ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ

  • ಕಾರ್ಕಳ:" ಪಿರ್ಯಾದಿ ಶೀನ, ಪ್ರಾಯ: 66 ವರ್ಷ, ತಂದೆ:ಪೊಡಂಕಿಲ, ವಾಸ: ಮೇಲ್ಜಡ್ಡು, ಮುಗೇರಕಳ ಬಳಿ, ಕುಕ್ಕುಂದೂರು ಅಂಚೆ ಮತ್ತು ಗ್ರಾಮ, ಇವರು ನಿನ್ನೆ ದಿನಾಂಕ: 29.10.2022 ರಂದು ಸಂಜೆ ಮನೆಯಿಂದ ಮೆಯಲು ಬಿಟ್ಟಿದ್ದ ದನಗಳನ್ನು ಕರೆದುಕೊಂಡು ಬರಲು ಹೊರಟು ಕಾರ್ಕಳ ಕಡೆಯಿಂದ ಬೈಲೂರು ಕಡೆಗೆ ಸಾಗಿರುವ ರಾಜ್ಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಾ ಸಮಯ ಸುಮಾರು ಸಂಜೆ 05:45 ಗಂಟೆಗೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಸ್ವಯಂ ಪ್ರಭಾ ಗೇರು ಬೀಜ ಪ್ಯಾಕ್ಟರಿ ಬಳಿ ತಲುಪುವಾಗ ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ KA18EH8151 ನೇ ನೋಂದಣಿ ಸಂಖ್ಯೆಯ ಬಜಾಜ್ ಕಂಪೆನಿಯ ಮೋಟಾರ್ ಸೈಕಲ್ ನ್ನು ಅದರ ಸವಾರ ಲೋಯಲ್ ಎಂಬಾತನು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ರಸ್ತೆಯ ತೀರಾ ಎಡಬದಿಗೆ ಸವಾರಿ ಮಾಡಿ ಪಿರ್ಯಾದಿದಾರರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ಡಾಮಾರು ರಸ್ತೆಗೆ ಮಗುಚಿ ಬಿದ್ದು, ಪಿರ್ಯಾದಿದಾರರ ತಲೆಯ ಹಿಂಬದಿಗೆ, ಹಣೆಗೆ, ಬಲಕಾಲಿನ ತೊಡೆಗೆ, ಕೆಳತುಟಿಗೆ, ತರಚಿದ ರಕ್ತಗಾಯವಾಗಿರುತ್ತದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ  135/2022 ಕಲಂ  279, 337 ಐಪಿಸಿ.  ಯಂತೆ ಪ್ರಕರಣ ದಾಖಲಿಸಿರುತ್ತಾರೆ.

ಇತ್ತೀಚಿನ ನವೀಕರಣ​ : 30-10-2022 06:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080