ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಮಲ್ಪೆ: ಪಿರ್ಯಾದಿದಾರರಾದ ಪ್ರಶಾಂತ, ತಂದೆ: ಶೇಖರ, ವಾಸ: ರಾಜೀವ ನಗರ  5 ನೇ ಕ್ರಾಸ್  ನೇಜಾರು ,ಮೂಡುತೋನ್ಸೆ ಗ್ರಾಮ ಇವರು ದಿನಾಂಕ 23/10/2022 ರಂದು ಬೆಳಿಗ್ಗೆ 10:15   ಗಂಟೆಗೆ   KA-20-U-6520 ದ್ವಿಚಕ್ರ  ವಾಹನದಲ್ಲಿ ಮಲ್ಪೆ ಕಡೆಯಿಂದ ಕೊಡವೂರು  ಪಾಳೆಕಟ್ಟೆಯ ಪಿರ್ಯಾದಿದಾರರ ಮನೆಗೆ ಬರುತ್ತಿರುವಾಗ  ಪಾಳೆಕಟ್ಟೆ ಬಬ್ಬುಸ್ವಾಮಿ  ದೇವಸ್ಥಾನದಲ್ಲಿ ತಿರುವಿನ ಮುಂಭಾಗದಲ್ಲಿ  ಎದುರಿನಿಂದ KA-20-AA-8604  ನೇ ಆಟೋ ರಿಕ್ಷಾ ಚಾಲಕ  ಅತೀ ವೇಗದಿಂದ ಬಂದು  ಪಿರ್ಯಾದಿದಾರರ  ಮೋಟಾರು ಸೈಕಲ್ ನ ಬಲಬದಿಗೆ ರಭಸವಾಗಿ ಢಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ರಸ್ತೆಗೆ ಬಿದ್ದಿದ್ದು, ಪಿರ್ಯಾದಿದಾರರ ಬಲಕಾಲು ಜಖಂಗೊಂಡಿರುತ್ತದೆ.  ಢಿಕ್ಕಿ ಹೊಡೆದ ರಿಕ್ಷಾ ಚಾಲಕ ಪಿರ್ಯಾದಿದಾರರನ್ನು ಆರೈಕೆ ಮಾಡಿರುತ್ತಾರೆ . ಪಿರ್ಯಾದಿದಾರರು  ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದು,ಆಟೋ ರಿಕ್ಷಾ ಚಾಲಕ ಮೊದಲು ಆಸ್ಪತ್ರೆಯ ಖರ್ಚು ವೆಚ್ಚವನ್ನು ನೋಡಿಕೊಳ್ಳುವುದಾಗಿ ಹೇಳಿ ನಂತರಲ್ಲಿ ಕೊಡವುದಿಲ್ಲ ಎಂದು  ಹೇಳಿದ್ದರಿಂದ ದೂರು ನೀಡಿರುವುದಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 87/2022 ಕಲಂ: 279, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.  

ಇತ್ತೀಚಿನ ನವೀಕರಣ​ : 26-10-2022 09:21 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080