ಅಭಿಪ್ರಾಯ / ಸಲಹೆಗಳು

ಇತರ ಪ್ರಕರಣಗಳು

  • ಉಡುಪಿ: ದಿನಾಂಕ 24/05/2021 ರಂದು ಸಂಜೆ ವಾಸಪ್ಪ ನಾಯ್ಕ್, ಪೊಲೀಸ್ ಉಪನಿರೀಕ್ಷಕರು(ಅಪರಾಧ ವಿಭಾಗ), ಉಡುಪಿ ನಗರ ಪೊಲೀಸ್ ಠಾಣೆ ಇವರು ಇಲಾಖಾ ಹೊಯ್ಸಳ ವಾಹನದಲ್ಲಿ ಠಾಣಾ ಸರಹದ್ದಿನಲ್ಲಿ ಹಗಲು ರೌಂಡ್ಸ್ ಕರ್ತವ್ಯದಲ್ಲಿರುವಾಗ ಪುತ್ತೂರು ಗ್ರಾಮದ ನಿಟ್ಟೂರು ಎಂಬಲ್ಲಿ ವಾಸವಾಗಿರುವ ವಲಸೆ ಕಾರ್ಮಿಕರನ್ನು ಅವರ ಊರಿಗೆ ಒಂದು ಕ್ರೂಸರ್(ತೂಫಾನ್) ವಾಹನ ನಂಬ್ರ ಕೆಎ-19- ಎನ್- 9749   ಚಾಲಕನು ಅವರಿಂದ ದುಪ್ಪಟ್ಟು ಹಣ ಪಡೆದು ಅದರಲ್ಲಿ ಹೆಚ್ಚಿನ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಅವರ ಜಿಲ್ಲೆಯಾದ ಬಾಗಲಕೋಟೆಯ ಇಳಕಲ್ ಕಡೆಗೆ ಕರೆದುಕೊಂಡು ಹೋಗುತ್ತಿರುವುದಾಗಿ ದೊರೆತ  ಮಾಹಿತಿಯಂತೆ 15:30 ಗಂಟೆಗೆ ನಿಟ್ಟೂರು ಬಳಿ ಹೋದಾಗ ಅಲ್ಲಿ ಒಂದು ಕ್ರೂಸರ್ ವಾಹನ ನಿಂತಿದ್ದು,  ವಲಸೆ ಕಾರ್ಮಿಕರನ್ನು ಕ್ರೂಸರ್ ವಾಹನದಲ್ಲಿ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದ್ದು, ಹೊಯ್ಸಳ ವಾಹನವನ್ನು ಕಂಡು  ಪ್ರಯಾಣಿಕರು ಅಲ್ಲಿಂದ ಓಡಿ ಹೋಗಿರುತ್ತಾರೆ. ಕ್ರೂಸರ್ ವಾಹನದ ಚಾಲಕ ಪದ್ಮಪ್ರಸಾದ್ ಕೋವಿಡ್-19 ರ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಮಾನ್ಯ ರಾಜ್ಯ ಸರ್ಕಾರ ಹಾಗೂ ಉಡುಪಿ ಜಿಲ್ಲಾಧಿಕಾರಿಯವರ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ಕೋವಿಡ್-19 ಸಾಂಕ್ರಾಮಿಕ ಖಾಯಿಲೆಯ ಸ್ಟೋಟ ಮತ್ತು ಹರಡುವುದನ್ನು ತಡೆಗಟ್ಟಲು ನಿರ್ಲಕ್ಷ ವಹಿಸಿರುತ್ತಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 87/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹಿರಿಯಡ್ಕ: ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 10/05/2021 ರಿಂದ 24/05/2021  ರ ವರೆಗೆ ಕೋವಿಡ್  ಲಾಕ್ಡೌನ್  ವಿಧಿಸಿ ಆದೇಶ ಹೊರಡಿಸಿದ್ದು, ಈ ಕರ್ಫ್ಯೂ ಜ್ಯಾರಿಗೊಳಿಸುವ ಬಗ್ಗೆ  ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು,  ಈ ಬಗ್ಗೆ ಈರಣ್ಣ ಶಿರಗುಂಪಿ,  ಪೊಲೀಸ್ ಉಪನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರು ದಿನಾಂಕ 24/05/2021 ರಂದು ಸಂಜೆ ಸಿಬ್ಬಂದಿಯವರೊಂದಿಗೆ ರೌಂಡ್ಸ ಕರ್ತವ್ಯದಲ್ಲಿರುವಾಗ ಅಂಜಾರು ಗ್ರಾಮದ  ಹಿರಿಯಡ್ಕ ಠಾಣೆಯ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ 1.  KA-20-EF-5548  ನೇ  ನಂಬ್ರದ  ಮೋಟಾರು ಸೈಕಲ್ ಸವಾರ ಪ್ರವೀಣ್, 2. KA-20-EW-7429 ನೇ ನಂಬ್ರದ ಬಜಾಜ್ ಪಲ್ಸರ್ ಮೋಟಾರ್ ಸೈಕಲ್ ಸವಾರ ಸರ್ವೋತ್ತಮ, 3. KA-20-X-5704 ನೇ ನಂಬ್ರದ ಬಜಾಜ್ ಮೋಟಾರ್  ಸೈಕಲ್ ಸವಾರ ಪ್ರಸನ್ನ ಯಾವುದೇ  ಸಮರ್ಪಕ ಕಾರಣ ಇಲ್ಲದೇ ಅನಗತ್ಯ ಓಡಾಟ ಮಾಡಿ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 36/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ 10/05/2021 ರಿಂದ 24/05/2021 ರವರೆಗೆ ಕೋವಿಡ್ ಕರ್ಪ್ಯೂ ವಿಧಿಸಿದ್ದು ಕರ್ಪ್ಯೂ ಜ್ಯಾರಿಗೊಳಿಸುವ ಬಗ್ಗೆ ಆದೇಶ ಹೊರಡಿಸಿದ್ದು ಈ ಬಗ್ಗೆ ದಿನಾಂಕ 24/05/2021 ರಂದು ಸದಾಶಿವ ಆರ್ ಗವರೋಜಿ, ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಪೊಲೀಸ್ ಠಾಣೆ ಇವರು ಸಿಬ್ಬಂದಿಯವರೊಂದಿಗೆ ಕುಂದಾಪುರ ತಾಲೂಕು ಕುಂದಾಪುರ ವಡೇರಹೋಬಳಿ  ಗ್ರಾಮದ ಶಾಸ್ತ್ರೀ ವೃತ್ತದ ಬಳಿ ವಾಹನ ತಪಾಸಣೆ ಕರ್ತವ್ಯದಲ್ಲಿರುವಾಗ 17:00 ಗಂಟೆಗೆ ಕುಂದಾಪುರ ಸಿಟಿ ಒಳಗಡೆ ಕೆಲವೊಂದು ವಾಹನಗಳನ್ನು ಅದರ ಸವಾರರು ಚಲಾಯಿಸಿಕೊಂಡು ಬರುತ್ತಿದ್ದನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ  ವಾಹನಗಳನ್ನು ಅದರ ವಾಹನ ಸವಾರರು ಚಲಾಯಿಸಿಕೊಂಡು ಸಕಾರಣವಿಲ್ಲದೆ ಅನಗತ್ಯವಾಗಿ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುತ್ತದೆ.  1) KA 47 R 1383 ದ್ವಿಚಕ್ರ ವಾಹನದ ಸವಾರ, 2) KA 20 EQ 3748 ದ್ವಿಚಕ್ರ ವಾಹನದ ಸವಾರ, 3) KA 20 ER 2465 ದ್ವಿಚಕ್ರ ವಾಹನದ ಸವಾರ, 4) KA 20 EV 3976 ದ್ವಿಚಕ್ರ ವಾಹನದ ಸವಾರ ಇವರು  ಮೇಲ್ಕಂಡ ವಾಹನ ಸವಾರರು ಕೋವಿಡ್ – 2019  ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು  ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು  ಹರಡುವ ಸಂಭವವಿದೆಯೆಂದು ತಿಳಿದೂ ಕೂಡಾ ಅನಾವಶ್ಯಕವಾಗಿ ಸಕಾರಣವಿಲ್ಲದೆ ಸಾರ್ವಜನಿಕ  ಸ್ಥಳದಲ್ಲಿ  ಸಂಚರಿಸಿಕೊಂಡು ನಿರ್ಲಕ್ಷತನದಿಂದ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕರವಾದಂಥ ರೋಗವು ಹರಡುವಂತೆ ಮಾಡಿ ನಿರ್ಲಕ್ಷತನ ತೋರಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 67/2021 ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಕುಂದಾಪುರ: ದಿನಾಂಕ 24/05/2021 ರಂದು ಬೆಳಿಗ್ಗಿನ ಜಾವ 01:07 ಗಂಟೆಯಿಂದ  01:40  ಗಂಟೆ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕುಂದಾಪುರ ತಾಲೂಕು ಬೀಜಾಡಿ  ಗ್ರಾಮದ ಕೆನರಾ ಬ್ಯಾಂಕ್‌ನ  ಪಕ್ಕದಲ್ಲಿರುವ ಕೆನರಾ ಬ್ಯಾಂಕ್‌ ಎಟಿಎಮ್‌ನೊಳಗೆ ಪ್ರವೇಶಿಸಿ ಎ.ಟಿ.ಎಮ್‌ನ ಸೇಫ್ ಡೋರ್, ಪಾಸ್‌ವರ್ಡ್ ಕೀ ಲಾಕ್‌ ಹಾಗು ಸೀಲಿಂಗ್ ಲೈಟ್‌ ನ್ನು ಹಾಳು ಮಾಡಿ ಎ ಟಿ ಎಮ್‌ನಲ್ಲಿರುವ ಹಣವನ್ನು ಕಳವು ಮಾಡಲು ಪ್ರಯತ್ನಿಸಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 66/2021  ಕಲಂ: 457, 511 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಶಿರ್ವಾ: ದಿನಾಂಕ 24/05/2021 ರಂದು   ಶ್ರೀಶೈಲ್‌.ಡಿ.ಎಂ, ಪೊಲೀಸ್ ಉಪನಿರೀಕ್ಷಕರು, ಶಿರ್ವಾ ಪೊಲೀಸ್ ಠಾಣೆ ಇವರು ಕೋವಿಡ್-19 ಕೋರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಮಾನ್ಯ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ದಿನಾಂಕ 26/04/2021 ರಿಂದ ದಿನಾಂಕ 12/05/2021 ರವರೆಗೆ ಕೋವಿಡ್ ಕರ್ಫ್ಯೂ ವಿಧಿಸಿ ಹೊರಡಿಸಿರುವ ಆದೇಶವನ್ನು ಪರಿಷ್ಕರಿಸಿ ದಿನಾಂಕ 24/05/2021 ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ 07/06/2021ರ ಬೆಳಿಗ್ಗೆ 06:00 ಗಂಟೆಯವರೆಗೆ ಲಾಕ್‌ಡೌನ್‌ ಘೋಷಿಸಿದ್ದು, ಈ ಬಗ್ಗೆ ಪೊಲೀಸ್‌ ಇಲಾಖೆಗೆ  ಆದೇಶ ಹೊರಡಿಸಿದ್ದು, ಈ ಬಗ್ಗೆ ವಾಹನ ತಪಾಸಣೆ ನಡೆಸುವಂತೆ ಮೇಲಾಧಿಕಾರಿಯವರ ಆದೇಶದಂತೆ ದಿನಾಂಕ 24/05/2021 ರಂದು 17:30 ಗಂಟೆಗೆ ಶಿರ್ವಾ ಗ್ರಾಮದ ಶಿರ್ವಾ ಮಸೀದಿ ಜಂಕ್ಷನ್‌ ಬಳಿ   ಸಿಬ್ಬಂದಿಯವರ ಸಹಾಯದಿಂದ ಸಾರ್ವಜನಿಕ ರಸ್ತೆಯಲ್ಲಿ ವಾಹನ ತಪಾಸಣೆಯಲ್ಲಿರುತ್ತಾ  ಅಗತ್ಯ ವಸ್ತುಗಳ ಖರೀದಿ ಬಗ್ಗೆ ಸರಕಾರ ನಿಗದಿಪಡಿಸಿದ ಸಮಯ ಅವಕಾಶದ ಬಳಿಕವೂ ಅನಗತ್ಯವಾಗಿ  ವಾಹನಗಳಲ್ಲಿ ಸಂಚರಿಸುತ್ತಿರುವವರ ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸಿ ಪರಿಶೀಲಿಸಿದಲ್ಲಿ 1)ಕೆಎ 20 ಇಬಿ 487ನೇ ಕೆಂಪು ಬಣ್ಣದ ಪಲ್ಸರ್‌ಮೋಟಾರ್‌ಸೈಕಲ್‌ಸವಾರ  ಸಫಾನ್‌(28) ತಂದೆ: ಉಸ್ಮಾನ್‌, ವಾಸ: ಶಿರ್ವ ಮಸೀದಿ ಬಳಿ,  ಶಿರ್ವಾ ಅಂಚೆ ಮತ್ತು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ, ಹಾಗೂ ಹಿಂಬದಿ ಸವಾರ ಶಹನಾಜ್‌(26), ತಂದೆ: ಉಸ್ಮಾನ್‌ಬಾವಾ. ವಾಸ: ಶಬ್ನಂ ಮಂಜಿಲ್‌, ಶಿರ್ವ ಮಸೀದಿ ಬಳಿ,  ಶಿರ್ವಾ ಅಂಚೆ ಮತ್ತು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ  , 2) ಕೆಎ 20 ಇಬಿ 3734ನೇ ಕೆಂಪು ಬಣ್ಣದ ಸ್ಕೂಟಿ ದ್ವಿಚಕ್ರ ವಾಹನ ಸವಾರ ಮಹಮ್ಮದ್‌‌ ಆಸೀಫ್‌(29), ತಂದೆ: ಮೊಹಮ್ಮದ್ ಇಕ್ಬಾಲ್‌,  ವಾಸ: ಶಿರ್ವ ಮಸೀದಿ ಬಳಿ,  ಶಿರ್ವಾ ಅಂಚೆ ಮತ್ತು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ   ಎಂದು ತಿಳಿಸಿದ್ದು, ಅವರ ಓಡಾಟದ ಕಾರಣವನ್ನು ವಿಚಾರಿಸಲಾಗಿ ಯಾವುದೇ ತುರ್ತು ಕಾರಣವಿಲ್ಲದೇ ಅನಗತ್ಯವಾಗಿ ಸಂಚರಿಸುತ್ತಿರುವುದು ಕಂಡು ಬಂದಿರುತ್ತದೆ. ಆರೋಪಿಯು ಘನ ಕರ್ನಾಟಕ ಸರಕಾರ ಕೋವಿಡ್‌ ಮಹಾಮಾರಿ ಕೊರೋನಾ ಸೋಂಕನ್ನು ತಡೆಯುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ಇದ್ದರೂ ಕೂಡಾ ಅನಗತ್ಯವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದೂ ಕೂಡಾ ನಿರ್ಲಕ್ಷತನದಿಂದ ಕೋವಿಡ್‌ನಿಯಮ ಉಲ್ಲಂಘಿಸಿ ಅನಗತ್ಯವಾಗಿ ವಾಹನದಲ್ಲಿ ಸಂಚರಿಸುತ್ತಿರುವುದಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 33/2021 , ಕಲಂ: 269 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಹೆಬ್ರಿ: ದಿನಾಂಕ 24/05/2021 ರಂದು ಮಹೇಶ ಟಿ.ಎಂ, ಪೊಲೀಸ್ ಉಪನಿರೀಕ್ಷಕರು, ಹೆಬ್ರಿ ಪೊಲೀಸ್ ಠಾಣೆ ಇವರು ಹೆಬ್ರಿ ತಾಲೂಕು ಸಿಬ್ಬಂದಿಯವರೊಂದಿಗೆ ರೌಂಡ್ಸ್ ನಲ್ಲಿರುವಾಗ ಅವರಿಗೆ ಬಂದ ಮಾಹಿತಿಯಂತೆ ರಾತ್ರಿ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಕಾಳಾಯಿ ಎಂಬಲ್ಲಿಗೆ ತಲುಪಿ ನೋಡಿದಾಗ ಓರ್ವ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮದ್ಯದ ಪ್ಯಾಕೆಟ್ ಗಳನ್ನು ಇಟ್ಟುಕೊಂಡು ಬಂದ ವ್ಯಕ್ತಿಗಳಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಆರೋಪಿತ ಉಪೇಂದ್ರ ನಾಯಕ್ (48), ತಂದೆ: ದಿ.ಕೃಷ್ಣ ನಾಯಕ್, ವಾಸ: ಮುಳ್ಳುಗುಡ್ಡೆ ಕಾಳಾಯಿ ಶಿವಪುರ ಗ್ರಾಮ ಹೆಬ್ರಿ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು ಆತನಲ್ಲಿ ಮದ್ಯವನ್ನು ಮಾರಾಟ ಮಾಡಲು ಮತ್ತು ಸ್ವಾದೀನದಲ್ಲಿ ಇಟ್ಟು ಕೊಳ್ಳಲು ಪರವಾನಿಗೆ ಇದೆಯೇ ಎಂದು ಕೇಳಿದಾಗ ಇಲ್ಲವೆಂದು ತಿಳಿಸಿರುತ್ತಾನೆ ಆತನ ಬಳಿ ಇದ್ದ ಪ್ಲಾಸ್ಟಿಕ್ ಚೀಲದಲ್ಲಿದ್ದ ಸುಮಾರು 1300/- ರೂಪಾಯಿ ಮೌಲ್ಯದ  ವಿವಿಧ ರೀತಿಯ 1) Mysore Lancer Whisky ಎಂದು ಬರೆದಿರುವ ಮದ್ಯ ತುಂಬಿರುವ 180 ML ನ ಪ್ಯಾಕೆಟ್ ಒಟ್ಟು 3, ಮತ್ತು 2) Original Choice Deluxe  Whisky ಎಂದು ಬರೆದಿರುವ ಮದ್ಯ ತುಂಬಿರುವ 180 ML ನ ಪ್ಯಾಕೆಟ್ ಒಟ್ಟು 5   3) Original Choice Deluxe  Whisky ಎಂದು ಬರೆದಿರುವ ಮದ್ಯ ತುಂಬಿರುವ 90 ML ನ ಪ್ಯಾಕೆಟ್ ಒಟ್ಟು 9, 4) Mysore Lancer Whisky ಎಂದು ಬರೆದಿರುವ ಮದ್ಯ ತುಂಬಿರುವ 90 ML ನ ಪ್ಲಾಸ್ಟಿಕ್ ಬಾಟಲ್ ಒಟ್ಟು 12, ಹಾಗೂ ಮದ್ಯ ಮಾರಾಟದಿಂದ ಸಂಗ್ರಹವಾದ ನಗದು 250/- ರೂಪಾಯಿ ಮತ್ತು ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ-1 ಇವುಗಳನ್ನು ಸ್ವಾದೀನಪಡಿಸಿಕೊಂಡು ಆರೋಪಿತನು ಕೋವೀಡ್ -19 ವೈರಸ್ ಬಗ್ಗೆ ಮಾನ್ಯ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದ ಲಾಕ್ ಡೌನ್ ಆದೇಶವನ್ನು ಉಲ್ಲಂಘನೆ ಮಾಡಿ ಮದ್ಯವನ್ನು ಸಂಗ್ರಹ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 32/2021 ಕಲಂ: 269 ಐಪಿಸಿ ಕಲಂ: 32, 34 KE ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.    

ಇತ್ತೀಚಿನ ನವೀಕರಣ​ : 25-05-2021 10:50 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080