ಅಭಿಪ್ರಾಯ / ಸಲಹೆಗಳು

ಅಪಘಾತ ಪ್ರಕರಣ 

  • ಉಡುಪಿ: ಪಿರ್ಯಾದಿದಾರರಾದ ವಿವಿಯಾನ್ ಲಿಯೋನಾರ್ಡ್ ಅಮ್ಮನ್ನ(24) ,ತಂದೆ:ಲಿಂಡನ್ ಅನಿಲ್ ಕಿರಣ ಅಮ್ಮನ್ನ ,ವಾಸ: ಮನೆ ನಂ: 10-108-5 ಸ್ಟಾರ್ ಬಿಲ್ಡಿಂಗ್ ವಡಮಂಡೇಶ್ವರಿ ರಸ್ತೆ ಮಲ್ಪೆ,ಪೋಸ್ಟ್ ಆಫೀಸ್ ಬಳಿ ಕೊಡವೂರು ಗ್ರಾಮ, ಮಲ್ಪೆ ಉಡುಪಿ ಜಿಲ್ಲೆ ಇವರ ತಮ್ಮ ಲಿಯಾನ್ ವಿಲ್ಸನ್ ಅಮನ್ನಾ ( 19) ರವರು ದಿನಾಂಕ 30/08/2022 ರಂದು ಸಂಜೆ 4:50 ಗಂಟೆಗೆ ಅಂಬಲಪಾಡಿ ಗ್ರಾಮದ ಅಂಬಲಪಾಡಿ ಮಹೀಂದ್ರ ಶೋರೂಮ್ ಬಳಿ ಅಂಬಲಪಾಡಿಯಿಂದ ಕಿನ್ನಿಮುಲ್ಕಿ ಕಡೆಗೆ ಹಾದುಹೋಗಿರುವ ಸರ್ವಿಸ್ ರಸ್ತೆಯಲ್ಲಿ KA-20-EA-4485 ನೇ ಮೋಟಾರ್ ಸೈಕಲನ್ನು ಅಂಬಲಪಾಡಿ ಕಡೆಯಿಂದ ಕಿನ್ನಿಮುಲ್ಕಿ ಸ್ವಾಗತಗೋಪುರದ ಕಡೆಗೆ ಸರ್ವಿಸ್ ರಸ್ತೆಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ಮಹೀಂದ್ರ ಶೋರೂಮ್ ಬಳಿ ರಸ್ತೆಯ ಬದಿಯಲ್ಲಿದ್ದ ನೀರು ಹೋಗುವ ಚರಂಡಿಗೆ ಬೈಕ್ ಸಮೇತ ಬಿದ್ದು, ತಲೆಗೆ ಗಂಬೀರ ಸ್ವರೂಪದ ಗಾಯವಾದವರನ್ನು ಚಿಕಿತ್ಸೆಯ ಬಗ್ಗೆ ಉಡುಪಿ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದು, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಪಿರ್ಯಾದಿದಾರರ ತಮ್ಮ ಚಿಕಿತ್ಸೆಗೆ ಸ್ವಂದಿಸದೇ ಮೃತಪಟ್ಟಿರುವುದಾಗಿದೆ . ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 63/2022 ಕಲಂ: 279 ,304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
  • ಉಡುಪಿ: ಪಿರ್ಯಾದಿದಾರರಾದ ಗಣೇಶ್ ಆಚಾರಿ (30), ತಂದೆ: ಯೋಗಿಶ್ ಆಚಾರಿ ,ವಾಸ: ನೆಹರೂ ನಗರ ಮೂಡು ಅಲೆವೂರು ಅಲೆವೂರು ಗ್ರಾಮ ಕಾಪು ತಾಲೂಕು ಉಡುಪಿ ಜಿಲ್ಲೆ ಇವರು ಉಡುಪಿ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಕ್ತ ಸಂಬಂದಿಕರನ್ನು ನೋಡಿ ವಾಪಾಸು ಮನೆಗೆ ಕಡೆಗೆ ಮೋಟಾರ್ ಸೈಕಲಿನಲ್ಲಿ ರಾಹೆ-66 ರಲ್ಲಿ ಹೋಗುತ್ತಿರುವಾಗ ಸಮಯ ಸುಮಾರು ಸಾಯಾಂಕಾಲ 6:30 ಗಂಟೆಗೆ ಕೊರಂಗ್ರಪಾಡಿ ಗ್ರಾಮದ ಕೊರಂಗ್ರಪಾಡಿ ಕ್ರಾಸ್ ಬಳಿ ತಲುಪುವಾಗ ತನ್ನ ಮುಂದುಗಡೆಯಿಂದ ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ KA-20-EL-0692 ನೇ ಸ್ಕೂಟರ್ ಸವಾರ ಸ್ವಸ್ತಿಕ್ ಮೆಲೆಂಟಾ ತಾನು ಸವಾರಿ ಮಾಡುತ್ತಿದ್ದ ಸ್ಕೂಟರ್‌ನ್ನು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆಯ ತೀರಾ ಎಡಬದಿಗೆ ಬಂದು ರಸ್ತೆಯ ಬದಿಯಲ್ಲಿ ನಿಂತಿದ್ದ ಭಾನುಮತಿ ರವರಿಗೆ ಡಿಕ್ಕಿ ಹೊಡೆದ ಪರಿಣಾಮ ಭಾನುಮತಿ ರವರು ರಸ್ತೆಗೆ ಬಿದ್ದು, ಹಣೆಗೆ ರಕ್ತಗಾಯ ಹಾಗೂ ಎರಡೂ ಕಾಲುಗಳಿಗೆ ಮೂಳೆ ಮುರಿತದ ಜಖಂ ಆಗಿರುತ್ತದೆ ಅಲ್ಲದೇ ಆರೋಪಿ ಸ್ಕೂಟರ್ ಸವಾರ ಸ್ವಸ್ತಿಕ್ ಮೆಲೆಂಟಾ ರವರ ಕಾಲಿಗೆ ಕೈಗೆ ತರಚಿದ ರಕ್ತಗಾಯವಾಗಿರುತ್ತದೆ. ಭಾನುಮತಿ ರವರು ಚಿಕಿತ್ಸೆಯ ಬಗ್ಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 64/2022 ಕಲಂ: 279, 337,338 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಅಸ್ವಾಭಾವಿಕ ಮರಣ ಪ್ರಕರಣ 

  • ಕೋಟ: ಪಿರ್ಯಾದಿದಾರರಾದ ಸುರೇಶ ಶೆಟ್ಟಿ(42), ತಂದೆ: ಜಗನ್ನಾಥ್ ಶೆಟ್ಟಿ ,ವಾಸ: ಪಂಚಾಯತ್ ಕಚೇರಿ ಬಳಿ ಮೊಳಹಳ್ಳಿ ಗ್ರಾಮ ಕುಂದಾಪುರ ತಾಲೂಕು ಇವರ ತಂದೆ ಜಗನ್ನಾಥ ಶೆಟ್ಟಿ (66) ರವರು ದಿನಾಂಕ 31/08/2022 ರಂದು ಮಧ್ಯಾಹ್ನ 12:30 ಗಂಟೆಗೆ ಮನೆಯಿಂದ ಹೊರಗೆ ಹೋದವರು ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿರುವ ಕಾಟು ಮರಕ್ಕೆ ಕೇಬಲ್ ವಯರ್ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 38/2022 ಕಲಂ: 174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

 

ಇತ್ತೀಚಿನ ನವೀಕರಣ​ : 31-08-2022 06:25 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080