ಅಭಿಪ್ರಾಯ / ಸಲಹೆಗಳು

                       ಬಂಗಾರದ ಆಭರಣ ಕಳವು ಪ್ರಕರಣದ ಆರೋಪಿ ಬಂಧನ

 

ದಿನಾಂಕ:19/07/2022 ರಂದು ಎಎಸ್ಐ ಅರುಣ್ ಹೆಚ್ ಹಗಲು ಠಾಣಾ  ಪ್ರಭಾರ ಕರ್ತವ್ಯದಲ್ಲಿರುತ್ತಾ ಸಂಜೆ 16:30 ಗಂಟೆಗೆ  ಉಡುಪಿ ತಾಲೂಕು ಮೂಡನಿಡಂಬೂರು  ಗ್ರಾಮದ  ಕೋರ್ಟ್ ಹಿಂಬದಿ ರಸ್ತೆಯ ರುಕ್ಮಿಣಿ ಕೃಷ್ಣ ಮನೆಯ ನಿವಾಸಿ ವಾಣಿ ವಿ ರಾವ್ ರವರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ  ಪಿರ್ಯಾದಿಯ  ಸಾರಾಂಶವೇನಂದರೆ,ದಿನಾಂಕ:19/07/2022 ರಂದು ಬೆಳಿಗ್ಗೆ 10:45 ಗಂಟೆಯಿಂದ 14:10 ಗಂಟೆ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಮನೆಯ ಒಳಪ್ರವೇಶಿಸಿ, ಬೆಡ್‌ರೂಂನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್‌ನಲ್ಲಿಇರಿಸಿದ್ದ ಬೂದು ಬಣ್ಣದ ಪರ್ಸ್ ನಲ್ಲಿದ್ದ  ರೂ 45,000/- ನಗದು ಮತ್ತು ಕಪ್ಪು ಬಣ್ಣದ ವ್ಯಾನಿಟಿ ಬ್ಯಾಗ್‌ನಲ್ಲಿರಿಸಿದ್ದ1) 5 ಪವನ್ ತೂಕದ ಪಚ್ಚೆಕಲ್ಲು ಇರುವ ಚಿನ್ನದ ಬ್ರೇಸ್‌ಲೇಟ್‌ 2) 6 ಪವನ್‌ ತೂಕದ ಮುತ್ತಿನ ಬಳೆ-2, 3) 5½ ಪವನ್‌ ತೂಕದ ಚಿನ್ನದ ಖಡಗ ಬಳೆಗಳು-2, 4) 6 ಪವನ್‌ ತೂಕದ ಚಿನ್ನದ ಸರ ಮತ್ತು 1 ಪವನ್‌ ತೂಕದ ಪೆಂಡೆಂಟ್‌ 5) 6 ಪವನ್‌ ತೂಕದ ಮಲ್ಲಿಗೆ ಮೊಗ್ಗು ಚಿನ್ನದ ಸರ 6) 1½ ಪವನ್‌ ತೂಕದ ಚಿನ್ನದ ಸರ ಮತ್ತು ನೀಲಿ ಹರಳಿನ ಪೆಂಡೆಂಟ್‌ 7) ನೀಲಿ ಕಲ್ಲಿನ ಬೆಂಡೋಲೆ ಮತ್ತು ಕರಮಣಿ ಹರಳಿನ ಬೆಂಡೋಲೆ – 2ಜೊತೆ 8) ಜುಮ್ಕಿ ಮತ್ತು ಮಾಟಿ- 2 ಜೊತೆ 9) 1 ಪವನ್‌ ತೂಕದ ಚಿನ್ನದ ತುಂಡುಗಳು ಮತ್ತು ಕೊಕ್ಕೆ 10) 3 ಪವನ್‌ ತೂಕದ ಚಿನ್ನದ ನೆಕ್ಲೇಸ್‌ 11) 2½ ಪವನ್‌ ತೂಕದ ಗ್ರೇನೆಟ್‌ ಹರಳಿನ ನೆಕ್ಲೇಸ್‌ ಮತ್ತು ಸುಮಾರು 3 ಪವನ್‌ನ ಗ್ರೇನೆಟ್‌ ಹರಳಿನ ಬಳೆ 12) 4 ಗ್ರಾಮ್‌ ನ ಚಿನ್ನದ ನಾಣ್ಯ-6 13) 4 ರೇಷ್ಮೆ ಸೀರೆಗಳು ಮತ್ತು 1 ಸಾಧಾರಣ ಸೀರೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂ. 25,00,000/- ಆಗಬಹುದು.             

         ಪ್ರಕರಣದಲ್ಲಿ  ಆರೋಪಿ ಪತ್ತೆಯ ಬಗ್ಗೆ ವಿಶೇಷ ಕರ್ತವ್ಯದಲ್ಲಿ ಹೋದ ಠಾಣಾ ಸಿಬ್ಬಂದಿಗಳಾದ  ಸತೀಶ್ ಬೆಳ್ಳೆ, ಗಡ್ಡಯ್ಯ, ಮಲ್ಲಯ್ಯರವರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮುತ್ತಪ್ಪ ಬಸಪ್ಪ ಮಾವರಾಣಿ ನನ್ನುಬಾಗಲಕೋಟೆ ಜಿಲ್ಲೆ ನೀಲನಗರ, ಸಿದ್ದೇಶ್ವರ ಕ್ರಾಸ್ ಬಳಿಯಿಂದ ವಶಕ್ಕೆ ಪಡೆದು  ಆರೋಪಿಯಿಂದ 10ಲಕ್ಷ  ರೂಪಾಯಿ ಮೌಲ್ಯದ  ಚಿನ್ನಾಭರಣ ಮತ್ತು 38,500 ನಗದನ್ನು ವಶಪಡಿಸಿ ಮಾನ್ಯ ನ್ಯಾಯಾಲಯಕ್ಕೆ  ಹಾಜರುಪಡಿಸಿದಲ್ಲಿ ನ್ಯಾಯಾಲಯವು  ಆರೋಪಿಗಳಿಗೆ15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

             ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್‌ ಅಧೀಕ್ಷಕರಾದ ಶ್ರೀ ಎನ್‌. ವಿಷ್ಣುವರ್ಧನ್‌, ಐ.ಪಿ.ಎಸ್‌, ಉಡುಪಿ ರವರ ಆದೇಶದಂತೆ, ಶ್ರೀ ಸಿದ್ದಲಿಂಗಪ್ಪ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು,ಶ್ರೀ ಸುಧಾಕರ ಸದಾನಂದ ನಾಯ್ಕ್, ಡಿವೈಎಸ್‌ಪಿ ಉಡುಪಿ ರವರ ನಿರ್ದೇರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿ,ರವರ ಮಾರ್ಗದರ್ಶನದಂತೆ ಪಿ.ಎಸ್‌.ಐ-1 ಮಹೇಶ್ ಟಿ.ಎಮ್, ಪ್ರಸಾದ್‌ಕುಮಾರ್‌ ಕೆ. ಪೊಲೀಸ್‌ ಉಪ ನಿರೀಕ್ಷಕರು ತನಿಖೆ-1, ಹಾಗೂ  ಸಿಬ್ಬಂದಿಯವರಾದ ಎ.ಎಸ್.ಐ ಅರುಣ್ ,ಸತೀಶ್ ಬೆಳ್ಳೆ , ಕಿರಣ್, ಚೇತನ್,ಆನಂದ,ಕಾರ್ತಿಕ್, ಕುಮಾರ್ ,ಮಲ್ಲಯ್ಯ, ಗಡ್ಡಯ್ಯ, ಹೇಮಂತ್ , ಶಿವಕುಮಾರ್, ರವರು ಸಹಕರಿಸಿರುತ್ತಾರೆ.

                                            ಆರೋಪಿತನ  ಹೆಸರು ವಿಳಾಸ 

ಮುತ್ತಪ್ಪ ಬಸಪ್ಪ ಮಾವರಾಣಿ ಪ್ರಾಯ: 27 ವರ್ಷ ತಂದೆ: ಬಸಪ್ಪ ಗಂಗಪ್ಪ ಮಾವರಾಣಿ ವಾಸ: ನೀಲ ನಗರ ರಸ್ತೆ, ಜಾಮೀಯ ಮಸೀದಿ ಬಳಿ 7 ನೇ ವಾರ್ಡ ,ಲಕ್ಷ್ಮಿ ನಗರ ,ಶಿರೂರು ಗ್ರಾಮ ಮತ್ತು ಅಂಚೆ ಬಾಗಲಕೋಟೆ ತಾಲೂಕು ಮತ್ತು ಜಿಲ್ಲೆ.                

 

ಇತ್ತೀಚಿನ ನವೀಕರಣ​ : 25-07-2022 09:38 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080