿ ತಂದು  ಕೆಲಸ ಮಾಡಿಕೊಂಡಿರುವಾಗ  ಆರೋಪಿ ವಿಜಯ  ಸಂಜೆ 5:00 ಗಂಟೆಗೆ ಮೋಟಾರ್ ಸೈಕಲಿನಲ್ಲಿ ಪಿರ್ಯಾದಿದಾರರು ಕೆಲಸ ಮಾಡುತ್ತಿರುವ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ಬೈದು  ನಿನ್ನ ಜೆಸಿಬಿ ಗಾಜು ಒಡೆಯುತ್ತೇನೆ ಎಂದು ಬೈಯುತ್ತಿರುವಾಗ ಪಿರ್ಯಾದಿದಾರರು ಹಾಗೂ ಅವರ ಮಗ ವಿವೇಕ ಹೆಗ್ಡೆ ಸ್ಥಳಕ್ಕೆ ಬಂದಾಗ  ಅವರನ್ನು ಉದ್ದೇಶಿಸಿ  ಕೆಲಸವನ್ನು ನಿಲ್ಲಿಸು ಕೆಲಸ ಮಾಡಲಿಕ್ಕೆ ಬಿಡುವುದಿಲ್ಲ  ಎಂದು ಅವಾಚ್ಯವಾಗಿ ಬೈದು ಕೆಲಸ ನಿಲ್ಲಿಸದಿದ್ದರೆ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನಂತೆ ಕೋಟ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 206/2022 ಕಲಂ: 447, 504, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.     

ಇತ್ತೀಚಿನ ನವೀಕರಣ​ : 23-11-2022 09:24 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080