ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ: ಪಿರ್ಯಾದಿದಾರರಾದ ಶಶಿಧರ ದೇವಾಡಿಗ ( 44) ,ತಂದೆ:ದಿ ಜಗನ್ನಾಥ ದೇವಾಡಿಗ, ವಾಸ: ಹುಣ್ಸೆಕಟ್ಟೆ ದರ್ಖಾಸು ಮನೆ ಕಲ್ಯಾ ಅಂಚೆ ನಿಟ್ಟೆ ಗ್ರಾಮ ಕಾರ್ಕಳ ತಾಲೂಕು ಉವರ ನೆರೆಮನೆಯವರಾದ ಸದಾನಂದ ಶೆಟ್ಟಿ ಪ್ರಾಯ 45 ವರ್ಷ ಎಂಬುವವರು ಕ್ಯಾಟರಿಂಗ್ ವ್ಯವಹಾರ ಮಾಡಿಕೊಂಡಿದ್ದು, ದಿನಾಂಕ 26/05/2023 ರಂದು ಸದಾನಂದ ಶೆಟ್ಟಿರವರ ಸಂಭಂಧಿಕರ ಮನೆಯಾದ ಶಿರ್ಲಾಲ್ ಎಂಬಲ್ಲಿ ಕಾರ್ಯಕ್ರಮಕ್ಕೆ ಹೋದ ಸದಾನಂದ ಶೆಟ್ಟಿರವರು ಅವರ ಮಗ ಸ್ಪರ್ಷ್ (13) ನನ್ನು ಹಿಂಬದಿ ಸವಾರನಾಗಿ ಕುಳ್ಳಿರಿಸಿಕೊಂಡು ಅವರ ಇಲೆಕ್ಟ್ರಿಕ್ ಸ್ಕೂಟರ್ KA-20-HA-5626 ರಲ್ಲಿ ಶಿರ್ಲಾಲ್ ನಿಂದ ನಿಟ್ಟೆಗೆ ರಾಜ್ಯ ಹೆದ್ದಾರಿಯಲ್ಲಿ ಹೆಬ್ರಿ –ಕಾರ್ಕಳ ರಸ್ತೆಯಲ್ಲಿ ಕಾರ್ಕಳ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಾ ರಾತ್ರಿ 10:30 ಗಂಟೆಗೆ ಹಿರ್ಗಾನ ಗ್ರಾಮದ ಬಿ ಎಮ್ ಶಾಲೆಯ ಬಳಿ ತಲುಪುವಾಗ ಯಾವುದೋ ಪ್ರಾಣಿಯೊಂದು ರಸ್ತೆಯಲ್ಲಿ ಅಡ್ಡ ಬಂದ ಕಾರಣ ಅತೀವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್ ಸವಾರಿ ಮಾಡುತ್ತಿದ್ದ ಸದಾನಂದ ಶೆಟ್ಟಿರವರು ಸ್ಕೂಟರ್‌ಗೆ ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್‌ನೊಂದಿಗೆ ಸದಾನಂದ ಶೆಟ್ಟಿ ಮತ್ತು ಸ್ಪರ್ಷ್ ರಸ್ತೆಗೆ ಬಿದ್ದಿದ್ದು ಅವರು ಧರಿಸಿದ್ದ ಹೆಲ್ಮೆಟ್ ಕಳಚಿ ಬಿದ್ದು ಸದಾನಂದ ಶೆಟ್ಟಿರವರಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಹಿಂಬದಿ ಸವಾರನಾದ ಸ್ಪರ್ಷ್ ನಿಗೆ ಬಲಕೈಗೆ ರಕ್ತಗಾಯವಾಗಿದ್ದು ಎಡಕೈಗೆ ತರಚಿದ ಗಾಯವಾಗಿದ್ದು ಗಾಯಾಳುಗಳನ್ನು ಕಾರ್ಕಳದ ಡಾ. ಟಿ ಎಂಎ ಪೈ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಚಿಕಿತ್ಸೆ ಕೊಡಿಸಿ ಸದಾನಂದ ಶೆಟ್ಟಿರವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಸದಾನಂದ ಶೆಟ್ಟಿರವರು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ದಿನಾಂಕ 27/05/2023 ರಂದು ಬೆಳಿಗ್ಗೆ 09:15 ಗಂಟೆಗೆ ಮೃತಪಟ್ಟಿರುತ್ತಾರೆ . ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 66/2023 ಕಲಂ 279,337, 304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಹೆಬ್ರಿ: ಫಿರ್ಯಾದಿದಾರರಾದ ಗೋಪಾಲಕೃಷ್ಣ(41), ತಂದೆ: ಸಂಕಯ್ಯ ಪೂಜಾರಿ, ವಾಸ: ಮಲ್ಲಿಕಾ ನಿಲಯ ಚಿಂಕ್ರಬೆಟ್ಟು ಬೆಳಗುಂಡಿ ಮುದ್ರಾಡಿ ಗ್ರಾಮ ಹೆಬ್ರಿ ತಾಲೂಕು ಇವರ ತಂದೆ ಸಂಕಯ್ಯ ಪೂಜಾರಿ ಪ್ರಾಯ 96 ವರ್ಷ ರವರು ಕರುಳಿಗೆ ಸಂಬಂದಿಸಿದ ಖಾಯಿಲೆಯಿಂದ ಬಳಲುತ್ತಿದ್ದರು ಈ ಬಗ್ಗೆ ಚಿಕಿತ್ಸೆ ಮಾಡಿಸಿದರೂ ಗುಣಮುಖವಾಗದ ಕಾರಣ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ದಿನಾಂಕ 27/05/2023 ರಂದು ಬೆಳಿಗ್ಗೆ ಸಮಯ ಸುಮಾರು 11:30 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯ ಮಧ್ಯಾವಧಿಯಲ್ಲಿ ಮುದ್ರಾಡಿ ಗ್ರಾಮದ ಚಿಂಕ್ರಬೆಟ್ಟು ಬೆಳಗುಂಡಿ ಎಂಬಲ್ಲಿರುವ ಮೃತರಿಗೆ ಸಂಭಂದಿಸಿದ ಜಾಗದಲ್ಲಿರುವ ಗೇರು ಮರದ ಕೊಂಬೆಗೆ ನೈಲಾನ್‌ ಹಗ್ಗವನ್ನು ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 17/2023 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 27-05-2023 07:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080