ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ದಿನಾಂಕ 23/05/2022 ರಂದು ಬೆಳಗ್ಗೆ 9:00 ಗಂಟೆಗೆ ಕಾರ್ಕಳ ತಾಲೂಕು, ಮುಡಾರು ಗ್ರಾಮದ ಅಪ್ಪಾಯಿ ಬಸದಿ ಬಳಿ ಹಾದು ಹೋಗಿರುವ ಕಾರ್ಕಳ-ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿರ್ಯಾದಿದಾರರಾದ ಶ್ರೀಮತಿ ಪವಿತ್ರ ಶೆಟ್ಟಿ (30) ತಂದೆ: ದಯಾನಂದ ಶೆಟ್ಟಿ, ವಾಸ: ಗುರುಶ್ರೀ ಹೌಸ್, ಪೇರಡ್ಕ, ಮಾಳ ಅಂಚೆ ಮತ್ತು ಗ್ರಾಮ, ಕಾರ್ಕಳ ತಾಲೂಕು, ಉಡುಪಿ ಇವರು ಟಿವಿಎಸ್ ಕಂಪೆನಿಯ ಜುಪಿಟರ್ ದ್ವಿಚಕ್ರ ವಾಹನ ನಂಬ್ರ KA-20 EW-5324 ನೇಯದರಲ್ಲಿ ತಮ್ಮ ತಂಗಿಯ ಗಂಡ ಪ್ರಸಾದ್‌ ‌ಎಂಬವರನ್ನು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಮಾಳ ಕಡೆಯಿಂದ ಬಜಗೋಳಿ ಕಡೆಗೆ ಸವಾರಿ ಮಾಡಿಕೊಂಡು ಹೋಗುವಾಗ ಅದೇ ದಿಕ್ಕಿನಲ್ಲಿ ಅಂದರೆ, ಮಾಳ ಕಡೆಯಿಂದ ಬಜಗೋಳಿ ಕಡೆಗೆ ಟೆಂಪೋ ನಂಬ್ರ KA-20 D-4328 ನೇಯದರ ಚಾಲಕನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಶ್ರೀಮತಿ ಪವಿತ್ರ ಶೆಟ್ಟಿ ರವರು ಹಾಗೂ ಸಹಸವಾರನು ದ್ವಿಚಕ್ರ ವಾಹನ ಸಮೇತ ಡಾಮಾರು ರಸ್ತೆಗೆ ಬಿದ್ದು, ಇವರ ಬಲಕೈ ಭುಜದ ಬಳಿ ಮೂಳೆ ಮುರಿತವಾಗಿರುವುದಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 65/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕಾರ್ಕಳ: ದಿನಾಂಕ 24/05/2022 ರಂದು ಬೆಳಗ್ಗೆ 11:00 ಗಂಟೆಗೆ ಕಾರ್ಕಳ ತಾಲೂಕು, ನಿಟ್ಟೆ ಗ್ರಾಮದ ಬ್ರಾಮರಿ ಎಂಬಲ್ಲಿನ ಗ್ಯಾರೇಜ್ ಬಳಿ ಹಾದು ಹೋಗಿರುವ ಕಾರ್ಕಳ-ಮಂಗಳೂರು ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳ ಕಡೆಯಿಂದ ನಿಟ್ಟೆ ಕಡೆಗೆ KA-20 MD-2142  ನೇ ನಂಬ್ರದ ಕಾರಿನ ಚಾಲಕನು ಆತನ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಆತನ  ಮುಂದಿನಿಂದ ಹೋಗುತ್ತಿದ್ದ KA-20-D-8631 ನೇ ನಂಬ್ರದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪರಿಣಾಮ  ರಿಕ್ಷಾ ಮಗುಚಿ ಬಿದ್ದು,  ರಿಕ್ಷಾ ಚಾಲಕ ಪ್ರಶಾಂತ ಎಂಬವರ ತಲೆಗೆ ತೀವೃ ಸ್ವರೂಪದ  ಗಾಯ, ಎಡಕಾಲಿಗೆ ರಕ್ತಗಾಯ, ಕೈಕಾಲುಗಳಿಗೆ ತರಚಿದ  ಗಾಯವಾಗಿರುವುತ್ತದೆ, ಎಂಬುದಾಗಿ ರಘುಪತಿ ಆಚಾರ್ಯ (50) ತಂದೆ: ಗಣಪತಿ , ವಾಸ: ಹೇಮ ನಿವಾಸ, ಬೊರ್ಗಲ್ ಗುಡ್ಡೆ  ನಿಟ್ಟೆ ಗ್ರಾಮ  ಕಾರ್ಕಳ ತಾಲೂಕು, ಉಡುಪಿ ಇವರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 66/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಮಾಧಕ ವಸ್ತು ಸೇವನೆ ಪ್ರಕರಣ

  • ಕಾಪು: ಶ್ರೀಶೈಲ ಮುರಗೋಡ ಪಿಎಸ್‌ಐ ಕಾಪು ಪೊಲೀಸ್ ಠಾಣೆ ಇವರು ದಿನಾಂಕ 23/05/2022 ರಂದು ಸಮಯ 12:00 ಗಂಟೆಗೆ ಠಾಣಾ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಲ್ಲಾರು ಗ್ರಾಮದ ಸ್ವಾಗತ ನಗರ ಸಮೀಪ ಅನುಮಾನಾಸ್ಪದ ಓರ್ವ ವ್ಯಕ್ತಿ ಕಂಡು ಬಂದಿದ್ದು ಆತನು ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಅವನ ಬಳಿ ಹೋಗಿ ಅವನ ಹೆಸರು ವಿಳಾಸ  ಕೇಳಿ ಅವನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಿಸಿ ವಿಳಾಸ ತಿಳಿದುಕೊಳ್ಳಲಾಗಿ ಆತನ ಹೆಸರು ಶಬರೀಶ ಎಂದು ತಿಳಿಸಿದ್ದು ಸದ್ರಿಯವರಿಗೆ ಪೊಲೀಸ್ ನೋಟಿಸ್ ನೀಡಿ ವೈದ್ಯಕೀಯ ಪರೀಕ್ಷೆಯ ಬಗ್ಗೆ ಸಿಬ್ಬಂದಿಯವರನ್ನು ನೇಮಕ ಮಾಡಿ  ಪ್ರೊಫೆಸರ್ ಅಂಡ್ ಹೆಡ್  ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ  ಇವರ ಮುಂದೆ ಹಾಜರು ಪಡಿಸಲು ಕಳಿಸಿದ್ದು ಅದರಂತೆ ಸದ್ರಿ ಸಿಬ್ಬಂದಿಯವರು ಪ್ರೊಫೆಸರ್ ಅಂಡ್ ಹೆಡ್  ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ ಇವರ ಮುಂದೆ ಹಾಜರು ಪಡಿಸಿದ್ದು, ಪರೀಕ್ಷಿಸಿದ ವೈದ್ಯರು ದಿನಾಂಕ 24/05/2022 ರಂದು ಶಬರೀಶ ಎಂಬಾತನು ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿರುತ್ತಾರೆ. ಆದುದರಿಂದ ಸದ್ರಿ ವೈದ್ಯರ ದೃಢ ಪತ್ರದ ಆಧಾರದಲ್ಲಿ ಮೇಲಿನ ಆರೋಪಿಯ ಮೇಲೆ ಕಾಫು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 49/2022 ಕಲಂ: 27(b) NDPS Actರಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 24-05-2022 06:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080