ಅಭಿಪ್ರಾಯ / ಸಲಹೆಗಳು

ಅಸ್ವಾಭಾವಿಕ ಮರಣ ಪ್ರಕರಣ

  • ಕುಂದಾಪುರ: ಪಿರ್ಯಾದಿದಾರರಾದ ದಿವಾಕರ ಶೆಟ್ಟಿ (65), ತಂದೆ: ದಿ. ಗೋವಿಂದ ಶೆಟ್ಟಿ, ವಾಸ: ಶ್ರೀ ಮಂಜುನಾಥ, ಗುಮಾಸ್ತರ ಮನೆ, ಕಳಿನಬಾಗ್ಲು, ತೊಪ್ಲು, ಆನಗಳ್ಳಿ ಗ್ರಾಮ, ಕುಂದಾಪುರ ತಾಲೂಕು ಇವರ ಪತ್ನಿ ಶ್ರೀಮತಿ ವಸಂತಿ(58) ರವರು ದಿನಾಂಕ 30/05/2021 ರಂದು 22:00 ಗಂಟೆಯಿಂದ ದಿನಾಂಕ 31/05/2021 ರಂದು 05:00 ಗಂಟೆಯ ನಡುವೆ ಮನೆಯ ಎದುರಿನ ಗೊಬ್ಬರದ ಗಿಡಕ್ಕೆ ನೈಲಾನ್ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಶ್ರೀಮತಿ ವಸಂತಿರವರು ಅವರ ಮಗನ ಸಾಂಸಾರಿಕ ಜೀವನದಲ್ಲಿ ಕಲಹದ ಕಾರಣಕ್ಕಾಗಿ ಮಾನಸಿಕ ಖಿನ್ನತೆಗೊಳಗಾಗಿದ್ದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 21/2021 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಇತರ ಪ್ರಕರಣ

  • ಕೊಲ್ಲೂರು: ಮಾನ್ಯ ಕರ್ನಾಟಕ ಸರಕಾರ ಹಾಗೂ ಜಿಲ್ಲಾಡಳಿತ ದಿನಾಂಕ ದಿನಾಂಕ 24/05/2021 ರಿಂದ ದಿನಾಂಕ 07/06/2021ರ ವರೆಗೆ ಕೋವಿಡ್‌ ಕರೋನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‌ಡೌನ್‌ ಕರ್ಪ್ಯೂ ವಿಧಿಸಿದ್ದು ಕರ್ಪ್ಯೂ ಜ್ಯಾರಿಗೊಳಿಸುವ ಬಗ್ಗೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದ್ದು ದಿನಾಂಕ 31/05/2021 ರಂದು ನಾಸೀರ್ ಹುಸೈನ್ ಪಿಎಸ್‌ಐ ಕೊಲ್ಲೂರು ಪೊಲೀಸ್ ಠಾಣೆರರು ಇಲಾಖಾ ವಾಹನ ನಂಬ್ರ KA-20-G-346 ರಲ್ಲಿ ಜೀಪು ಚಾಲಕ ಪಿಸಿ 1188ನೇ ಪ್ರಶಾಂತ ಇವರೊಂದಿಗೆ ಠಾಣಾ ಸರಹದ್ದಿನ ಚಿತ್ತೂರು  ಗ್ರಾಮದ ಆಲೂರು ಕ್ರಾಸ್‌ಬಳಿ ವಾಹನ ತಪಾಸಣೆ ಕರ್ತವ್ಯದಲ್ಲಿ ಮಧ್ಯಾಹ್ನ ಸುಮಾರು 12:00 ಗಂಟೆಯಿಂದ 13:00 ಗಂಟೆಯ ತನಕ ವಾಹನ ತಪಾಸಣೆ ಮಾಡಿ ಕೊಂಡಿರುವಾಗ ಮಧ್ಯಾಹ್ನ 12:15 ಗಂಟೆಗೆ KA-20-Q-3742ನೇ ಮೋಟಾರು ಸೈಕಲ್‌ನ್ನು ಅದರ ಸವಾರ ಸುದರ್ಶನ ಎಂಬವನು ಚಲಾಯಿಸಿಕೊಂಡು ಬರುತ್ತಿದ್ದನ್ನು ಕಂಡು ನಿಲ್ಲಿಸಿ ತಪಾಸಣೆ ಮಾಡಿದಾಗ ಮೋಟಾರು ಸೈಕಲ್‌ ಸವಾರನು ಸಕಾರಣವಿಲ್ಲದೆ ಅನಗತ್ಯವಾಗಿ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿಕೊಂಡು ಬಂದಿರುವುದು ಕಂಡು ಬಂದಿರುವುದಾಗಿದೆ. ನಿರ್ಲಕ್ಷತನದಿಂದ ಸರಕಾರ ಹಾಗೂ ಜಿಲ್ಲಾಡಳಿತದ ಮಾರ್ಗ ಸೂಚಿಯಲ್ಲಿನ ನಿಯಮಗಳನ್ನು ಉಲ್ಲಂಘಿಸಿ ಜೀವಕ್ಕೆ ಅಪಾಯಕಾರವಾದಂಥ ರೋಗವು ಹರಡುವಂತೆ ಮಾಡುವ ನಿರ್ಲಕ್ಷತನ ತೋರಿರುವುದರಿಂದ ಸದ್ರಿ ಮೋಟಾರು ಸೈಕಲ್‌ನ್ನು ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 20/2021 ಕಲಂ: 269 ಐ.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ. 

ಇತ್ತೀಚಿನ ನವೀಕರಣ​ : 31-05-2021 06:30 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080