ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕುಂದಾಪುರ: ದಿನಾಂಕ 27/07/2021 ರಂದು ಮಧ್ಯಾಹ್ನ 12:30 ಗಂಟೆಗೆ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮದ ಆನೆಗುಡ್ಡೆ ಶ್ರೀ ವಿನಾಯಕ ಸ್ವಾಗತ ಗೋಪುರದ ಬಳಿ ಪಶ್ಚಿಮ ಬದಿಯ NH 66  ರಸ್ತೆಯಲ್ಲಿ,  ಆಪಾದಿತ ತ್ಯಾಗರಾಜ್‌‌ ಎಂಬುವವರು KA-15-Q-7299ನೇ ಬೈಕಿನಲ್ಲಿ  ಸ್ವಾಮಿ ಎಂಬುವವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ತೆಕ್ಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ  ಚಾಲನೆ ಮಾಡಿಕೊಂಡು ಬಂದು ಅದೇ ದಿಕ್ಕಿನಲ್ಲಿ ಆನಂದ ಎಂಬುವವರು KA-20-EC-8178ನೇ ಬೈಕಿನಲ್ಲಿ ಪಿರ್ಯಾದಿದಾರರಾದ ಶ್ರಿಮತಿ ಲಲಿತಾ (34), ಗಂಡ: ಆನಂದ, ವಾಸ: ರುಕ್ಮಿಣಿ ನಿವಾಸ,ಕೋಡಿ ಹೊಸ ಬೆಂಗ್ರೆ,ಕೋಡಿ ಕನ್ಯಾನ ಗ್ರಾಮ ಬ್ರಹ್ಮಾವರ ತಾಲೂಕು ಮತ್ತು  3 ವರ್ಷದ ಆರುಷ್‌ ಎಂಬುವವರನ್ನು ಸಹ ಸವಾರರಾಗಿ  ಕುಳ್ಳಿರಿಸಿಕೊಂಡು ಸವಾರಿ ಮಾಡಿಕೊಂಡು ಬಂದು NH 66   ರಸ್ತೆಯಿಂದ  ರಸ್ತೆಯ ಬಲಬದಿಗೆ ಅಂದರೆ ಪೂರ್ವ ಬದಿಯ  ದೇವಸ್ಥಾನದ ಕಡೆಗೆ ತಿರುಗಿಸುವ ಸಮಯ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಆನಂದರವರಿಗೆ ಬಲಕಾಲಿಗೆ ಒಳಜಖಂ , ಎರಡೂ ಕೈಗಳಿಗೆ  ತರಚಿದ ಗಾಯ,  ಆರುಷ್‌ಗೆ ಹಣೆಗೆ ಹಾಗೂ ಮೇಲ್‌ ತುಟಿಗೆ ಗಾಯ, ತ್ಯಾಗರಾಜ್‌‌ರವರಿಗೆ ಕೈ ಕಾಲುಗಳಿಗೆ ಮತ್ತು ಸ್ವಾಮಿಯವರಿಗೆ ತಲೆಗೆ ಒಳಜಖಂ ಗಾಯವಾಗಿದ್ದು, ಗಾಯಗೊಂಡ ಆನಂದವರು ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ  ದಾಖಲಾಗಿದ್ದು,  ಆರುಷ್‌ ಹಾಗೂ ಆಪಾದಿತ ತ್ಯಾಗರಾಜ್‌‌  ಕೊಟೇಶ್ವರ ಎನ್‌. ಆರ್‌ ಆಚಾರ್ಯ  ಆಸ್ಪತ್ರೆಯಲ್ಲಿ  ಚಿಕಿತ್ಸೆ  ಪಡೆದಿದ್ದು, ಸ್ವಾಮಿ ಎಂಬುವವರು ಕೊಟೇಶ್ವರ ಎನ್‌. ಆರ್‌ ಆಚಾರ್ಯ  ಆಸ್ಪತ್ರೆಯಲ್ಲಿ  ಪ್ರಥಮ ಚಿಕಿತ್ಸೆ  ಪಡೆದು ಹೆಚ್ಚಿನ ಚಿಕಿತ್ಸೆ  ಬಗ್ಗೆ ಮಣಿಪಾಲ  ಕೆ.ಎಂಸಿ  ಆಸ್ಪತ್ರೆಗೆ  ಹೋಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 61/2021 ಕಲಂ: 279, 337, 338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ

  • ಹೆಬ್ರಿ: ದಿನಾಂಕ 27/07/2021 ರಂದು ಬೆಳಿಗ್ಗೆ 09:30 ಗಂಟೆಯಿಂದ ಬೆಳಿಗ್ಗೆ 11:30 ಗಂಟೆಯ ಮದ್ಯಾವಧಿಯಲ್ಲಿ ಎಸ್ ಪುರಂದರ ಹೇರಳೆ (61), ವಾಸ: ಮುರ್ಸೆ ಕಾಸನಮಕ್ಕಿ ನಾಡ್ಪಾಲು ಗ್ರಾಮ ಹೆಬ್ರಿ ತಾಲೂಕು ಇವರಿಗೆ ಸಂಬಂಧಿಸಿದ ತೋಟದ ಕರೆಯ ಬಳಿವಿರುವ ಕೃಷಿಗೆ ಅಳವಡಿಸಿದ ಪಂಪ್ ಶೆಡ್ ನ್ನು ಪರೀಕ್ಷಿಸಲು ಹೋದವರು ಅವರ ಕಾಲು ಅಕಸ್ಮಿಕವಾಗಿ ಜಾರಿದ ಪರಿಣಾಮ ಅವರು ಕೆರೆಗೆ ಬಿದ್ದು ಮುಳುಗಿ ಉಸಿರು ಕಟ್ಟಿ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 24/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ .
  • ಕುಂದಾಪುರ: ದಿನಾಂಕ 27/07/2021 ರಂದು 10:00 ಗಂಟೆಯಿಂದ 12:00 ಗಂಟೆಯ ಮದ್ಯಾವಧಿಯಲ್ಲಿ ಸುಧಾಕರ ಐತಾಳ (45) ಎಂಬುವವರು ಅವರ ಮನೆಯ ಬೆಡ್ ರೂಮಿನಲ್ಲಿ ತಾರಸಿಯ ಕಬ್ಬಿಣದ ಕೊಂಡಿಗೆ ನೈಲಾನ್ ರೋಪ್ ನಿಂದ  ಕುತ್ತಿಗೆಗೆ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಸುಧಾಕರ ಐತಾಳರವರು ಆರ್ಥಿಕ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 27/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ .

ಜುಗಾರಿ ಪ್ರಕರಣ

  • ಕುಂದಾಪುರ: ದಿನಾಂಕ 24/07/2021 ರಂದು ಶ್ರೀಕಾಂತ ಕೆ, ಪೊಲೀಸ್ ಉಪಾಧೀಕ್ಷಕರು, ಕುಂದಾಪುರ  ಉಪ ವಿಭಾಗ ಇವರಿಗೆ ಕುಂದಾಪುರ ತಾಲೂಕು ತಲ್ಲೂರು ಗ್ರಾಮದ ಮಾರನ ಮನೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್ ಬಾಹರ್ ಇಸ್ಪೀಟು ಆಟವಾಡುತ್ತಿದ್ದಾರೆಂದು ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ  1) ನಾರಾಯಣ ದೇವಾಡಿಗ (40), ತಂದೆ: ದಿ. ರಾಮ, ವಾಸ: ಮಾರನಮನೆ, ಉಪ್ಪಿಕುದ್ರು ರಸ್ತೆ, ತಲ್ಲೂರು ಗ್ರಾಮ, ಕುಂದಾಪುರ ತಾಲೂಕು, 2) ರಮೇಶ ದೇವಾಡಿಗ (36), ತಂದೆ: ದಿ. ಸಂಜೀವ ದೇವಾಡಿಗ,  ವಾಸ: ಮಾರನಮನೆ, ಉಪ್ಪಿಕುದ್ರು ರಸ್ತೆ, ತಲ್ಲೂರು ಗ್ರಾಮ, ಕುಂದಾಪುರ ತಾಲೂಕು, 3) ಭಾಸ್ಕರ ದೇವಾಡಿಗ (53), ತಂದೆ: ದಿ. ಸಣ್ಣ  ದೇವಾಡಿಗ,  ವಾಸ: ಮಾರನಮನೆ, ಉಪ್ಪಿಕುದ್ರು ರಸ್ತೆ, ತಲ್ಲೂರು ಗ್ರಾಮ, ಕುಂದಾಪುರ ತಾಲೂಕು ಇವರನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆದು ಆರೋಪಿತರು ಇಸ್ಪೀಟು ಜುಗಾರಿ ಆಟಕ್ಕೆ ಉಪಯೋಗಿಸಿದ ನಗದು ರೂಪಾಯಿ 1250/, ಹಳದಿ ಬಣ್ಣದ ಪಾಲೀಥೀನ್ ಚೀಲ-1, ಇಸ್ಪೀಟು ಎಲೆಗಳು-52, ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 92/2021 ಕಲಂ: 87 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.
      

ಇತ್ತೀಚಿನ ನವೀಕರಣ​ : 28-07-2021 09:43 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080