ಅಭಿಪ್ರಾಯ / ಸಲಹೆಗಳು

 

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ವಿಷ್ಣುವರ್ಧನ, ಐ.ಪಿ.ಎಸ್. ಇವರ ನಿರ್ದೇಶನದಲ್ಲಿ, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕುಮಾರಚಂದ್ರ ಇವರ ಮಾರ್ಗದರ್ಶನದಲ್ಲಿ, ಉಡುಪಿ ಜಿಲ್ಲಾ CEN ಅಪರಾಧ ಪೊಲೀಸ್ ಠಾಣಾ ನಿರೀಕ್ಷಕರಾದ ರಾಮಚಂದ್ರ ನಾಯಕ್ ಇವರ ಆದೇಶದಂತೆ ಉಡುಪಿ ಸೆನ್ ಠಾಣಾ ಪಿ.ಎಸ್.ಐ  ನಾರಾಯಣ ಇವರು ದಿನಾಂಕ 08-03-2021  ರಂದು ದೊರೆತ ಮಾಹಿತಿಯ ಮೇರೆಗೆ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಶಾಂತಿನಗರದ ವಸುಧಾ ಕಂಫರ್ಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ  ಆರೋಪಿಗಳಾದ 1.ಪೂರ್ಣಚಂದ್ರ ದಾಸ್, 2. ಕಮಲು ಇವರನ್ನುಬೆಳಿಗ್ಗೆ 9:30 ಗಂಟೆಗೆ ದಸ್ತಗಿರಿಗೊಳಿಸಿ, ಅವರಿಂದ ಯಾವುದೇ ಪರವಾನಿಗೆ ಇಲ್ಲದೇ, ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 2 ಕಿಲೋ, 020  ಗ್ರಾಂ ತೂಕದ ಗಾಂಜಾವನ್ನು ಮತ್ತು ಗಿರಾಕಿ ಕುದುರಿಸಲು ಬಳಸಿದ್ದ 2 ಮೊಬೈಲ್ ಪೋನ್, ಕಪ್ಪು,ನೀಲಿ ಹಾಗೂ  ಬೂದು ಬಣ್ಣ ಮಿಶ್ರಿತ ಸೊಲ್ಡರ್ ಬ್ಯಾಗ್ ಮತ್ತು 18 ಪ್ಲಾಸ್ಟಿಕ್ ತೊಟ್ಟೆ ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿದ ಗಾಂಜಾದ ಮೌಲ್ಯ ರೂಪಾಯಿ 70,000/- , ಮತ್ತು 2 ಮೊಬೈಲ್ ಹಾಂಡ್‌ ಸೆಟ್‌ ಮೌಲ್ಯ ರೂಪಾಯಿ 9,000/- ಆಗಿರುತ್ತದೆ.  

 ಈ ಬಗ್ಗೆ ಸೆನ್ ಅಪರಾಧ ಠಾಣೆಯಲ್ಲಿ  ಅ.ಕ್ರ: 19/2021 ಕಲಂ 8(c), 20 (b)(ii), (B) ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

      ಈ ಕಾರ್ಯಾಚರಣೆಯಲ್ಲಿ CEN ಪೊಲೀಸ್ ಠಾಣಾ ಪಿ.ಎಸ್.ಐ. ನಾರಾಯಣ ಹಾಗೂ ಸಿಬ್ಬಂದಿಗಳಾದ ಕೃಷ್ಣಪ್ರಸಾದ್, ಪ್ರವೀಣ, ರಾಘವೇಂದ್ರ ಉಪ್ಪೂರು, ಅರುಣ್ ಶೆಟ್ಟಿ, ಸಂಜಯ್ ರವರು  ಪಾಲ್ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 09-03-2021 10:22 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಉಡುಪಿ ಜಿಲ್ಲಾ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080