ಅಭಿಪ್ರಾಯ / ಸಲಹೆಗಳು

 ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 14/05/2022 ರಂದು ಬೆಳಿಗ್ಗೆ  08:30  ಗಂಟೆಗೆ ಕುಂದಾಪುರ  ತಾಲೂಕಿನ, ಕುಂಭಾಶಿ ಗ್ರಾಮದ  ಬನ್ಸಾಲೆ ಬೆಟ್ಟು ಚಿಕ್ಕಯ್ಯ ಪೂಜಾರಿಯವರ ಮನೆಯ ಹತ್ತೀರ ಕಾಂಕ್ರೀಟ ರಸ್ತೆಯಲ್ಲಿ ಆಪಾದಿತ ಮಾಧವ ಎಂಬುವವರು KA-20-AA-5862  ನೇ  ಆಟೋರೀಕ್ಷಾವನ್ನು ಕುಂಭಾಶಿ ಕಡೆಯಿಂದ  ಕೊರವಾಡಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲ ಬದಿಗೆ  ಚಾಲನೆ ಮಾಡಿಕೊಂಡು ಬಂದು ಕೊರವಾಡಿ ಕಡೆಯಿಂದ ಕುಂಭಾಶಿ ಕಡೆಗೆ ಬರುತ್ತಿದ್ದ ಪಿರ್ಯಾದಿದಾರಾದ ಸುಶಾಂತ್ (20), ತಂದೆ: ಸಂಜೀವ, ವಾಸ:  ಕೇರಿಮನೆ ಮಾತಾಶಕ್ತ ನಿಲಯ ಕೊರವಾಡಿ ಕುಂಭಾಶಿ ಗ್ರಾಮ ಕುಂದಾಪುರ ತಾಲೂಕು ಇವರ KA-19-EB-0441  ನೇ ಮೊಟಾರ್  ಸೈಕಲ್ಗೆ ಎದುರುಗಡೆಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದು ಪಿರ್ಯಾದಿದಾರರಿಗೆ ಬಲ ಕೈ ,ಎದೆಗೆ ಒಳನೋವು ಹಾಗೂ ಬಲ ಕಾಲಿಗೆ ತರಚಿದ ಗಾಯವಾಗಿ ಕುಂದಾಪುರದ ನ್ಯೂ ಮೇಡಿಕಲ್ ಆಸ್ಪತ್ರೆಯಲ್ಲಿ  ಪ್ರಥಮ ಚಿಕಿತ್ಸೆ ಪಡೆದುಕೊಂಡು ಹೆಚ್ಚಿನ ಚಿಕಿತ್ಸೆ ಬಗ್ಗೆ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 68/2022 ಕಲಂ: 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಮಟ್ಕಾ ಜುಗಾರಿ ಪ್ರಕರಣ

  • ಹಿರಿಯಡ್ಕ: ದಿನಾಂಕ 25/05/2021 ರಂದು ಅನಿಲ್ ಬಿ ಎಂ, ಪೊಲೀಸ್ ಉಪನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಮುತ್ತುರ್ಮೆ ಸಾರ್ವಜನಿಕ  ಬಸ್ ನಿಲ್ದಾಣದ ಹಿಂಭಾಗ ಒಬ್ಬ  ವ್ಯಕ್ತಿ ಮಟ್ಕ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟಕ್ಕೆ ನಡೆಸುತ್ತಿದ್ದ ಸತೀಶ್ ನಾಯ್ಕ್ (47), ತಂದೆ: ದಿ: ನಾರಾಯಣ ನಾಯ್ಕ್, ವಾಸ: ಲಕ್ಷ್ಮಿ ನಿಲಯ ಮುತ್ತುರ್ಮೆ ಪೆರ್ಡೂರು ಅಂಚೆ ಮತ್ತು ಗ್ರಾಮ ಉಡುಪಿ ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದು ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 980/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1,  ಬಾಲ್‌ಪೆನ್‌-1 ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 27/2022 ಕಲಂ : 78 (i)(iii)ಕೆ ಪಿ  ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.      

ಇತರ ಪ್ರಕರಣ

  • ಮಣಿಪಾಲ: ದಿನಾಂಕ 25/05/2022 ರಂದು ರಾಜಶೇಖರ್‌ ವಂದಲಿ, ಪೊಲೀಸ್ ಉಪನಿರೀಕ್ಷಕರು, ಮಣಿಪಾಲ ಠಾಣೆ ಇವರು ಕರ್ತವ್ಯದಲ್ಲಿದ್ದಾಗ  ಬೆಳಿಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನನಗರದಲ್ಲಿನ ಸಾರ್ವಜನಿಕ  ಸ್ಥಳದಲ್ಲಿ ಆರೋಪಿ ಸಚಿನ್‌ ಯಮುನಪ್ಪ ಹಾಲನ್ನವರ್‌ (20), ತಂದೆ: ಯಮುನಪ್ಪ, ಹಾಲಿ ವಾಸ:ಕೊಳಲಗಿರಿ, ಚರ್ಚ್‌ ಬಳಿ ಉಪ್ಪೂರು ಗ್ರಾಮ ಮತ್ತು ಪೋಸ್ಟ್‌, ಉಡುಪಿ,ಖಾಯಂ ವಿಳಾಸ: ಗುಳೆದಗುಡ್ಡ, ಮೂಕೇಶ್ವರಿ ದೇವಸ್ಥಾನದ ಬಳಿ, ಬಾದಾಮಿ ತಾಲೂಕು, ಬಾಗಲಕೋಟೆ ಜಿಲ್ಲೆ ಎಂಬಾತನು  ಅಮಲಿನಲ್ಲಿರುವುದು ಕಂಡು ಬಂದಿದ್ದು, ಆತನು ಗಾಂಜಾವನ್ನು ಸೇವಿಸಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಆತನನ್ನು ವಿಚಾರಣೆ ನಡೆಸಿದಾಗ ಆತನು ಮಾತನಾಡಲು ತೊದಲುತ್ತಿದ್ದು  ಆತನ ಬಾಯಿಯಿಂದ ಗಾಂಜಾದ ಘಾಟು ವಾಸನೆ ಬರುತ್ತಿದ್ದ ಕಾರಣ ಆತನನ್ನು  ವಶಕ್ಕೆ ಪಡೆದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ  ವೈದ್ಯರ ಮುಂದೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿ ಗಾಂಜಾವನ್ನು  ಸೇವಿಸಿದ ಬಗ್ಗೆ ಮಣಿಪಾಲ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗದ ವೈದ್ಯರು ದೃಢ ಪತ್ರ ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 73/2022 ಕಲಂ: 27 (B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಮಣಿಪಾಲ: ದಿನಾಂಕ 25/05/2022 ರಂದು ರಾಜಶೇಖರ್‌ ವಂದಲಿ, ಪೊಲೀಸ್ ಉಪನಿರೀಕ್ಷಕರು, ಮಣಿಪಾಲ ಠಾಣೆ ಇವರು ರೌಂಡ್ಸ್  ಕರ್ತವ್ಯದಲ್ಲಿದ್ದಾಗ ಬೆಳಿಗ್ಗೆ  ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ಮಣಿಪಾಲ ವಿದ್ಯಾರತ್ನನಗರದಲ್ಲಿನ, ಸಾರ್ವಜನಿಕ  ಸ್ಥಳದಲ್ಲಿ ಆರೋಪಿ ಪ್ರೇಮನಾಥ್ @ರೇವು (21) , ಸುಭಾಷ್ ನಗರ, ಕುರಕಾಲು, ಉಡುಪಿ ಎಂಬಾತ ಅಮಲಿನಲ್ಲಿರುವುದು ಕಂಡು ಬಂದಿದ್ದು, ಆತನು ಗಾಂಜಾವನ್ನು ಸೇವಿಸಿರುವ ಬಗ್ಗೆ ಅನುಮಾನ ಬಂದ ಮೇರೆಗೆ ಆತನನ್ನು ವಿಚಾರಣೆ ನಡೆಸಿದಾಗ ಆತನು ಮಾತನಾಡಲು ತೊದಲುತ್ತಿದ್ದು  ಆತನ ಬಾಯಿಯಿಂದ ಗಾಂಜಾದ ಘಾಟು ವಾಸನೆ ಬರುತ್ತಿದ್ದ ಕಾರಣ ಆತನನ್ನು  ವಶಕ್ಕೆ  ಪಡೆದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ  ವೈದ್ಯರ ಮುಂದೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು , ಆರೋಪಿ ಗಾಂಜಾವನ್ನು  ಸೇವಿಸಿದ ಬಗ್ಗೆ ಮಣಿಪಾಲ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗದ ವೈದ್ಯರು ದೃಢ ಪತ್ರ ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 72/2022 ಕಲಂ: 27 (B) NDPS Act ರಂತೆ ಪ್ರಕರಣ ದಾಖಲಾಗಿರುತ್ತದೆ.
  • ಶಿರ್ವಾ: ದಿನಾಂಕ 25/05/2022 ರಂದು ಬೆಳಗ್ಗೆ 08:30  ಗಂಟೆಗೆ ಕಾಪು ತಾಲೂಕು ಶಿರ್ವಾ ಗ್ರಾಮದ ಶಿರ್ವ ಮಸೀದಿಯ ಬಳಿ ಇರುವ  ಸಾರ್ವಜನಿಕ  ಬಸ್ಸು ನಿಲ್ದಾಣದ  ಬಳಿ ಆಪಾದಿತನು ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಮೊಹಮ್ಮದ್ ನಿಸ್ಸಾರ್(34), ತಂದೆ: ಆದಾಮ್  ವಾಸ: ವಿನಯನಗರ ಬೆಳಪು ಅಂಚೆ ಮತ್ತು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು,ಆಪಾದಿತನು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿರುವುದಾಗಿದೆ. ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 29/2022, ಕಲಂ: 27(B) NDPS Act ರಂತೆ ಪ್ರಕರಣ ದಾಖಲಾಗಿರುತ್ತದ.  

ಇತ್ತೀಚಿನ ನವೀಕರಣ​ : 25-05-2022 06:15 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080